ಕುಲಾಲ/ಕುಂಬಾರರ ಯುವ ವೇದಿಕೆ ಉಳ್ಳಾಲ ವತಿಯಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Upayuktha
0


ನರಿಂಗಾನ: ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕರ್ನಾಟಕ ರಾಜ್ಯ ಕುಲಾಲ/ಕುಂಬಾರರ ಯುವವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ (ರಿ.) ಆಶ್ರಯದಲ್ಲಿ ‘ಪ್ರತಿಭಾ ಪುರಸ್ಕಾರ’ ಸಮಾರಂಭ ಇತ್ತೀಚೆಗೆ ಶ್ರೀ ರಕ್ತೇಶ್ವರಿ ಅಮ್ಮನವರ ಸನ್ನಿಧಿ ಟ್ರಸ್ಟ್(ರಿ.) ವಿದ್ಯಾನಗರ ನರಿಂಗಾನ ಇಲ್ಲಿ ನೆರವೇರಿತು. 


2024-25ನೆ ಸಾಲಿನಲ್ಲಿ ಕರ್ನಾಟಕ ರಾಜ್ಯ ಪ್ರೌಢಶಿಕ್ಷಣ ಮಂಡಳಿ, ಸಿಬಿಎಸ್‌ಇ ಪಠ್ಯಕ್ರಮ ಸೇರಿದಂತೆ 10ನೆ ತರಗತಿ ಪರೀಕ್ಷೆಯಲ್ಲಿ ರ‍್ಯಾಂಕ್ ಹಾಗೂ ಅತ್ಯುನ್ನತ ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. 


ಮುಳಿಯ ಶ್ರೀ ವೈಷ್ಣವೀ ಕ್ಷೇತ್ರದ ಶ್ರೀ ಶ್ರೀ ಶಿವಾನಂದ ಸರಸ್ವತೀ ಸ್ವಾಮೀಜಿ ದೀಪ ಪ್ರಜ್ವಲನಗೈದು ಸಮಾರಂಭವನ್ನು ಉದ್ಘಾಟಿಸಿದರು. ಶ್ರೀ ರಕ್ತೇಶ್ವರಿ ಅಮ್ಮನವರ ಸನ್ನಿಧಿ ಟ್ರಸ್ಟ್‌ನ ಅಧ್ಯಕ್ಷರಾದ ಅಮ್ಮೆಂಬಳ ಸದಾಶಿವ ನಾವಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.



ಶಿಕ್ಷಣ ಪ್ರತಿಯೊಬ್ಬರಿಗೂ ಅಗತ್ಯ, ವಿದ್ಯೆಯ ಜೊತೆಗೆ ಸಂಸ್ಕಾರವನ್ನೂ ಬೆಳೆಸಿಕೊಳ್ಳುವಲ್ಲಿ ಮಹತ್ವ ನೀಡಬೇಕಾಗಿದೆ. ಕಾಸಿನ ಹಿಂದೆ ಬೀಳದೆ ಜ್ಞಾನತೃಷೆಯನ್ನು ನಮ್ಮದಾಗಿಸಿಕೊಳ್ಳಬೇಕು. ಜ್ಞಾನದ ದೀಪ ಲೋಕವನ್ನು ಬೆಳಗಿಸುತ್ತದೆ. ಇಂದಿನ ವಿದ್ಯಾರ್ಥಿಗಳು ಸತ್ಪಥದಲ್ಲಿ ನಡೆಯಲು ಹೆತ್ತವರು, ಪೋಷಕರು ಪೂರಕ ವಾತಾವರಣ ನಿರ್ಮಿಸಿಕೊಡುವ ಅಗತ್ಯ ಹಿಂದೆಂದಿಗಿಂತಲೂ ಇಂದು ಹೆಚ್ಚಾಗಿದೆ ಎಂದು ಮುಳಿಯ ಶ್ರೀವೈಷ್ಣವೀ ಕ್ಷೇತ್ರದ ಶ್ರೀ ಶ್ರೀ ಶಿವಾನಂದ ಸರಸ್ವತೀ ಸ್ವಾಮೀಜಿ ಆಶೀರ್ವಚನಗೈದು ತಿಳಿಸಿದರು.


ಮುಖ್ಯ ಅತಿಥಿಗಳಾಗಿ ಲಯನ್ ಅನಿಲ್‌ದಾಸ್ ಅಂಬಿಕಾರೋಡ್ ಮಾತನಾಡಿ, ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳ ಪರಿಶ್ರಮ ಸಾಧನೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕುಲಾಲ ಸಮುದಾಯದ ಮಕ್ಕಳು ಉನ್ನತ ಶಿಕ್ಷಣವನ್ನು ಪಡೆದು ಉನ್ನತ ವ್ಯಕ್ತಿತ್ವವನ್ನು ಬೆಳೆಸಿಕೊಂಡು ಸಮಾಜದ ಉನ್ನತಿಗೂ ಪ್ರೇರಕರಾಗಬೇಕು ಎಂದು ನುಡಿದರಲ್ಲದೆ, ಇಂತಹ ಕಾರ್ಯಕ್ರಮವನ್ನು ಆಯೋಜಿಸಿರುವುದು ಸ್ತುತ್ಯರ್ಹ ಎಂದರು.


ಇನ್ನೋರ್ವ ಅತಿಥಿ ಹಿರಿಯ ಯಕ್ಷಗಾನ ಕಲಾವಿದ ಕೃಷ್ಣ ಮೂಲ್ಯ ಕೈರಂಗಳ ಈ ಸಂದರ್ಭದಲ್ಲಿ ಮಾತನಾಡಿ, ವಿದ್ಯಾರ್ಥಿಗಳ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಮತ್ತು ಅವರ ಶ್ರೇಯೋಭಿವೃದ್ಧಿಗೆ ಸಹಕರಿಸುವುದು ಹಿರಿಯರ, ಪೋಷಕರ ಸಾಮಾಜಿಕ ಜವಾಬ್ದಾರಿಯಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.



ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಮ್ಮೆಂಬಳ ಸದಾಶಿವ ನಾವಡ ಪುರಸ್ಕೃತ ಮಕ್ಕಳನ್ನು ಅಭಿನಂದಿಸಿದರಲ್ಲದೆ, ಪ್ರತಿಭಾವಂತರನ್ನು ಪುರಸ್ಕರಿಸುವ ಇಂತಹ ಕಾರ್ಯಕ್ರಮ ಅಪೇಕ್ಷಣೀಯ; ಇದು ವಿದ್ಯಾರ್ಥಿಗಳಲ್ಲಿ ಉತ್ತಮ ಶಿಕ್ಷಣ ಪಡೆಯಲು ಮತ್ತು ಉನ್ನತ ವ್ಯಕ್ತಿತ್ವ ಬೆಳೆಸಿಕೊಳ್ಳಲು ಪ್ರೇರಣೆ ನೀಡುತ್ತದೆ ಎಂದರು.


ರಾಜ್ಯಕ್ಕೆ 10ನೆ ರ‍್ಯಾಂಕ್ ಪಡೆದ ಅಪೇಕ್ಷಾ (ಶ್ರೀ ಶಾರದಾಗಣಪತಿ ವಿದ್ಯಾಕೇಂದ್ರ ಪುಣ್ಯಕೋಟಿನಗರ) ಮತ್ತು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವ ನಿಹಾರಿ ಕುಲಾಲ್(ವಿಶ್ವಮಂಗಳ), ಸಾನ್ವಿ (ಶ್ರೀ ಶಾರದಾಗಣಪತಿ ವಿದ್ಯಾಕೇಂದ್ರ ಪುಣ್ಯಕೋಟಿನಗರ), ತನ್ವಿತಾ ಎಂ. ಕುಲಾಲ್ (ಶ್ರೀ ಶಾರದಾಗಣಪತಿ ವಿದ್ಯಾಕೇಂದ್ರ ಪುಣ್ಯಕೋಟಿನಗರ), ಆದಿತ್ಯ ಕೆ. (ಶ್ರೀ ಶಾರದಾಗಣಪತಿ ವಿದ್ಯಾಕೇಂದ್ರ ಪುಣ್ಯಕೋಟಿನಗರ), ಶೈಲಶ್ರೀ (ಶ್ರೀ ಶಾರದಾಗಣಪತಿ ವಿದ್ಯಾಕೇಂದ್ರ ಪುಣ್ಯಕೋಟಿನಗರ), ದೀಕ್ಷಿತ್ (ಶ್ರೀ ಶಾರದಾಗಣಪತಿ ವಿದ್ಯಾಕೇಂದ್ರ ಪುಣ್ಯಕೋಟಿನಗರ), ಕೌಶಿಕ್ (ಶ್ರೀ ಶಾರದಾಗಣಪತಿ ವಿದ್ಯಾಕೇಂದ್ರ ಪುಣ್ಯಕೋಟಿನಗರ), ರಕ್ಷಾ (ಶ್ರೀ ಶಾರದಾಗಣಪತಿ ವಿದ್ಯಾಕೇಂದ್ರ ಪುಣ್ಯಕೋಟಿನಗರ), ಜ್ಞಾನೇಶ್ ಕೆ.ವಿ. (ನವೋದಯ) ತೇಜಸ್ (ನವೋದಯ) ಇವರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು.


ಕಾರ್ಯಕ್ರಮದಲ್ಲಿ ಪ್ರಗತಿಪರ ಕೃಷಿಕ ಮಂಜುನಾಥ ಮೂಲ್ಯ ಮಜಲು ಕುರ್ನಾಡು, ಕುಲಾಲ ಸಂಘ ಪೈವಳಿಕೆ ಶಾಖೆಯ ಮಾಜಿ ಅಧ್ಯಕ್ಷ ಪೂವಪ್ಪ ಕುಲಾಲ್ ಮುನ್ನಿಪ್ಪಾಡಿ, ಸಮಾಜಸೇವಕ ಮೋಹನ್‌ದಾಸ್ ವಿದ್ಯಾನಗರ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಪ್ರತಿನಿಧಿ ಶಕೀಲಾ ಕೊಡಕ್ಕಲ್ಲು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ (ರಿ.) ಉಳ್ಳಾಲ ವಿಧಾನಸಭಾ ಕ್ಷೇತ್ರ ಇದರ ಅಧ್ಯಕ್ಷ ನವೀನ್ ಪಿದಮಲೆ, ಉಪಾಧ್ಯಕ್ಷ ಹರೀಶ್ ಮೂಳೂರು, ಶಾರದಾ ಐತಪ್ಪ ನಡುಪದವು, ಯುವ ಉದ್ಯಮಿ ಸತೀಶ್ ಚೇಳೂರು, ಲತಾ ಮಜಲು, ಜಯಂತ ಪಾದಲ್ಪಾಡಿ, ಹರಿಶ್ಚಂದ್ರ ಮಜಲು, ಮೋಹನ ಮಜಲು, ದೇವಪ್ಪ ಕುಲಾಲ್ ಬಡಕಾಯಿ, ಲಕ್ಷö್ಮಣ ಕುಲಾಲ್ ವಿದ್ಯಾನಗರ, ಸುಂದರ ಕುಲಾಲ್ ಕೊಡಕ್ಕಲ್ಲು, ಯಜ್ಞೇಶ್ ಮುಡಿಪು, ಭಾಸ್ಕರ ಕುಲಾಲ್ ಮತ್ತು ಮಮತಾ ಕುಲಾಲ್ ವಿದ್ಯಾನಗರ, ಯಶವಂತ ಮುಡಿಪು, ವಿನೋದ್ ಕೊಡಕ್ಕಲ್ಲು ಉಪಸ್ಥಿತರಿದ್ದರು.


ಪ್ರತಿಭಾ ಪುರಸ್ಕೃತರ ತಂದೆತಾಯಿ, ಪೋಷಕರು ಹಾಗೂ ಸ್ಥಳೀಯರು ಸಮಾರಂಭದಲ್ಲಿ ಭಾಗವಹಿಸಿದ್ದರು.


ಆಕಾಶವಾಣಿ ಮಂಗಳೂರು ಕೇಂದ್ರದ ಸಾಂದರ್ಭಿಕ ಉದ್ಘೋಷಕ ಪ್ರವೀಣ್ ಅಮ್ಮೆಂಬಳ ಪ್ರತಿಭಾ ಪುರಸ್ಕೃತರ ಪರಿಚಯ ನೀಡಿದರು. ಜಯಂತ ಸಂಕೋಳಿಗೆ ಪ್ರಾಸ್ತಾವಿಕ ನುಡಿ ಹಾಗೂ ಧನ್ಯವಾದ ಸಮರ್ಪಣೆ ನಿರ್ವಹಿಸಿದರು. ಯುವ ಕಲಾವಿದ ಹೇಮಚಂದ್ರ ಕೈರಂಗಳ ಸ್ವಾಗತ, ಪ್ರಾರ್ಥನೆ, ನಿರೂಪಣೆಯಲ್ಲಿ ಸಹಕರಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top