ಉಡುಪಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ವತಿಯಿಂದ ಕೊಡವೂರ ಶಂಕರ್ ನಾರಾಯಣ ದೇವಳ ಸಭಾಂಗಣದಲ್ಲಿ ನಡೆದ 15ನೇ ಉಡುಪಿ ತಾಲೂಕು ಸಾಹಿತ್ಯ ಸಮ್ಮೇಳನ ಕಲಾಯತನ ದಲ್ಲಿ ಮನೆಯೇ ಗ್ರಂಥಾಲಯ ಅಭಿಯಾನದ ಸಂಚಾಲಕ ರಾಘವೇಂದ್ರ ಪ್ರಭು ಕರ್ವಾಲು ಮತ್ತು ಕಥೆ ಕೇಳೋಣ ಸರಣಿ ಕಾರ್ಯಕ್ರಮದ ಸಂಚಾಲಕ ಸತೀಶ್ ಕೊಡವೂರು, ಉಡುಪಿ ಚಾವಡಿ ಸರಣಿ ಕಾರ್ಯಕ್ರಮದ ಸಂಚಾಲಕಿ ಪೂರ್ಣಿಮಾ ಜನಾರ್ದನ್ ರವರನ್ನು ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಸಮ್ಮೇಳನದ ಅಧ್ಯಕ್ಷ ಪ್ರೊ. ಎಂ.ಎಲ್ ಸಾಮಗ, ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ, ಅಪರ ಜಿಲ್ಲಾಧಿಕಾರಿ ಅಬಿದ್ ಗದ್ಯಾಳ, ಕುಂದಾಪುರ ಉಪ ವಿಭಾಗಾಧಿಕಾರಿ ರಶ್ಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಯಕ್ಷಗಾನ ಕಲಾವಿದರಾದ ತಾರನಾಥ ವರ್ಕಾಡಿ, ಸುರೇಶ್ ಶೆಟ್ಟಿ, ಕೆ.ಜೆ ಸಹೋದರರು, ಆನಂದ ಸಾಲಿಗ್ರಾಮ, ಕಸಾಪ ಪದಾಧಿಕಾರಿಗಳಾದ ಜನಾರ್ದನ್ ಕೊಡವೂರು, ರಂಜನಿ ವಸಂತ್, ರಾಜೇಶ್ ಭಟ್ ಪಣಿಯಾಡಿ ಮುಂತಾದವರು ಉಪಸ್ಥಿತರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ