ಎಸ್.ಡಿ.ಎಂ. ನ್ಯಾಚುರೋಪತಿಗೆ ಆರ್.ಜಿ.ಯು.ಹೆಚ್.ಎಸ್ ನ ಚಿನ್ನದ ಪದಕ

Upayuktha
0


ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ  ಕಾಲೇಜಿನ 2024-25ನೇ ಸಾಲಿನ ವಿದ್ಯಾರ್ಥಿ ಡಾ. ಗನ್ಯಾಶ್ರೀ 4 ವರ್ಷಗಳಲ್ಲಿ ಮೊದಲ ಶ್ರೇಯಾಂಕಕ್ಕಾಗಿ ಹಾಗೂ ಆಯುಷ್ ವಿಭಾಗದಲ್ಲಿಯೂ ಮೊದಲನೇ ಸ್ಥಾನ ಪಡೆದು 4 ಚಿನ್ನದ ಪದಕವನ್ನು ಪಡೆದಿರುತ್ತಾರೆ.


ಇಂದು ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ 27ನೇ ಘಟಿಕೋತ್ಸವದಲ್ಲಿ ರ‍್ನಾಟಕದ ಗೌರವಾನ್ವಿತ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ  ಥಾವರ್ ಚಂದ್ ಗೆಹ್ಲೋಟ್ ಅವರು ಚಿನ್ನದ ಪದಕವನ್ನು ಪ್ರದಾನ ಮಾಡಿದರು. 


ಈ ಸಂದರ್ಭದಲ್ಲಿ ಅಧ್ಯಕ್ಷರು, ಅಜೀಂ ಪ್ರೇಮ್‌ಜಿ ಫೌಂಡೇಶನ್, ಸಂಸ್ಥಾಪಕ ಮತ್ತು ಅಧ್ಯಕ್ಷರು, ವಿಪ್ರೋ ಲಿಮಿಟೆಡ್ ಮತ್ತು ವಿಪ್ರೋ ಎಂಟರ್‌ಪ್ರೈಸಸ್ ಲಿಮಿಟೆಡ್ ಹಾಗೂ ಡಾ. ಶರಣಪ್ರಕಾಶ್ ಆರ್ ಪಾಟೀಲ್, ಕರ್ನಾಟಕ ಸರಕಾರದ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವರು, ವಿಶ್ವವಿದ್ಯಾಲಯದ ಸಹ-ಕುಲಪತಿಗಳು ಹಾಗೂ ಕುಲಸಚಿವರು ಉಪಸ್ಥಿತರಿದ್ದರು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top