ಮಂಗಳೂರು: ಕೆನರಾ ಕಾಲೇಜಿನ ಕನ್ನಡ ವಿಭಾಗದ ವತಿಯಿಂದ ಬಸವ ಜಯಂತಿಯನ್ನು ಆಚರಿಸಲಾಯಿತು. ಬೆಸೆಂಟ್ ಮಹಿಳಾ ಕಾಲೇಜಿನ ವಿಶ್ರಾಂತ ಕನ್ನಡ ಪ್ರಾಧ್ಯಾಪಕಿ ಡಾ. ಮೀನಾಕ್ಷಿ ರಾಮಚಂದ್ರ ಮುಖ್ಯ ಅತಿಥಿಯಾಗಿ ಬಸವಣ್ಣನವರ ವಿಶಿಷ್ಟ ಸಾಮಾಜಿಕ ಚಿಂತನೆ ಕುರಿತು ಉಪನ್ಯಾಸ ನೀಡಿದರು.
ಬಸವಣ್ಣನವರು ಸಮಾಜದಲ್ಲಿನ ವಿಭಿನ್ನತೆಯ ಬಗ್ಗೆ ಯೋಚಿಸಿದ್ದರು. ಅಪಾರವಾದ ಬುದ್ಧಿಮತ್ತೆ ಇರುವ ಬಸವಣ್ಣನವರು ಸಾಮಾಜಿಕ, ಧಾರ್ಮಿಕ, ರಾಜಕೀಯ, ಸಾಹಿತ್ಯಕವಾಗಿ ಹೊಸ ಕ್ರಾಂತಿಯ ಹರಿಕಾರರು. ಜನಸಾಮಾನ್ಯರ ಭಾಷೆಯನ್ನು ಬಳಸಿ ಜಾತಿ ಮತವಿಲ್ಲದೆ ಏಕತೆಯ ಪ್ರಜ್ಞೆಯನ್ನು ಮೂಡಿಸಿದವರು. ಅವರ ಜೀವನಾನುಭವದಿಂದ ಬಂದ ಮಾತುಗಳೇ ವಚನಗಳಾದವು ಎಂದು ಹೇಳಿದರು.
ಕಾಲೇಜು ಪ್ರಾಂಶುಪಾಲರಾದ ಡಾ. ಪ್ರೇಮಲತಾ ವಿ ಅಧ್ಯಕ್ಷತೆ ವಹಿಸಿದ್ದು 12ನೇ ಶತಮಾನದ ವಚನ ಈಗಿನ ಸಮಾಜಕ್ಕೆ ಅನ್ವಯವಾಗುತ್ತದೆ. ಅವರ ವಿಚಾರಧಾರೆಗಳು ಇಂದಿಗೂ ದಾರಿದೀಪವಾಗಿದೆ ಎಂದರು.
ಕನ್ನಡ ವಿಭಾಗದ ಮುಖ್ಯಸ್ಥೆ ಶ್ರೀಮತಿ ವಾಣಿ ಯು ಯಸ್ ಸ್ವಾಗತಿಸಿ, ಕು ಗ್ರೀಷ್ಮ ವಂದಿಸಿದರು. ಯುವರಾಜ್ ನಿರೂಪಿಸಿದರು. ಕನ್ನಡ ಉಪನ್ಯಾಸಕಿ ಶೈಲಜಾ ಪುದುಕೋಳಿ ಹಾಗೂ ಶಿಕ್ಷಕ ಶಿಕ್ಷಕೇತರರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿರಾದ ಸೌರಭ ಮತ್ತು ಸೃಷ್ಟಿ ಇವರಿಂದ ಬಸವಣ್ಣನವರ ವಚನ ಗಾಯನ ನಡೆಯಿತು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ