ಎಸ್.ಡಿ.ಎಂ. ಬಿ.ಎಡ್. ಕಾಲೇಜು: ಯೋಗ ಮತ್ತು ರಂಗ ತರಬೇತಿ ಉದ್ಘಾಟನೆ

Upayuktha
0



ಉಜಿರೆ: ದೇಹಕ್ಕೆ ಮತ್ತು ಮನಸ್ಸಿಗೆ ಆರೋಗ್ಯ ಕೊಡುವ ಸಾಧನವೇ ಯೋಗ.  ಮಾನಸಿಕ ಹಾಗೂ ದೈಹಿಕ ಸ್ವಸ್ಥತೆ ಶಿಕ್ಷಕರಿಗೆ ಮುಖ್ಯ.  ಪಠ್ಯಕ್ರಮದ ಭಾಗವಾಗಿ ಯೋಗವನ್ನು ಕಲಿಯುವುದು ಮಾತ್ರವಲ್ಲದೇ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುವುದು ಅತೀ ಮುಖ್ಯ  ಎಂದು ಉಜಿರೆಯ ಪ್ರಕೃತಿ ಮತ್ತು ಯೋಗ ವಿಜ್ಞಾನ ವಿದ್ಯಾಲಯದ ಡೀನ್ ಡಾ. ಶಿವಪ್ರಸಾದ್ ಇವರು ಎಸ್.ಡಿ.ಎಮ್. ಬಿ.ಎಡ್ ಕಾಲೇಜಿನಲ್ಲಿ ನಡೆದ ಯೋಗ ಮತ್ತು ರಂಗ ತರಬೇತಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ದೀಪ ಪ್ರಜ್ವಲಿಸಿ ಮಾತನಾಡಿದರು.


ಶಿಕ್ಷಕರಿಗೆ ನಾಟಕ ಮತ್ತು ರಂಗಭೂಮಿಯ ಪರಿಚಯದೊಂದಿಗೆ ಅದನ್ನು ಬಳಸುವ ಕೌಶಲವಿರುವ  ವಾತಾವರಣ ಸಿಕ್ಕಿರುವುದು ನಿಮ್ಮ ಅದೃಷ್ಟ. ಹಾಗಾಗಿ ಅದನ್ನು ಪರಿಣಾಮಕಾರಿಯಾಗಿ ಸದುಪಯೋಗ    ಪಡಿಸಿಕೊಳ್ಳಿ ಎಂದು ಎಸ್. ಡಿ. ಎಮ್. ಕಾಲೇಜಿನ ರಂಗ ತರಬೇತಿಯ ನಿರ್ದೇಶಕರಾದ  ಯಶವಂತ ಬೆಳ್ತಂಗಡಿ ಅತಿಥಿಯಾಗಿ ಆಗಮಿಸಿ ಮಾತನಾಡಿದರು. 


ಎಸ್. ಡಿ. ಎಂ. ಬಿ.ಎಡ್. ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಆಲ್ಬರ್ಟ್ ಸಲ್ಡಾನ ರವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ “ಸ್ವಸ್ಥ ದೇಹ, ಸ್ವಸ್ಥ ಮನಸ್ಸನ್ನು ನೀಡುವುದು ಯೋಗ.  ಉಜಿರೆಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜನ್ನು ಯೋಗದ  ವಿಶ್ವಗುರು ಎಂದು ಹೇಳಲಾಗುತ್ತಿದೆ ” ಎಂದು ಹೇಳಿದರು. 


ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ನಾಯಕಿ ವೀಕ್ಷಾದೀಪ, ಎಲ್ಲಾ ಉಪನ್ಯಾಸಕ ವರ್ಗದವರು, ಪ್ರಥಮ ಮತ್ತು ದ್ವಿತೀಯ ಬಿ.ಇಡಿ. ಯ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು. ಪ್ರಶಿಕ್ಷಣಾರ್ಥಿಗಳಾದ ಅಖಿಲಾ ಎಂ ಪಿ ಸ್ವಾಗತಿಸಿ, ಚೈತ್ಯನ್ಯ ಹಾಗೂ ಪ್ರತಿಮಾ ಅತಿಥಿಗಳನ್ನು ಪರಿಚಯಿಸಿ, ಮಲ್ಲಿಕಾರ್ಜುನ ಪಾಟೀಲ್ ವಂದಿಸಿ, ಅಕ್ಷಿತಾ ಎಂ ಕಾರ್ಯಕ್ರಮ ನಿರೂಪಿಸಿದರು. 



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top