ಪೇಜಾವರ ಶ್ರೀಗಳಿಗೆ ಸನಾತನ ರತ್ನ ಬಿರುದು ಸಹಿತ ಸನ್ಮಾನ

Upayuktha
0



ಉಡುಪಿ: ಆಂಧ್ರಪ್ರದೇಶದ ನೆಲ್ಲೂರಿನ ಪ್ರತಿಷ್ಠಿತ ಆದಿಶಂಕರ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಹಾಲಂಡಿನ ಮಹರ್ಷಿ ವೇದಿಕ್ ಯುನಿವರ್ಸಿಟಿ ಇವುಗಳ  ವತಿಯಿಂದ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಸನಾತನ ರತ್ನ ಬಿರುದನ್ನಿತ್ತು ಸಂಮಾನಿಸಲಾಗಿದೆ‌.


ಪೆರಣಂಕಿಲ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ  ನೆರವೇರಿದ ಭಕ್ತಿ ಸಿದ್ಧಾಂತೋತ್ಸವ ಮತ್ತು ರಾಮೋತ್ಸವದ ಧರ್ಮ ಸಭೆಯಲ್ಲಿ ಆದಿಶಂಕರ ಸಮೂಹ ಶಿಕ್ಷಣ  ಸಂಸ್ಥೆಗಳ ಅಧ್ಯಕ್ಷ ಡಾ ವಂಕಿ ಪಂಚಾಲಯ್ಯ ದಂಪತಿಗಳು ಈ ಗೌರವವನ್ನು ಶ್ರೀಪಾದರಿ್ಗೆ ಸಮರ್ಪಿಸಿದರು.


ಶ್ರೀಗಳ ಸರಳತೆ , ವಿದ್ವತ್ತು ,  ಸನಾತನ ಧರ್ಮ ರಕ್ಷಣೆಗಾಗಿ ನಿರಂತರವಾಗಿ ದೇಶಾದ್ಯಂತ ಸಂಚರಿಸುತ್ತಾ ಜಾಗೃತಿಕಾರ್ಯ ನಡೆಸುತ್ತಿರುವುದು , ಹಿಂದು ವಿರೋಧಿ ಕೃತ್ಯಗಳ ವಿರುದ್ಧ ಧ್ವನಿ ,  ಗೋರಕ್ಷಣೆ , ಪೇಜಾವರ ನೂರಾರು ಸಂಸ್ಥೆಗಳ ಯಶಸ್ವಿ ನಿರ್ವಹಣೆ ಅಯೋಧ್ಯೆ ರಾಮ ಮಂದಿರದ ಟ್ರಸ್ಟಿಯಾಗಿ ಸಕ್ರಿಯ ಕರ್ತವ್ಯ  ಮತ್ತು ರಾಮನ ಪ್ರತಿಷ್ಠಾಪನಾ ಕಾರ್ಯದಲ್ಲೂ ಮುಂಚೂಣಿಯ ಪಾತ್ರ ಹೀಗೆ ಸನಾತನ ಧರ್ಮ ಸಂರಕ್ಷಣೆಗಾಗಿ ಶ್ರೀಗಳು ನಡೆಸುತ್ತಿರುವ ಬಹುವಿಧದ ಕೈಂಕರ್ಯಗಳಿಗಾಗಿ ಈ ಗೌರರವನ್ನು ನೀಡಲಾಗಿದೆ ಎಂದು ಅಭಿವಂದನ ಬಿನ್ನ ವತ್ತಳೆಯಲ್ಲಿ ಉಲ್ಲೇಖಿಸಲಾಗಿದೆ . 


ಹಿರಿಯ ವಿದ್ವಾಂಸರಾದ ಎ ಹರಿದಾಸ ಭಟ್ , ಪ್ರದ್ಯುಮ್ನಾಚಾರ್ಯ ಜೋಷಿ ವೇಂಕಟೇಶಾಚಾರ್ಯ  ಉಪಸ್ಥಿತರಿದ್ದರು . ವಾಸುದೇವ ಭಟ್ ಪೆರಂಪಳ್ಳಿ ಕಾರ್ಯಕ್ರಮ ನಿರೂಪಿಸಿದರು.


ಸದ್ರಿ ಸಂಸ್ಥೆಯ ಅಧೀನದಲ್ಲಿರುವ ನೆಲ್ಲೂರು ಸಮೀಪದ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ನೂತನವಾಗಿ ನಿರ್ಮಿಸಲಾದ ಗುಡಿಯಲ್ಲಿ ಇತ್ತೀಚೆಗೆ ಶ್ರೀಗಳು ವೇಂಕಟೇಶ್ವರ ಸ್ವಾಮಿಯ ಪ್ರಾಣಪ್ರತಿಷ್ಠೆಯನ್ನು ನೆರವೇರಿಸಿದ್ದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top