ಕಾಸರಗೋಡು ಜಿಲ್ಲಾ ಕುಲಾಲ ಸಮುದಾಯ ಭವನದ ಮಿನಿ ಸಭಾಂಗಣದ ಉದ್ಘಾಟನೆ

Upayuktha
0

ಉಚಿತ ಪುಸ್ತಕ ವಿತರಣೆ, ಸಹಾಯ ಹಸ್ತ ವಿತರಣೆ, ಮಹಾಸಭೆ




ಮಂಜೇಶ್ವರ: ಕಾಸರಗೋಡು ಜಿಲ್ಲಾ ಕುಲಾಲ ಸಂಘ (ರಿ.) ಮಂಜೇಶ್ವರ, ತೂಮಿನಾಡು ಆಶ್ರಯದಲ್ಲಿ ಕಾಸರಗೋಡು ಜಿಲ್ಲಾ ಕುಲಾಲ ಸುಮುದಾಯ ಭವನದ ನೆಲ ಅಂತಸ್ತಿನಲ್ಲಿ ನಿರ್ಮಾಣಗೊಂಡಿರುವ ಮಿನಿ ಸಭಾಂಗಣದ ಉದ್ಘಾಟನೆ ಮೇ 25 ರಂದು ಜರಗಿತು.


ಸಮುದಾಯದ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದಲ್ಲಿ ಉಚಿತ ಪುಸ್ತಕ ವಿತರಣೆ, 2024-25ರ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ಪ್ಲಸ್ ಟು /ಪಿ.ಯು.ಸಿ ಯ ಕರ್ನಾಟಕ ಕೇರಳ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮ,  ಸಹಾಯಹಸ್ತ ವಿತರಣೆ ಕಾರ್ಯಕ್ರಮ ಮತ್ತು ಸಂಘದ ವಾರ್ಷಿಕ ಮಹಾಸಭೆಯು ಜರಗಿತು.


ಬೆಳಗ್ಗೆ ಗಂಟೆ 8 ರಿಂದ ಗಣಹೋಮ, ಬೆಳಗ್ಗೆ ಗಂಟೆ 8.45 ರಿಂದ ಶ್ರೀ ಬಾಲಾಂಜನೇಯ ವ್ಯಾಯಾಮ ಶಾಲೆ ಭಜನಾ ತಂಡ ಮತ್ತು ಶ್ರೀ ಮಹಾಕಾಳಿ ಭಜನಾ ಮಂಡಳಿ ತೂಮಿನಾಡು ತಂಡಗಳಿಂದ ಭಜನೆ ಹಾಗೂ ನಂದಗೋಕುಲ ಭಜನಾ ತಂಡ ತೂಮಿನಾಡು ತಂಡದಿಂದ ಕುಣಿತ ಭಜನೆ ನಡೆಯಿತು. ಪರಮ ಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಶ್ರೀ ಧಾಮ ಮಾಣಿಲ ಆಶೀರ್ವಚನ ನೀಡಿದರು.


ಕಾಸರಗೋಡು ಜಿಲ್ಲಾ ಕುಲಾಲ ಸಂಘದ ಅಧ್ಯಕ್ಷ ನ್ಯಾಯವಾದಿ ರವೀಂದ್ರ ಮುನ್ನಿಪ್ಪಾಡಿ ಅಧ್ಯಕ್ಷತೆ ವಹಿಸಿ ಪ್ರಸ್ತಾವನೆಯೊಂದಿಗೆ ಗಣ್ಯರನ್ನು ಸ್ವಾಗತಿಸಿದರು. ಶ್ರೀ ವೀರನಾರಾಯಣ ಸೇವಾ ಟ್ರಸ್ಟ್ ಅಧ್ಯಕ್ಷ ಪ್ರೇಮಾನಂದ ಕುಲಾಲ್ ಕೋಡಿಕಲ್ ಅವರು ಸಭಾಂಗಣವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಅಮೂಲ್ಯ ರಬ್ಬರ್ ಇಂಡಸ್ಟ್ರಿಸ್ ಮಾಲಕ ಹಾಗೂ ಬೆಂಗಳೂರು ಕುಲಾಲ ಸಂಘದ ಅಧ್ಯಕ್ಷ ದಿವಾಕರ ಮೂಲ್ಯ ಮತ್ತು ಶ್ರೀ ಲಕ್ಶ್ಮೀ ಫರ್ನಿಚರ್ಸ್ & ಇಂಟೀರಿಯರ್ಸ್ ಮಂಗಳೂರು ಮಾಲಕ ಗಣೇಶ್ ಕುಲಾಲ್, ದಾಸ್ ಪ್ರಮೋಷನ್ಸ್ & ನರ್ಸಿಂಗ್ ಹೋಮ್ ಮಂಗಳೂರು ಆಡಳಿತ ನಿರ್ದೇಶಕ ಅನಿಲ್ ದಾಸ್, ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ ಕಮಲಾಕ್ಷೀ ವಿ ಕುಲಾಲ್, ಕಾಸರಗೋಡು ಬ್ಲಾಕ್ ಪಂಚಾಯತ್ ಸದಸ್ಯೆ ಶ್ರೀಮತಿ ಜಯಂತಿ ಬದಿಯಡ್ಕ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕುಳೂರು ಮುಖ್ಯೋಪಾಧ್ಯಾಯಿನಿ ಶ್ರೀಮತಿ ಮಾಲತಿ ಪಿ, ಆಪರೇಷನ್ ವಿಭಾಗ ಎಂ.ಆರ್.ಪಿ.ಎಲ್ ಮ್ಯಾನೇಜರ್ ಜಯಪ್ರಕಾಶ್ ಕೈರಂಗಳ, ಶ್ರೀ ವೀರ ನಾರಾಯಣ ದೇವಸ್ಥಾನ ಕುಲಶೇಖರದ ಆಡಳಿತ ಮೊಕ್ತೇಸರ ಸುಂದರ ಕುಲಾಲ್ ಶಕ್ತಿ ನಗರ, ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ದಾಮೋದರ ಅಶೋಕನಗರ, ಸಂಚಾಲಕ ಸುರೇಶ್ ಕುಲಾಲ್ ಭಾಗವಹಿಸಿದರು.




ಈ ಸಂದರ್ಭದಲ್ಲಿ ಸಾಧಕರಿಗೆ ಗೌರವಾರ್ಪಣೆ ನಡೆಯಿತು. ಸಾಧಕರಾದ ಕರಾಟೆ ಪಟು ಕು. ಸ್ವಾತಿ ಕೊಡಂಗೆ, ಯಕ್ಷಗಾನ ಕಲಾವಿದ ಜಯೇಂದ್ರ ಕುಲಾಲ್ ಕಿದೂರು, ಸಮಾಜ ಸೇವೆಗಾಗಿ ರಾಮ ಪ್ರಸಾದ್ ಎಸ್ ಮಂಗಳೂರು, ದೇಶ ಸೇವೆಗೆ ಪೂವಪ್ಪ ಕಡಂಬಾರ್, ದೈವಾರಾಧನೆ ಗೋಪಾಲಕೃಷ್ಣ ವಾಂತಿಚ್ಚಾಲ್, ಪ್ರಗತಿಪರ ಕೃಷಿಕ ಶೇಷ ಮೋಹನ್ ನೇರಪ್ಪಾಡಿ, SPC- ವಿದ್ಯಾರ್ಥಿ ಪೊಲೀಸ್ ಕೆಡೆಟ್‌ನಲ್ಲಿ ಕೇರಳ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಕು. ರಶ್ಮಿತ ಕೆ ತೂಮಿನಾಡು, ಕೇರಳ ರಾಜ್ಯ ಮಟ್ಟದ ಜೂನಿಯರ್ ಗರ್ಲ್ಸ್ ಕಬಡ್ಡಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಕು. ಸೃಷ್ಟಿ ಕುಂಜತ್ತೂರು ಇವರನ್ನು ಗೌರವಿಸಲಾಯಿತು.



ಆಶಕ್ತ ಕುಟುಂಬಕ್ಕೆ ನೀಡುವ ಕುಲಾಲ ಆಸರೆಯ 7 ನೇ ಸಹಾಯ ಹಸ್ತ ಯೋಜನೆ ರೂಪಾಯಿ 15,000/- ಮೊತ್ತವನ್ನು ಕಿಡ್ನಿ ವೈಫಲ್ಯದಿಂದ ಚಿಕಿತ್ಸೆ ಪಡೆಯುತ್ತಿರುವ ಸುಂದರ ಮೂಲ್ಯ ಪೆರ್ಲ ರವರಿಗೆ ಮತ್ತು ಕುಲಾಲ ಆಸರೆಯ 8 ನೇ ಸಹಾಯ ಹಸ್ತ ಯೋಜನೆ ರೂಪಾಯಿ 15,000/- ಮೊತ್ತ ವನ್ನು ಕಿಡ್ನಿ ವೈಫಲ್ಯದಿಂದ ಚಿಕಿತ್ಸೆ ಪಡೆಯುತ್ತಿರುವ ದೇವದಾಸ್ ಮಂಜೇಶ್ವರ ಅಡ್ಕರವರಿಗೆ ಗಣ್ಯರ ಉಪಸ್ಥಿಯಲ್ಲಿ ಸ್ವಾಮೀಜಿರವರು ಹಸ್ತಾಂತರಿಸಿದರು. ಸುಮಾರು 375 ಮಂದಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಿಸಲಾಯಿತು. 2024-25 ನೇ ಸಾಲಿನ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕ ಗಳಿಸಿರುವ ಕೇರಳ/ಕರ್ನಾಟಕದ ಎಸ್.ಎಸ್.ಎಲ್.ಸಿ ಯ 16 ಮಂದಿ ವಿದ್ಯಾರ್ಥಿಗಳಿಗೆ ಹಾಗೂ ಪ್ಲಸ್ ಟು /ಪಿ.ಯು.ಸಿ ಯ 5 ಮಂದಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಲಾಯಿತು.



ದಾಮೋದರ ಮಾಸ್ಟರ್ ಕಬ್ಬಿನಹಿತ್ಲು ಪ್ರಧಾನ ಕಾರ್ಯದರ್ಶಿ ಜಿಲ್ಲಾ ಕುಲಾಲ ಸಂಘ ಧನ್ಯವಾದ ಸಮರ್ಪಿಸಿ, ಎನ್.ಕೆ. ಕುಲಾಲ್ ಕಾರ್ಯಕ್ರಮ ನಿರೂಪಿಸಿದರು. ಮಹಾಸಭೆಯಲ್ಲಿ 2025-27 ನೇ ಸಾಲಿನ ನೂತನ ಕಾರ್ಯ ಕಾರಿ ಸಮಿತಿಯ ಆಯ್ಕೆ ನಡೆಯಿತು.



ಅಧ್ಯಕ್ಷರಾಗಿ ನ್ಯಾಯವಾದಿ ರವೀಂದ್ರ ಮುನ್ನಿಪ್ಪಾಡಿ, ಉಪಾಧ್ಯಕ್ಷರಾಗಿ ರಾಮ ಉಜಿರೆ, ಪ್ರಧಾನ ಕಾರ್ಯದರ್ಶಿಯಾಗಿ ದಾಮೋದರ ಮಾಸ್ಟರ್ ಕಬ್ಬಿನಹಿತ್ಲು, ಜತೆ ಕಾರ್ಯದರ್ಶಿಯಾಗಿ ಭೋಜ  ಮಾಸ್ಟರ್ ಪಾವೂರು, ಕೋಶಾಧಿಕಾರಿಯಾಗಿ ಈಶ್ವರ್ ಕುಲಾಲ್ ಕಣ್ವತೀರ್ಥ, ಕ್ರೀಡಾ ಕಾರ್ಯದರ್ಶಿಯಾಗಿ ತಾರನಾಥ ಕಣ್ವತೀರ್ಥ, ಸಂಘಟನಾ ಸಂಚಾಲಕರಾಗಿ ಸುಧೀರ್ ರಂಜನ್ ದೈಗೋಳಿ ಹಾಗೂ ಜಯಂತ ಚಿಪ್ಪಾರ್,  ಸೇವಾದಳಪತಿಗಳಾಗಿ ಪ್ರಸಾದ್ ತುಮಿನಾಡು ಹಾಗೂ ಸುರೇಶ್ ಕಣ್ವತೀರ್ಥ, ನ್ಯಾಯ ಸಲಹಾ ಮಂಡಳಿ ಸದಸ್ಯರಾಗಿ ಸೋಮಪ್ಪ ಸಾಲ್ಯಾನ್ ಕುಂಜತ್ತೂರು, ಬಾಲಕೃಷ್ಣ ಮುನ್ನಿಪ್ಪಾಡಿ, ವಿಶ್ವನಾಥ ಮಾಣಿಪ್ಪಾಡಿ ಹಾಗೂ ಇತರ 21 ಮಂದಿ ಸದಸ್ಯರು ಕಾರ್ಯಕಾರಿ ಸಮಿತಿಗೆ ಆಯ್ಕೆಯಾದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top