ಗಮನ ಸೆಳೆದ ಪತ್ತಾರರ ವಚನ ಗಾಯನ

Upayuktha
0


ತಿಮ್ಮಾಪುರ: ಬಾಗಲಕೋಟ ಜಿಲ್ಲೆಯ ಹುನುಗುಂದ ತಾಲೂಕಿನ ಕೂಡಲ ಸಂಗಮ ಅನುಭವ ಮಂಟಪದಲ್ಲಿ ಕನ್ನಡ ಮತ್ತು ಸಂಸ್ಕೃತ ಶಾಖೆ, ಜಿಲ್ಲಾ ಆಡಳಿತ ಬಾಗಲಕೋಟೆ ಕೂಡಲಸಂಗಮ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ಬುಧವಾರ ನಡೆದ 'ವಿಶ್ವ ಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಜಯಂತಿ ಅಂಗವಾಗಿ ಬಸವಾದಿ ಶರಣರ ವಚನ ವೈಭವ' ಸಾಂಸ್ಕೃತಿಕ ಸಮಾರಂಭದಲ್ಲಿ ಗುಳೇದಗುಡ್ಡದ ಹಿರಿಯ ಹಿಂದುಸ್ತಾನಿ ಗಾಯಕರು, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಮಾಜಿ ಸದಸ್ಯರು ಅಖಂಡೇಶ್ವರ ಎಂ ಪತ್ತಾರ ಅವರು ಬಸವಣ್ಣನವರ ವಚನ, ಲೋಕದ ಡೊಂಕು ನಿವೇಕೆ ತಿದ್ದುವಿರಿ, ದಯವಿಲ್ಲದಾ ಧರ್ಮವು ದಾವುದಯ್ಯ ಎಂಬ ವಚನ ಗಾಯನವನ್ನು ಸುಮಧುರ ಕಂಠದಿಂದ ಸುಶ್ರಾವ್ಯವಾಗಿ ಹಾಡಿ ಪ್ರೇಕ್ಷಕರ ಗಮನ ಸೆಳೆದರು.


ಹಿರಿಯ ಗಾಯಕ ಅಖಂಡೇಶ್ವರ ಎಂ ಪತ್ತಾರ ಅವರ ವಚನ ಸಂಗೀತಕ್ಕೆ ಸರದಾರ ಮುಂದಿನ ಮನಿ, (ಹಾರ್ಮೋನಿಯಂ) ಚಂದ್ರಶೇಖರ ಆಲೂರ (ಕ್ಯಾಶಿಯೋ), ಪಾಂಡುರಂಗ ಬಡಿಗೇರ (ತಬಲಾ), ಸಂಗೀತ ಶಿಕ್ಷಕಿ ಶ್ರೀಮತಿ ಸುಮಿತ್ರಾ ಪತ್ತಾರ (ತಂಬೂರಿ), ಸಾಥನೀಡಿ ಸಹಕರಿಸಿದರು.   


ವಚನ ಸಂಗೀತ ಕಾರ್ಯಕ್ರಮ ನೀಡಿದ ಈ ಎಲ್ಲ ಸಂಗೀತ ಕಲಾ ತಂಡದ ಕಲಾವಿದರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣ ಕುಮಾರ ಜೈನಾಪುರ, ಧಾರವಾಡ ಕ&ಸಂ ಶಾಖೆ ಸಿಬ್ಬಂದಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ನೆನಪಿನ ಕಾಣಿಕೆ, ಪ್ರಶಸ್ತಿ ಪತ್ರಗಳನ್ನು ವಿತರಿಸಿ ಗೌರವಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top