ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಚಿಕ್ಕಮಗಳೂರಿನ ಇಬ್ಬರು ಸೇರಿದಂತೆ 8 ಮಂದಿ ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಗೃಹಸಚಿವ ಡಾ. ಜಿ ಪಮೇಶ್ವರ್ ಅವರು ಇಂದು (ಮೇ 3) ನಗರಕ್ಕೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಿ, ಅಧಿಕಾರಿಗಳ ಸಭೆ ನಡೆಸಿದ ಬಳಿಕ ಮಾಧ್ಯಮಗಳಿಗೆ ಈ ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಯ ಪಾಲನೆಗೆ ಸರಕಾರ ಬದ್ಧವಾಗಿದ್ದು, ಯಾವುದೇ ಸಮುದಾಯದವರು ಅಪರಾಧ ಕೃತ್ಯ ನಡೆಸಿದರೂ ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವರು ತಿಳಿಸಿದರು.
ಬಂಧಿತರ ವಿವರ:
ಅಬ್ದುಲ್ ಸಫ್ಘಾನ್ (29): ಪೇಜಾವರ ನಿವಾಸಿ, ಪ್ರಸ್ತುತ ಬಜಪೆ ಕಿನ್ನಿಪದವುದಲ್ಲಿ ವಾಸ, ವೃತ್ತಿಯಲ್ಲಿ ಡ್ರೈವರ್. ನಿಯಾಜ್ (28): ಬಜ್ಜೆ ಶಾಂತಿಗುಡ್ಡೆ ನಿವಾಸಿ, ಮೇಸ್ತ್ರಿ ಹೆಲ್ಪರ್ ಕೆಲಸ. ಮೊಹಮ್ಮದ್ ಮುಝಮಿಲ್ (32): ಕೆಂಜಾರು ನಿವಾಸಿ, ಹಿಂದೆ ಸೌದಿಯಲ್ಲಿ ಸೇಲ್ಸ್ ಮ್ಯಾನ್ ಆಗಿದ್ದ, ಇತ್ತೀಚೆಗೆ ವಿವಾಹವಾಗಿದ್ದ. ಈತನ ಮೇಲೆ ಈ ಹಿಂದೆ ಪಣಂಬೂರು ಠಾಣೆಯಲ್ಲಿ ದರೋಡೆ ಪ್ರಕರಣ (IPC 392) ದಾಖಲಾಗಿದೆ.
ಕಲಂದರ್ ಶಾಫಿ (31): ಕಳವಾರು ನಿವಾಸಿ, ಬೆಂಗಳೂರಿನಲ್ಲಿ ಸೇಲ್ಸ್ ಮ್ಯಾನ್. ಈತನ ಮೇಲೆ ಸುರತ್ಕಲ್ ಠಾಣೆಯಲ್ಲಿ NDPS ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ರಂಜಿತ್ (19): ಚಿಕ್ಕಮಗಳೂರು ಜಿಲ್ಲೆಯ ಕಳಸ ಮೂಲದವ, ವೃತ್ತಿಯಲ್ಲಿ ಡ್ರೈವರ್. ಕೃತ್ಯಕ್ಕೆ ಬಳಸಿದ ಲಾಂಗ್ (ಮಚ್ಚು) ಅನ್ನು ಕಾರಿನಿಂದ ತೆಗೆದುಕೊಟ್ಟ ಆರೋಪ ಈತನ ಮೇಲಿದೆ.
ನಾಗರಾಜ್ (20): ಚಿಕ್ಕಮಗಳೂರು ಜಿಲ್ಲೆಯ ಕಳಸ ಮೂಲದವ, ಶಾಮಿಯಾನ ಅಂಗಡಿಯಲ್ಲಿ ಕೆಲಸ ಮಾಡುತ್ತಾನೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ