ಏ.13ರಂದು 121ಕ್ಕೂ ಹೆಚ್ಚು ವೈದಿಕರಿಂದ ರುದ್ರಪಾರಾಯಣ
ಬಂಟ್ವಾಳ: ಕಲ್ಲಡ್ಕ ಮೊಗರನಾಡು ಸಾವಿರ ಸೀಮ ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದ ವಠಾರದಲ್ಲಿ ಮೇ 2,3,4 ರಂದು ಅನ೦ತ್ ಭಟ್ ಓಣಿಬೈಲು ನೇತೃತ್ವದಲ್ಲಿ ಅತಿಮಹಾರುದ್ರ ಯಾಗ ನಡೆಯಲಿದೆ. ರಾಷ್ಟ, ರಾಜ್ಯ ಮಟ್ಟದ ಪ್ರಮುಖರು ಯಾಗದಲ್ಲಿ ಭಾಗವಹಿಸುವರು.
ವಾರಾಣಾಸಿ ಕಾಶಿಮಠ ಶ್ರೀಮದ್ ಕಾಶಿಜ್ಞಾನ ಸಿ೦ಹಾಸನಾಧೀಶ್ವರ ಶ್ರೀ 1008 ಜಗದ್ಗುರು ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಮಹಾ ಸ್ವಾಮಿಗಳ ದಿವ್ಯ ಉಪಸ್ಮಿತಿಯಲ್ಲಿ ಲೋಕ ಕಲ್ಯಾಣಾರ್ಥ ಈ ಯಾಗ ನಡೆಯಲಿದೆ. ಚಿತ್ರದುರ್ಗದ ಬಹ್ಮಾನ೦ದ ರೆಡ್ಡಿ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಸುಮಾರು ಐದು ಕೋಟಿ ರೂ. ವೆಚ್ಚದಲ್ಲಿ ಈ ಯಾಗ ನಡೆಯಲಿದೆ.
400 ಮ೦ದಿ ಋತ್ವಿಜರು, 14,641 ಸ೦ಖ್ಯೆಯಲ್ಲಿ ರುದ್ರ ಪಠಣ ಮಾಡಿ 11 ಕುಂಡಗಳಲ್ಲಿ ಹವಿಸ್ಸು ಸಮರ್ಪಣೆ ನಡೆಸುವ ಮೂಲಕ ಯಾಗ. ನಡೆಯುತ್ತದೆ. ಈ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ವೈದಿಕರಿ೦ದ ನಿತ್ಯ ರುದ್ರ ಪಾರಾಯಣ ಅನ್ನದಾನ ನಡೆಯುತ್ತಿದೆ.
ಏಪ್ರಿಲ್ 13ರಂದು ಭಾನುವಾರ 121 ಕ್ಕಿಂತಲೂ ಅಧಿಕ ರುದ್ರಾಧ್ಯಾಯಿಗಳಿಂದ ಅತಿರುದ್ರ ಪಾರಾಯಣ ನಡೆಯಲಿದೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ