ಐಅರ್‌ಸಿಎಸ್ ವಾರ್ಷಿಕ ಸಭೆ: ಕರ್ನಾಟಕದ ಪ್ರತಿನಿಧಿಯಾಗಿ ಸಿಎ ಶಾಂತಾರಾಮ ಶೆಟ್ಟಿ ಭಾಗಿ

Chandrashekhara Kulamarva
0


ಮಂಗಳೂರು: ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮೇ 13ರಂದು ನಡೆಯಲಿರುವ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ (ಐಆರ್‌ಸಿಎಸ್)ಯ ಕೇಂದ್ರ ಕಚೇರಿಯ ವಾರ್ಷಿಕ ಮಹಾ ಸಭೆಯಲ್ಲಿ ರೆಡ್‌ಕ್ರಾಸ್ ಸಂಸ್ಥೆಯ ಕರ್ನಾಟಕ ರಾಜ್ಯ ಶಾಖೆಯ ಪ್ರತಿನಿಧಿಯಾಗಿ ದ.ಕ.ಜಿಲ್ಲಾ ರೆಡ್‌ಕ್ರಾಸ್ ಸೊಸೈಟಿಯ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಭಾಗವಹಿಸಲಿದ್ದಾರೆ. ರೆಡ್‌ಕ್ರಾಸ್ ಸಂಸ್ಥೆಯ ರಾಷ್ಟ್ರೀಯ ಪ್ರಧಾನ ಕಚೇರಿಯ ಅಧ್ಯಕ್ಷರಾದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಅಧ್ಯಕ್ಷತೆಯಲ್ಲಿ, ರೆಡ್‌ಕ್ರಾಸ್  ಕೇಂದ್ರ ಕಚೇರಿಯ ಚೇರ್ಮನ್, ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಅವರ ಉಪಸ್ಥಿತಿಯಲ್ಲಿ ಈ ಸಭೆ ನಡೆಯಲಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top