ಬಳ್ಳಾರಿ: ಅಲ್ಲಂ ಸುಮಂಗಳಮ್ಮ ಸ್ಮಾರಕ ಮಹಿಳಾ ಮಹಾವಿದ್ಯಾಲಯದಲ್ಲಿ ಪ್ರತಿಭಾ ದಿನಾಚರಣೆ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಕಾತ್ಯಾಯಿನಿ ಎಂ. ಮರಿದೇವಯ್ಯ ರವರು ವಹಿಸಿಕೊಂಡಿದ್ದರು. ಪದ್ಮಶ್ರೀ ಡಾ. ಮಾತಾ ಬಿ.ಮಂಜಮ್ಮ ಜೋಗತಿ, ಮಾಜಿ ಅಧ್ಯಕ್ಷರು, ಕರ್ನಾಟಕ ಜಾನಪದ ಅಕಾಡೆಮಿ, ಬೆಂಗಳೂರು, ಮತ್ತು ಹಿರಿಯ ಜನಪದ ಕಲಾವಿದರು ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಪದ್ಮಶ್ರೀ ಡಾ. ಮಾತಾ ಬಿ.ಮಂಜಮ್ಮ ಜೋಗತಿ, ವೀರಶೈವ ವಿದ್ಯಾವರ್ಧಕ ಸಂಘದ ಸಹಕಾರ್ಯದರ್ಶಿಗಳಾದ ಯಾಳ್ಪಿಮೇಟಿ ಪಂಪನಗೌಡ, ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಕಾತ್ಯಾಯಿನಿ ಎಂ. ಮರಿದೇವಯ್ಯ, ಕಾಲೇಜು ಆಡಳಿತ ಮಂಡಳಿಯ ಸದಸ್ಯರಾದ ಜಿ.ಎಂ. ಪರ್ವತೀಶ, ಜೆ.ಎಸ್. ಸುಮಂಗಳ, ವೀರಶೈವ ವಿದ್ಯಾವರ್ಧಕ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರಾದ ಚೋರನೂರು ಟಿ. ಕೊಟ್ಟಪ್ಪ, ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ದೂಪಂ ಸತೀಶ ಮುಂತಾದವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಮಂಜಮ್ಮ ಜೋಗತಿಯವರು ಮಾತನಾಡುತ್ತಾ ಸಮಾಜದಲ್ಲಿ ಹುಟ್ಟಿದ ಬಳಿಕ ಕಷ್ಟ-ದುಃಖ, ನಿಂದನೆಗಳು ಬರುವುದು ಸಹಜ. ಆದರೆ ಅವುಗಳನ್ನೇ ನೆಪಮಾಡಿಕೊಳ್ಳದೇ ಸಾಧನೆಗಳತ್ತ ಸಾಗಬೇಕು ಎಂದು ವಿದ್ಯಾರ್ಥಿನಿಯರಿಗೆ ಮನವರಿಕೆ ಮಾಡಿದರು. ತಮ್ಮ ಆರಂಭಿಕ ಜೀವನದಲ್ಲಿ ಅನುಭವಿಸಿದ ಕಷ್ಟಗಳನ್ನು ವಿದ್ಯಾರ್ಥಿನಿಯರಿಗೆ ಹೇಳುವುದರ ಮೂಲಕ ಪ್ರೇರಣೆ ನೀಡಿದರು. ಹಾಗೆಯೇ ಸಮಾಜದಲ್ಲಿ ತೃತೀಯಲಿಂಗಿಗಳನ್ನು ಸಮಾನವಾಗಿ ಪರಿಗಣಿಸಿ, ಅವರಿಗೆ ಉತ್ತಮ ಶಿಕ್ಷಣವನ್ನು ನೀಡುವಂತೆ ಮನವಿ ಮಾಡಿಕೊಂಡರು.
2023-24 ನೇ ಶೈಕ್ಷಣಿಕ ಸಾಲಿನಲ್ಲಿ ನಮ್ಮ ಮಹಾವಿದ್ಯಾಲಯಕ್ಕೆ 17 ರ್ಯಾಂಕ್ಗಳನ್ನು ಪಡೆದ ವಿದ್ಯಾರ್ಥಿನಿಯರಿಗೆ ವೀರಶೈವ ವಿದ್ಯಾವರ್ಧಕ ಸಂಘವು ತಲಾ 5000 ರೂಪಾಯಿಗಳನ್ನು ನಗದು ಬಹುಮಾನ ನೀಡಿ ಸನ್ಮಾನಿಸಲಾಯಿತು.
ಚೋರನೂರು ಟಿ. ಕೊಟ್ರಪ್ಪ ರವರು ನಾವು ಸಂಪತ್ತಿನ ಒಡೆಯರಾಗುವುದಕ್ಕಿಂತ ಮುಂಚೆ ಜ್ಞಾನ ಎಂಬ ಸಂಪತ್ತಿನ ಒಡೆಯರಾಗಬೇಕು. ಶಿಕ್ಷಣವೇ ನಮ್ಮನ್ನು ಬದುಕಿಸುವ ಸಂಜೀವಿನಿ ಇದ್ದಂತೆ ಎಂಬ ಆಶಯ ನುಡಿಗಳನ್ನು ವಿದ್ಯಾರ್ಥಿನಿಯರಿಗೆ ಈ ಸಂದರ್ಭದಲ್ಲಿ ತಿಳಿಸಿದರು.
ಕಾತ್ಯಾಯಿನಿ ಎಂ. ಮರಿದೇವಯ್ಯ ರವರು ಬದುಕಿನಲ್ಲಿ ಭರವಸೆ ಅತಿ ಪ್ರಮುಖವಾದದ್ದು. ಮಂಜಮ್ಮ ಜೋಗತಿಯವರ ಮಾತುಗಳು, ಅವರಲ್ಲಿರುವ ಬದುಕಿನ ಛಲ ಎಲ್ಲಾರಿಗೂ ಮಾದರಿಯಾಗಿದೆ. ಇವರು ಜೋಗತಿ ನೃತ್ಯವನ್ನು ಜೀವಂತವಾಗಿಸಿದ್ದಾರೆ ಎಂದು ತಮ್ಮ ಅಧ್ಯಕ್ಷತೆಯ ನುಡಿಗಳ ಮೂಲಕ ತಿಳಿಸಿದರು.
ವಾರ್ಷಿಕ ವರದಿಯನ್ನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ದೂಪಂ ಸತೀಶ ರವರು ಓದಿದರು. ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಗವಿಸಿದ್ದಪ್ಪ ಗದಗ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಕೆ.ಗಂಗಾಧರ ರವರು ಮುಖ್ಯ ಅತಿಥಿಗಳ ಪರಿಚಯವನ್ನು ಮಾಡಿದರು. ಕಾರ್ಯಕ್ರಮದ ಅತಿಥಿಗಳನ್ನು ರೀನಿಯವರು ಸ್ವಾಗತಿಸಿದರು. ಡಾ. ಬಿಂದುರವರು ವಂದನಾರ್ಪಣೆಯನ್ನು ಮಾಡಿದರು. ಡಾ. ಸುವರ್ಣಮ್ಮ ಡಿ ಇವರು ಕಾರ್ಯಕ್ರಮವನ್ನು ನಿರೂಪಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ