ಮಂಗಳೂರು: ವೀರರಾಣಿ ಅಬ್ಬಕ್ಕ ಅವರ 500 ವರ್ಷದ ಸ್ಮರಣೆಯ ಪ್ರಯುಕ್ತ ಉಪನ್ಯಾಸ ಸರಣಿಯ ಉದ್ಘಾಟನಾ ಕಾರ್ಯಕ್ರಮ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘ ಮಂಗಳೂರು ವಿಭಾಗದ ವತಿಯಿಂದ ಮಂಗಳೂರಿನ ಎಸ್ ಸಿ ಎಸ್ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಹೊಸದಿಗಂತದ ಸಿಇಒ ಪ್ರಕಾಶ್ ಪಿ ಎಸ್ ಅವರು ದೀಪ ಬೆಳಗಿಸಿ ಉದ್ಘಾಟಿಸಿ, 'ವೀರರಾಣಿ ಅಬ್ಬಕ್ಕನ ಪರಂಪರೆ ಮತ್ತು ಆಕೆಯ ಆಡಳಿತ ವೈಖರಿ, ಆಕೆ ಬದುಕಿದ ಸಾಮರಸ್ಯಯುಕ್ತ ಬದುಕೆ ಈ ಸಮಾಜದ ಆದರ್ಶ ಸ್ಥಿತಿ ಎಂದು ತಿಳಿಸಿದರು.
ಎಸ್ ಸಿ ಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಕಬ್ಬಿನಾಲೆ ಬಾಲಕೃಷ್ಣ ಭಾರದ್ವಾಜ್ ಅಧ್ಯಕ್ಷೀಯ ಭಾಷಣ ಮಾಡಿದರು. ನಂತರ "ಭಾರತ ವರ್ಷದ ವೀರರಾಣಿಯರ ಸ್ಮರಣೆ" ಎಂಬ ವಿಷಯದ ಕುರಿತು ವಿಚಾರಸಂಕಿರಣ ನಡೆಯಿತು. ವೀರರಾಣಿ ಅಬ್ಬಕ್ಕನ ಕುರಿತು ಬೆಂಗಳೂರು ಮಹಾರಾಣಿ ಮಹಿಳಾ ಕಾಲೇಜಿನ ಪ್ರಾಂಶುಪಾಲೆ ಪ್ರೊ. ಕುಶಲರವರು ಅಬ್ಬಕ್ಕನ ಜೀವನ ಮತ್ತು ಆಡಳಿತ ಮೌಲ್ಯವನ್ನು, ಆಕೆಯ ಶೌರ್ಯ, ಸಾಹಸ ಗಾಥೆಗಳನ್ನು ತಿಳಿಸಿದರು.
ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯದ ಪ್ರಾಂಶುಪಾಲೆ ಡಾ. ಶೋಭಿತ ಸತೀಶ್ ರವರು ರಾಣಿ ಅಹಲ್ಯಾಬಾಯಿ ಹೋಲ್ಕರ್ ಅವರ ಕುರಿತು ಮಾತನಾಡಿ, ಸಮರ್ಥ ಆಡಳಿತದಲ್ಲಿ ರಾಜಕೀಯ ಶಿಕ್ಷಣ ಕಾನೂನು ವ್ಯವಸ್ಥೆಯನ್ನು ಯಾವ ರೀತಿಯಾಗಿ ನಡೆಸಿದರು ಎಂಬುದನ್ನು ತಿಳಿಸಿದರು.
ಶ್ರೀ ಲಕ್ಷ್ಮಿ ಮಠದ ಮೂಲೆ ಅವರು ಕಿತ್ತೂರು ರಾಣಿ ಚೆನ್ನಮ್ಮನ ಜೀವನ ಮತ್ತು ಆಡಳಿತ ಪ್ರಜ್ಞೆಯ ಕುರಿತು ಉಪನ್ಯಾಸ ನೀಡಿದರು. ಸಮಾರೋಪ ಭಾಷಣದಲ್ಲಿ ಕರ್ನಾಟಕ ರಾಜ್ಯ ಶಿಕ್ಷಕ ಸಂಘ ಇದರ ರಾಜ್ಯ ಜಂಟಿ ಪ್ರಧಾನ ಕಾರ್ಯದರ್ಶಿ ಡಾ. ಮಾಧವ ಎಂ ಕೆ ಮತ್ತು ಅಧ್ಯಕ್ಷತೆಯನ್ನು ಸಂಸ್ಥೆಗಳ ಆಡಳಿತ ಅಧಿಕಾರಿ ಯು.ಕೆ ಖಾಲಿದ್ ವಹಿಸಿ ಅಧ್ಯಕ್ಷೀಯ ನುಡಿಗಳನ್ನಾಡಿದರು. ಮಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರು ಡಾ. ಮಹದೇಶ ಮತ್ತು ಡಾ. ಎಸ್.ಬಿ.ಎಂ ಪ್ರಸನ್ನ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕೆ ಆರ್ ಎಂ ಎಸ್ ಎಸ್ ಮಂಗಳೂರು ವಿಭಾಗದ ಅಧ್ಯಕ್ಷರಾದ ವಾಣಿ ಯು.ಎಸ್ ಸ್ವಾಗತಿಸಿದರು. ಉಪನ್ಯಾಸಕರಾದ ಸುಚಿತ್ರಾ.ಪಿ.ಶೆಟ್ಟಿ ಧನ್ಯವಾದ ಮಾಡಿದರು. ಕಾರ್ಯಕ್ರಮದ ಸಂಯೋಜಕ ವೆಂಕಟೇಶ್ ನಾಯಕ್ ಕಾರ್ಯಕ್ರಮ ನಿರೋಪಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ