ರೋಟರಿ ಕ್ಲಬ್ : ಧರ್ಮಸ್ಥಳದಲ್ಲಿ ರಕ್ತದಾನ ಶಿಬಿರ, 1200 ಕ್ಕೂ ಹೆಚ್ಚು ಯುನಿಟ್ ಸಂಗ್ರಹ

Upayuktha
0




ಧರ್ಮಸ್ಥಳ:  ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಉಜಿರೆಯ ಎಸ್.ಡಿ.ಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವದ ಸ್ಮರಣಾರ್ಥ, ಪ್ರಾಥಮಿಕ ಕೃಷಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಧರ್ಮಸ್ಥಳ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಮತ್ತು  ಮಂಗಳೂರಿನ ಕೆಎಂಸಿ ಬ್ಲಡ್ ಬ್ಯಾಂಕ್ ಸಹಯೋಗದೊಂದಿಗೆ ಧರ್ಮಸ್ಥಳದ ಅಟಲ್ ಜೀ ಸಭಾ ಭವನದಲ್ಲಿ ಬೃಹತ್ ರಕ್ತದಾನ ಶಿಬಿರ ಜರುಗಿತು.              

 
ಉಜಿರೆಯ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತಸರ ಶರತ್ ಕೃಷ್ಣ ಪಡುವೆಟ್ನಾಯ ಶಿಬಿರ ಉದ್ಘಾಟಿಸಿ, ರಕ್ತದಾನ ಮಾಡುವುದು ಒಂದು ಮಹತ್ತರವಾದ ಕಾರ್ಯ. ಈ ಶಿಬಿರವು ಸೇವೆಯ ಜೊತೆಗೆ ಆರೋಗ್ಯದ ಜಾಗೃತಿಯನ್ನು ಮೂಡಿಸುತ್ತದೆ. ದಾನದಿಂದ ಸಂಗ್ರಹವಾದ ರಕ್ತ ಅನೇಕರ ಬದುಕನ್ನು ಉಳಿಸುತ್ತದೆ. ಇವೆಲ್ಲದಕ್ಕೂ ಮಿಗಿಲಾಗಿ ಪ್ರಸ್ತುತ ಸಂದರ್ಭದ ನಾಡಿನ ಸ್ಥಿತಿಗತಿಗೆ ನಾವೆಲ್ಲ ಒಂದು ಎಂಬ ಸಂದೇಶವನ್ನು ಸಾರುತ್ತದೆ ಎಂದರು.

ಇದೇ ಸಂದರ್ಭದಲ್ಲಿ  ಕಳೆದ 50 ವರ್ಷಗಳಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ನಿರಂತರವಾಗಿ ಮಾಡಿಕೊಂಡು ಬಂದು, ಪ್ರಸ್ತುತ ಬೃಹತ್ ರಕ್ತದಾನ ಶಿಬಿರ ವನ್ನು ಆಯೋಜಿಸಿರುವ ರೋಟರಿ ಕ್ಲಬ್ ಬೆಳ್ತಂಗಡಿಗೆ ಅಭಿನಂದಿಸಿದರು.

ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದ ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರನ್ ವರ್ಮ, ಬೆಳ್ತಂಗಡಿಯ ರೋಟರಿ ಸಂಸ್ಥೆಯು ಕಳೆದ ಅನೇಕ ವರ್ಷಗಳಿಂದ ಸಮಾಜಸೇವಾ ಕಾರ್ಯಗಳನ್ನು ಮಾಡುತ್ತಾ ಬಂದಿದೆ. ಈ ಬಾರಿ 2 ಕೋಟಿ ರೂ. ಮೊತ್ತದಷ್ಟು ಸಾಮಜ ಮುಖಿ ಕಾರ್ಯಗಳು ನಡೆದಿವೆ. ಇದರ ಭಾಗವಾಗಿ ಈ ಬೃಹತ್ ರಕ್ತದಾನ ಶಿಬಿರವು ಒಂದು. ಇದಕ್ಕೆ ಹಲವು ಸಂಘ ಸಂಸ್ಥೆಗಳು ಸಹಕಾರ ನೀಡಿದೆ. ಈ ರಕ್ತದಾನ ನೂರಾರು ಜನರ ಆರೋಗ್ಯವನ್ನು ಬದುಕಿಸಲು ಉಪಯೋಗವಾಗಲಿದೆ ಎಂದರು.ರೋಟರಿ ಕ್ಲಬ್ ಬೆಳ್ತಂಗಡಿ ಪ್ರಸಕ್ತ ವರ್ಷದಲ್ಲಿ ಹಲವು ಬಾರಿ ಬೃಹತ್ ರಕ್ತದಾನ ಶಿಬಿರಗಳನ್ನು ಆಯೋಜಿಸಿದೆ. ಈ ಮೂಲಕ ಒಟ್ಟು 1200 ಕ್ಕೂ ಅಧಿಕ ಯುನಿಟ್ ನಷ್ಟು ರಕ್ತ ದಾನಿಗಳಿಂದ ಸಂಗ್ರಹ ಮತ್ತು ತುರ್ತು ಸಂದರ್ಭಗಳಲ್ಲಿ ಅಗತ್ಯವಿದ್ದವರಿಗೆ ರಕ್ತದ ವ್ಯವಸ್ಥೆಯನ್ನು ಕಲ್ಪಿಸಿಕೊಟ್ಟು, ವಿಶೇಷ ಸಾಧನೆ ಮೆರೆದಿದೆ. ಬೆಳ್ತಂಗಡಿಯ ರೋಟರಿ ಸಂಸ್ಥೆಯು ಕಳೆದ ಅನೇಕ ವರ್ಷಗಳಿಂದ ಸಮಾಜಸೇವಾ ಕಾರ್ಯಗಳನ್ನು ಮಾಡುತ್ತಾ ಬಂದಿದೆ.  ಈಗಾಗಲೇ ಸರ್ಕಾರಿ ಶಾಲಾ ಕಾಲೇಜುಗಳ ದುರಸ್ತಿ ಕಾರ್ಯ, ನೂತನ ಶೌಚಾಲಯ ಮತ್ತು ಶಾಲಾ ಕೊಠಡಿಗಳ ನಿರ್ಮಾಣ, ಅಗತ್ಯವಿರುವ ಮತ್ತು ಅರ್ಹರಿಗೆ ಸ್ಕಾಲರ್ಶಿಪ್ ವಿತರಣೆ, ಸರ್ಕಾರಿ ಆಸ್ಪತ್ರೆಗಳ ದುರಸ್ಥಿ ಕಾರ್ಯ ಮತ್ತು ಉಪಕರಣಗಳ ಕೊಡುಗೆ ಹೀಗೆ ಅನೇಕ ಕಾರ್ಯಗಳನ್ನು ಸರ್ವರ ಸಹಕಾರದೊಂದಿಗೆ ಮಾಡುತ್ತಾ ಬಂದಿದೆ. ಈ ಬಾರಿ 2 ಕೋಟಿ ರೂ. ಮೊತ್ತದಷ್ಟು ಸಾಮಜ ಮುಖಿ ಕಾರ್ಯಗಳು ನಡೆದಿವೆ. ಇದರ ಭಾಗವಾಗಿ ಈ ಬೃಹತ್ ರಕ್ತದಾನ ಶಿಬಿರವು ಒಂದು. ಇದಕ್ಕೆ ಹಲವು ಸಂಘ ಸಂಸ್ಥೆಗಳು ಸಹಕಾರ ನೀಡಿದೆ. ಈ ರಕ್ತದಾನ ನೂರಾರು ಜನರ ಆರೋಗ್ಯವನ್ನು ಬದುಕಿಸಲು ಉಪಯೋಗವಾಗಲಿದೆ ಎಂದು ರೋಟರಿ ಕ್ಲಬ್ ಬೆಳ್ತಂಗಡಿ                  ಅಧ್ಯಕ್ಷರಾದ ಪೂರನ್ ವರ್ಮ ಹೇಳಿದ್ದಾರೆ.     

ಈ ವೇಳೆ ಕೆಎಂಸಿ ಆಸ್ಪತ್ರೆಯ ಡಾ. ಪೃಥ್ವಿ ಮಾತನಾಡಿ, ರಕ್ತದಾನದಿಂದ ಯಾವುದೇ ಆರೋಗ್ಯದ ನಷ್ಟ ಇಲ್ಲ. ಇಂತಹ ಶಿಬಿರಗಳಿಂದ ಸಂಗ್ರಹವಾದ ರಕ್ತ ಎಷ್ಟೋ ತುರ್ತು ಸನ್ನಿವೇಶದ ಸವಾಲುಗಳನ್ನು ಎದುರಿಸಲು ಸಹಕಾರಿಯಾಗುತ್ತದೆ ಎಂದರು. 
ಶಿಬಿರದಲ್ಲಿ 126 ಕ್ಕೂ ಅಧಿಕ ಯುನಿಟ್ ರಕ್ತ ಸಂಗ್ರಹಿಸಲಾಯಿತು.

ಕಾರ್ಯಕ್ರಮದಲ್ಲಿ ಧರ್ಮಸ್ಥಳ ಅನ್ನಪೂರ್ಣ ಛತ್ರದ ಪ್ರಬಂದಕ ಸುಬ್ರಹ್ಮಣ್ಯ ಪ್ರಸಾದ್, ಧರ್ಮಸ್ಥಳ
ಪ್ರಾಥಮಿಕ ಕೃಷಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉಪಾಧ್ಯಕ್ಷ ಅಜಿತ್ ಜೈನ್, ಎಸ್.ಡಿ.ಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಮಿತಿಯ ಕೋಶಾಧಿಕಾರಿ ಮೋಹನ್ ಶೆಟ್ಟಿಗಾರ್ ಸೇರಿದಂತೆ ರೋಟರಿ ಕ್ಲಬ್ ಕಾರ್ಯದರ್ಶಿ ರೋ. ಸಂದೇಶ್ ಕುಮಾರ್ ರಾವ್, ರೋ. ಶ್ರೀಧರ್ ಕೆವಿ, ರೋ. ಅಬೂಬಕ್ಕರ್ , ರೋ. ವಿದ್ಯಾ ಕುಮಾರ್ ಕಾಂಚೋಡು, ರೋ. ಪ್ರಕಾಶ್ ಪ್ರಭು , ರೋ. ದಯಾಕರ್ , ಎಸ್ ಕೆ ಡಿ ಆರ್ ಡಿ ಪಿ ಯೋಜನಾಧಿಕಾರಿಗಳು, ಕೆಎಂಸಿ ಆಸ್ಪತ್ರೆಯ ಸಿಬ್ಬಂದಿಗಳು, ಪ್ರಾಥಮಿಕ ಕೃಷಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸಿಬ್ಬಂದಿಗಳು ಮತ್ತು ರೋಟರಿ ಕ್ಲಬ್ ಬೆಳ್ತಂಗಡಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಪ್ರಾಥಮಿಕ ಕೃಷಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸಿಬ್ಬಂದಿ ಸ್ವರ್ಣ ನಿರೂಪಿಸಿ, ಬೆಳ್ತಂಗಡಿ ರೋಟರಿ ಕ್ಲಬ್ ಸದಸ್ಯ ರೋ. ಪ್ರಕಾಶ್ ಪ್ರಭು ವಂದಿಸಿದರು.


Post a Comment

0 Comments
Post a Comment (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top