- ಕರ್ನಾಟಕ ಸರಕಾರವು ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ 4500 ಕೋಟಿ ರೂ. ಅನುದಾನ ಬಿಡುಗಡೆ ಮತ್ತು ಸರಕಾರಿ ಗುತ್ತಿಗೆಯಲ್ಲಿ 4% ಮೀಸಲಾತಿ ರದ್ದುಗೊಳಿಸಿ -ಹಿಂದೂ ರಾಷ್ಟ್ರ ಸಮನ್ವಯ ಸಮಿತಿ
- ಬೆಂಗಳೂರು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ
ಬೆಂಗಳೂರು:- ಕರ್ನಾಟಕ ಸರಕಾರವು ಇತ್ತಿಚೇಗೆ ತನ್ನ ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ವಿಶೇಷವಾದ ಅನುದಾನವನ್ನು ಬಿಡುಗಡೆ ಮಾಡಿದೆ. ಈ ಹಣಕಾಸು ವಿಧೇಯಕವು ಓಲೈಕೆಯಿಂದ ಕೂಡಿದ್ದು ಅಲ್ಪಸಂಖ್ಯಾತರಿಗೆ ವಿಶೇಷ ಅನುದಾನಗಳನ್ನು ನೀಡಿ ಹಿಂದೂಗಳ ಮೇಲೆ ಅನ್ಯಾಯ ಮಾಡಲಾಗಿದೆ. ಈ ಹಣಕಾಸು ವಿಧೇಯಕವನ್ನು ರದ್ದುಗೊಳಿಸಬೇಕೆಂದು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಹಿಂದೂ ಪರಿಷತ್ ನ ವಿಕ್ರಮ್ ಶೆಟ್ಟಿ ಹಾಗೂ ಸುರೇಶ ಗೌಡ, ರಾಷ್ಟ್ರ ರಕ್ಷಣಾ ಪಡೆಯ ಪ್ರವೀಣ್, ಅಡ್ವೋಕೇಟ್ ಎ. ಶಕುಂತಲಾ ಶೆಟ್ಟಿ, ಹಿಂದೂ ಜನಜಾಗೃತಿ ಸಮಿತಿಯ ಸೌ. ಭವ್ಯ ಗೌಡ, ಅಖಿಲ ಭಾರತ ಅಸಂಘಟಿತ ಪುರೋಹಿತ ಕಾರ್ಮಿಕರ ಫೆಡರೇಶನ್ ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಡಾ. ಬಿ ಎನ್ ಮಹೇಶ್ ಕುಮಾರ್, ಹಾಗೂ ಮುಂತಾದ ಹಿಂದುತ್ವ ನಿಷ್ಠರು ಉಪಸ್ಥಿತರಿದ್ದರು.
ರಾಜ್ಯ ಸರಕಾರ ಮುಸಲ್ಮಾನ ಕಾಲೋನಿಗಳಿಗೆ 1೦೦೦ ಕೋಟಿ, ಮುಸಲ್ಮಾನ ಇಮಾಮರಿಗೆ ಮಾಸಿಕ 6೦೦೦ ರೂಪಾಯಿ ವೇತನ, ಮುಸಲ್ಮಾನ ಹೆಣ್ಣುಮಕ್ಕಳ ಮದುವೆಗೆ 5೦ ಸಾವಿರ ರೂಪಾಯಿ, ಮುಸಲ್ಮಾನ ವಿದ್ಯಾರ್ಥಿಗಳ ವಿದೇಶೀ ಶಿಷ್ಯವೇತನಕ್ಕೆ 3೦ ಲಕ್ಷ ರೂ., ಮುಸಲ್ಮಾನ ಹೆಣ್ಣುಮಕ್ಕಳಿಗೆ ಆತ್ಮ ರಕ್ಷಣೆ ತರಬೇತಿ, ವಕ್ಫ್ ಬೋರ್ಡ ಆಸ್ತಿ ರಕ್ಷಣೆಗೆ 15೦ ಕೋಟಿ ರೂ. ಅನುದಾನ, ಮುಸಲ್ಮಾನರು ಬಹುಸಂಖ್ಯಾತರಿರುವ ಪ್ರದೇಶದಲ್ಲಿ ಐಟಿಐ ಕಾಲೇಜಿಗೆ ಮಂಜೂರಾತಿ, 1೦೦ ಉರ್ದುಶಾಲೆಗಳ ಸ್ಥಾಪನೆ, ಮುಸಲ್ಮಾನ ಯುವಕರ ಸ್ಟಾರ್ಟ ಆಪಗೆ ಸರಕಾರೀ ಸಹಾಯಧನ, ಮುಸಲ್ಮಾನ ಮಕ್ಕಳಿಗೆ ವೃತ್ತಿಪರ ತರಬೇತಿ, ಹಜ್ ಭವನಕ್ಕೆ ಅನುದಾನ, ಹೀಗೆ ಸರಕಾರವು ಅಲ್ಪಸಂಖ್ಯಾತರ ಅಭಿವೃದ್ದಿ ನೆಪದಲ್ಲಿ 45೦೦ ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದೆ.
ಅದಲ್ಲದೆ ಸರಕಾರದ ಟೆಂಡರ್ ಗಳಲ್ಲಿ ಅಲ್ಪಸಂಖ್ಯಾತರಿಗೆ 4% ಮೀಸಲಾತಿ ನೀಡುವ ಮಸೂದೆಯನ್ನು ಸಹ ಮಂಡಿಸಲಾಗಿದೆ. ಭಾರತದ ಸಂವಿಧಾನದಲ್ಲಿ ಧರ್ಮಾಧಾರಿತ ಮೀಸಲಾತಿಗೆ ಅವಕಾಶವಿಲ್ಲದಿರುವಾಗಲೂ, ಸರಕಾರವು ಸಂವಿಧಾನಕ್ಕೆ ವಿರುದ್ಧವಾಗಿ ಸಂವಿಧಾನಬಾಹಿರ ಮೀಸಲಾತಿಯನ್ನು ನೀಡಿದೆ.
ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ೩೪ ಸಾವಿರ ಸೀ ಗ್ರೇಡ್ ದೇವಸ್ಥಾನಗಳ ಅರ್ಚಕರಿಗೆ ಯಾವುದೇ ಸಂಬಳ ಇಲ್ಲ. ಆದರೆ ಇಮಾಮ್ರಿಗೆ 6 ಸಾವಿರ ರೂಪಾಯಿ ಅನುದಾನ ನೀಡಲಾಗಿದೆ. ಅದಲ್ಲದೇ ಧಾರ್ಮಿಕ ದತ್ತಿ ಇಲಾಖೆಯ ಸೀ ಗ್ರೇಡ್ ನ ಸಾವಿರಾರು ದೇವಸ್ಥಾನಗಳು ಜೀರ್ಣೋದ್ದಾರ, ಸುಣ್ಣ ಬಣ್ಣ ಇಲ್ಲದೇ ಶಿಥಿಲಾವಸ್ಥೆಗೆ ತಲುಪಿವೆ. ಆದರೆ ಪ್ರಾಚೀನ ದೇವಸ್ಥಾನಗಳ ಅಭಿವೃದ್ಧಿಗಾಗಿ ಬಜೆಟ್ನಲ್ಲಿ ಯಾವುದೇ ಅನುದಾನವಿಲ್ಲ.
ಹೀಗೆ ಸರಕಾರವು ಸಾರ್ವಜನಿಕರ ತೆರಿಗೆ ಹಣವನ್ನು ಕೇವಲ ಒಂದೇ ಸಮುದಾಯದ ಅಭಿವೃದ್ಧಿಗೆ ವಿನಿಯೋಗಿಸುವುದು ಭಾರತದ ಸಂವಿಧಾನದ ಕಲಂ 14, 15 ರ ಉಲ್ಲಂಘನೆಯಾಗಿದೆ. ಹಾಗಾಗಿ ಸರಕಾರದ ಈ ವರ್ಷದ ಹಣಕಾಸು ವಿಧೇಯಕಕ್ಕೆ ಅನುಮೋದನೆ ನೀಡಬಾರದು ಎಂದು ಈ ಮನವಿಯ ಮೂಲಕ ಆಗ್ರಹಿಸಲಾಯಿತು.
-ಅಡ್ವೋಕೇಟ್ ಸುರೇಶ ಕುಮಾರ್
ಸಂಯೋಜಕರು,
ಹಿಂದೂ ರಾಷ್ಟ್ರ ಸಮನ್ವಯ ಸಮಿತಿ
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ