ಕುಮಟಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿದ ಪರಿಣಾಮ ಕುಮಟಾ ತಾಲೂಕಿನ ಬೆಣ್ಣೆಹೊಳೆ ಹಳ್ಳ ತುಂಬಿ ಹರಿದಿದ್ದು ಕುಮಟಾ-ಶಿರಸಿ ಭಾಗದ ದೇವಿಮನೆ ಘಟ್ಟದ ರಾಷ್ಟ್ರೀಯ ಹೆದ್ದಾರಿ 766E ಸಂಪರ್ಕಿಸುವ ರಸ್ತೆ ಕೊಚ್ಚಿಹೋಗಿದೆ.
ಇದರಿಂದಾಗಿ ಕುಮಟಾ ಭಾಗದಿಂದ ಶಿರಸಿ ಸಂಪರ್ಕಿಸುವ ರಸ್ತೆ ಸಂಪರ್ಕ ಕಡಿತವಾಗಿದೆ. ಈ ಹಿಂದೆ ಹೆದ್ದಾರಿ ಕಾಮಗಾರಿ ಸಂಬಂಧ ತಾತ್ಕಾಲಿಕ ರಸ್ತೆ ನಿರ್ಮಿಸಲಾಗಿತ್ತು. ಆದರೆ ಇದೀಗ ತಾತ್ಕಾಲಿಕ ರಸ್ತೆಯೂ ಕೊಚ್ಚಿಹೋಗಿದ್ದು, ಇದಲ್ಲದೇ ಈ ಭಾಗದಲ್ಲಿ ಗುಡ್ಡ ಕುಸಿಯುವ ಆತಂಕ ವಿದ್ದು ತಾತ್ಕಾಲಿಕವಾಗಿ ಈ ಭಾಗದಲ್ಲಿ ತೆರಳುವ ವಾಹನ ಸಂಚಾರಕ್ಕೆ ಜಿಲ್ಲಾಧಿಕಾರಿ ನಿರ್ಬಂಧ ವಿಧಿಸಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ