ಬಂಟ್ವಾಳ: ಅನಂತಾಡಿ ಹಿರ್ತಂದಬೈಲು ವಿಶ್ವನಾಥ ರೈ (84) ಇವರು ಶುಕ್ರವಾರ (ಮೇ 30) ಸ್ವಗೃಹದಲ್ಲಿ ನಿಧನ ಹೊಂದಿದರು. ಅವರು ಪುತ್ತೂರು ಸರ್ವೆ, ನೇರಳಕಟ್ಟೆ, ಅನಂತಾಡಿ ಸರಕಾರಿ ಶಾಲೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ, ಅನಂತಾಡಿಯಲ್ಲಿ ನಿವೃತ್ತ ಜೀವನ ನಡೆಸುತ್ತಿದ್ದರು. ಜನಾನುರಾಗಿ ಪರೋಪಕಾರಿಯಾಗಿ ಜೀವನ ನಡೆಸುತ್ತಿದ್ದ ಇವರು ಹಲವಾರು ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಪುತ್ರರಾದ ಶಶಿಧರ್ ರೈ ಹಾಗೂ ಬಿ.ಸಿ. ರೋಡಿನ ಪ್ರಸಿದ್ದ ದಂತ ವೈದ್ಯರಾದ ಮುರಳೀಧರ ರೈ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ