ರೋಟರಿ ಕ್ಲಬ್ : ಧರ್ಮಸ್ಥಳದಲ್ಲಿ ಬೃಹತ್ ರಕ್ತದಾನ ಶಿಬಿರ, 126 ಯುನಿಟ್ ರಕ್ತ ಸಂಗ್ರಹ
ಧರ್ಮಸ್ಥಳ: ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಉಜಿರೆಯ ಎಸ್.ಡಿ.ಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವದ ಸ್ಮರಣಾರ್ಥ, ಪ್ರಾಥಮಿಕ ಕೃಷಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಧರ್ಮಸ್ಥಳ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಮತ್ತು ಮಂಗಳೂರಿನ ಕೆಎಂಸಿ ಬ್ಲಡ್ ಬ್ಯಾಂಕ್ ಸಹಯೋಗದೊಂದಿಗೆ ಧರ್ಮಸ್ಥಳದ ಅಟಲ್ ಜೀ ಸಭಾ ಭವನದಲ್ಲಿ ಬೃಹತ್ ರಕ್ತದಾನ ಶಿಬಿರ ಜರುಗಿತು.
ಉಜಿರೆಯ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತಸರ ಶರತ್ ಕೃಷ್ಣ ಪಡುವೆಟ್ನಾಯ ಶಿಬಿರ ಉದ್ಘಾಟಿಸಿ, ರಕ್ತದಾನ ಮಾಡುವುದು ಒಂದು ಮಹತ್ತರವಾದ ಕಾರ್ಯ. ಈ ಶಿಬಿರವು ಸೇವೆಯ ಜೊತೆಗೆ ಆರೋಗ್ಯದ ಜಾಗೃತಿಯನ್ನು ಮೂಡಿಸುತ್ತದೆ. ದಾನದಿಂದ ಸಂಗ್ರಹವಾದ ರಕ್ತ ಅನೇಕರ ಬದುಕನ್ನು ಉಳಿಸುತ್ತದೆ. ಇವೆಲ್ಲದಕ್ಕೂ ಮಿಗಿಲಾಗಿ ಪ್ರಸ್ತುತ ಸಂದರ್ಭದ ನಾಡಿನ ಸ್ಥಿತಿಗತಿಗೆ ನಾವೆಲ್ಲ ಒಂದು ಎಂಬ ಸಂದೇಶವನ್ನು ಸಾರುತ್ತದೆ ಎಂದರು.
ಇದೇ ಸಂದರ್ಭದಲ್ಲಿ ಕಳೆದ 50 ವರ್ಷಗಳಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ನಿರಂತರವಾಗಿ ಮಾಡಿಕೊಂಡು ಬಂದು, ಪ್ರಸ್ತುತ ಬೃಹತ್ ರಕ್ತದಾನ ಶಿಬಿರ ವನ್ನು ಆಯೋಜಿಸಿರುವ ರೋಟರಿ ಕ್ಲಬ್ ಬೆಳ್ತಂಗಡಿಗೆ ಅಭಿನಂದಿಸಿದರು.
ಕಾರ್ಯಕ್ರಮವನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದ ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರನ್ ವರ್ಮ, ಬೆಳ್ತಂಗಡಿಯ ರೋಟರಿ ಸಂಸ್ಥೆಯು ಕಳೆದ ಅನೇಕ ವರ್ಷಗಳಿಂದ ಸಮಾಜಸೇವಾ ಕಾರ್ಯಗಳನ್ನು ಮಾಡುತ್ತಾ ಬಂದಿದೆ. ಈ ಬಾರಿ 2 ಕೋಟಿ ರೂ. ಮೊತ್ತದಷ್ಟು ಸಾಮಜ ಮುಖಿ ಕಾರ್ಯಗಳು ನಡೆದಿವೆ. ಇದರ ಭಾಗವಾಗಿ ಈ ಬೃಹತ್ ರಕ್ತದಾನ ಶಿಬಿರವು ಒಂದು. ಇದಕ್ಕೆ ಹಲವು ಸಂಘ ಸಂಸ್ಥೆಗಳು ಸಹಕಾರ ನೀಡಿದೆ. ಈ ರಕ್ತದಾನ ನೂರಾರು ಜನರ ಆರೋಗ್ಯವನ್ನು ಬದುಕಿಸಲು ಉಪಯೋಗವಾಗಲಿದೆ ಎಂದರು.
ಈ ವೇಳೆ ಕೆಎಂಸಿ ಆಸ್ಪತ್ರೆಯ ಡಾ. ಪೃಥ್ವಿ ಮಾತನಾಡಿ, ರಕ್ತದಾನದಿಂದ ಯಾವುದೇ ಆರೋಗ್ಯದ ನಷ್ಟ ಇಲ್ಲ. ಇಂತಹ ಶಿಬಿರಗಳಿಂದ ಸಂಗ್ರಹವಾದ ರಕ್ತ ಎಷ್ಟೋ ತುರ್ತು ಸನ್ನಿವೇಶದ ಸವಾಲುಗಳನ್ನು ಎದುರಿಸಲು ಸಹಕಾರಿಯಾಗುತ್ತದೆ ಎಂದರು.
ಶಿಬಿರದಲ್ಲಿ 120 ಕ್ಕೂ ಅಧಿಕ ಯುನಿಟ್ ರಕ್ತ ಸಂಗ್ರಹಿಸಲಾಯಿತು.
ಬೆಳ್ತಂಗಡಿಯ ರೋಟರಿ ಸಂಸ್ಥೆಯು ಕಳೆದ ಅನೇಕ ವರ್ಷಗಳಿಂದ ಸಮಾಜಸೇವಾ ಕಾರ್ಯಗಳನ್ನು ಮಾಡುತ್ತಾ ಬಂದಿದೆ. ಈಗಾಗಲೇ ಸರ್ಕಾರಿ ಶಾಲಾ ಕಾಲೇಜುಗಳ ದುರಸ್ತಿ ಕಾರ್ಯ, ನೂತನ ಶೌಚಾಲಯ ಮತ್ತು ಶಾಲಾ ಕೊಠಡಿಗಳ ನಿರ್ಮಾಣ, ಅಗತ್ಯವಿರುವ ಮತ್ತು ಅರ್ಹರಿಗೆ ಸ್ಕಾಲರ್ಶಿಪ್ ವಿತರಣೆ, ಸರ್ಕಾರಿ ಆಸ್ಪತ್ರೆಗಳ ದುರಸ್ಥಿ ಕಾರ್ಯ ಮತ್ತು ಉಪಕರಣಗಳ ಕೊಡುಗೆ ಹೀಗೆ ಅನೇಕ ಕಾರ್ಯಗಳನ್ನು ಸರ್ವರ ಸಹಕಾರದೊಂದಿಗೆ ಮಾಡುತ್ತಾ ಬಂದಿದೆ. ಈ ಬಾರಿ 2 ಕೋಟಿ ರೂ. ಮೊತ್ತದಷ್ಟು ಸಾಮಜ ಮುಖಿ ಕಾರ್ಯಗಳು ನಡೆದಿವೆ. ಇದರ ಭಾಗವಾಗಿ ಈ ಬೃಹತ್ ರಕ್ತದಾನ ಶಿಬಿರವು ಒಂದು. ಇದಕ್ಕೆ ಹಲವು ಸಂಘ ಸಂಸ್ಥೆಗಳು ಸಹಕಾರ ನೀಡಿದೆ. ಈ ರಕ್ತದಾನ ನೂರಾರು ಜನರ ಆರೋಗ್ಯವನ್ನು ಬದುಕಿಸಲು ಉಪಯೋಗವಾಗಲಿದೆ.
- ಪೂರನ್ ವರ್ಮ
ಅಧ್ಯಕ್ಷರು, ರೋಟರಿ ಕ್ಲಬ್ ಬೆಳ್ತಂಗಡಿ
ಕಾರ್ಯಕ್ರಮದಲ್ಲಿ ಧರ್ಮಸ್ಥಳ ಅನ್ನಪೂರ್ಣ ಛತ್ರದ ಪ್ರಬಂದಕ ಸುಬ್ರಹ್ಮಣ್ಯ ಪ್ರಸಾದ್, ಧರ್ಮಸ್ಥಳ ಪ್ರಾಥಮಿಕ ಕೃಷಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉಪಾಧ್ಯಕ್ಷ ಅಜಿತ್ ಜೈನ್, ಎಸ್.ಡಿ.ಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಮಿತಿಯ ಕೋಶಾಧಿಕಾರಿ ಮೋಹನ್ ಶೆಟ್ಟಿಗಾರ್ ಸೇರಿದಂತೆ ರೋಟರಿ ಕ್ಲಬ್ ಕಾರ್ಯದರ್ಶಿ ರೋ. ಸಂದೇಶ್ ಕುಮಾರ್ ರಾವ್, ರೋ. ಶ್ರೀಧರ್ ಕೆವಿ, ರೋ. ಅಬೂಬಕ್ಕರ್ , ರೋ. ವಿದ್ಯಾ ಕುಮಾರ್ ಕಾಂಚೋಡು, ರೋ. ಪ್ರಕಾಶ್ ಪ್ರಭು , ರೋ. ದಯಾಕರ್ , ಎಸ್ ಕೆ ಡಿ ಆರ್ ಡಿ ಪಿ ಯೋಜನಾಧಿಕಾರಿಗಳು, ಕೆಎಂಸಿ ಆಸ್ಪತ್ರೆಯ ಸಿಬ್ಬಂದಿಗಳು, ಪ್ರಾಥಮಿಕ ಕೃಷಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸಿಬ್ಬಂದಿಗಳು ಮತ್ತು ರೋಟರಿ ಕ್ಲಬ್ ಬೆಳ್ತಂಗಡಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಪ್ರಾಥಮಿಕ ಕೃಷಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸಿಬ್ಬಂದಿ ಸ್ವರ್ಣ ನಿರೂಪಿಸಿ, ಬೆಳ್ತಂಗಡಿ ರೋಟರಿ ಕ್ಲಬ್ ಸದಸ್ಯ ರೋ. ಪ್ರಕಾಶ್ ಪ್ರಭು ವಂದಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ