ಸುಹಾಸ್ ಹತ್ಯೆಯಲ್ಲಿ ನಿಷೇಧಿತ ಉಗ್ರ ಸಂಘಟನೆ ಪಿಎಫ್ಐ ಕೈವಾಡ, ಪ್ರಕರಣ ಎನ್ಐಎಗೆ ಒಪ್ಪಿಸಿ: ಡಾ.ಭರತ್ ಶೆಟ್ಟಿ

Upayuktha
0


ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯ ಸಂಚಿನಲ್ಲಿ ನಿಷೇಧಿತ ಉಗ್ರ ಚಟುವಟಿಕೆಯಲ್ಲಿದ್ದ ಕೆಎಫ್ ಡಿ, ಪಿಎಫ್ ಐ  ಕೈವಾಡ ಬಯಲಾಗಿದೆ.  ಇನ್ನಷ್ಟು ಹಿಂದು ಕಾರ್ಯಕರ್ತರನ್ನು ಟಾರ್ಗೆಟ್ ಮಾಡುವ ಮುನ್ನ ಸುಹಾಸ್ ಶೆಟ್ಟಿ ಕೊಲೆಯ ಪ್ರಕರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರೀಯ ತನಿಕಾ ಸಂಸ್ಥೆಗೆ ವಹಿಸಬೇಕು. ಈ ಮೂಲಕ ರಾಜ್ಯದಲ್ಲಿ ಮತ್ತಷ್ಟು ಹತ್ಯೆಗಳನ್ನು ತಡೆಯಬೇಕು ಎಂದು ಶಾಸಕ ಡಾ. ಭರತ್ ಶೆಟ್ಟಿ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ.


ಇದೀಗ ಬಂಧಿತನಾಗಿರುವ ನೌಶಾದ್ ಕೆ ಎಫ್ ಡಿ ಸಂಘಟನೆಯ ಸಕ್ರಿಯ ಸದಸ್ಯನಾಗಿದ್ದವನಾಗಿದ್ದಾನೆ. ಹಿಂದೂ ಸಂಘಟನೆಯ ಪ್ರಮುಖ ಕಾರ್ಯಕರ್ತ ಸುಖಾನಂದ ಶೆಟ್ಟಿ ಅವರನ್ನು ಹತ್ಯೆ ಮಾಡಿರುವುದು ಇದೇ ಕೆಎಫ್ ಡಿ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ನೌಶಾದ್ ಮತ್ತು ಸಹಚರರಾಗಿದ್ದಾರೆ.


ಇಷ್ಟು ಮಾತ್ರವಲ್ಲದೆ ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಮತ್ತೆ ಇಬ್ಬರು ಪ್ರಮುಖರ ಮನೆ ಹಾಗೂ ಅವರ ಮೇಲೆ ದಾಳಿಯನ್ನು ನಡೆಸಿದ್ದಾನೆ. ಈತನಿಗೆ ನಿಷೇಧಿತ ಪಿಎಫ್ ಐ ಸಂಘಟನೆ ಬೆಂಗಾವಲಾಗಿ ನಿಂತಿದ್ದು ಅಪರಾಧ ಪ್ರಕರಣಗಳಲ್ಲಿ ಸಂಘಟನೆಯ ಪಾತ್ರ ಇದೆ ಎಂಬುದನ್ನು ಸಾಬೀತುಪಡಿಸಿದೆ.


ಈ ಸಂಘಟನೆಗಳನ್ನು ನಿಷೇಧದ ಬಳಿಕವೂ ಅಕ್ರಮ, ದೇಶದ್ರೋಹಿ ಚಟುವಟಿಕೆಯಲ್ಲಿದ್ದಂತೆ ಕಂಡು ಬರುತ್ತಿದ್ದು, ಹಿಂದೂ ಕಾರ್ಯಕರ್ತರ ಮೇಲೆ ಇನ್ನಷ್ಟು ದಾಳಿಗಳಾಗಿ ಹತ್ಯೆ ಯತ್ನ ಮಾಡುವ ಮುನ್ನ ಆರೋಪಿಗಳ ಇಡೀ ತಂಡವನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಲು ಕೇಂದ್ರದ ಎನ್ಐಎ ಸೂಕ್ತವಾಗಿದೆ ಎಂದು ಭರತ್ ಶೆಟ್ಟಿ ವೈ ಒತ್ತಾಯಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter


Post a Comment

0 Comments
Post a Comment (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top