ಉಜಿರೆಯ ಸಿದ್ಧವನದಲ್ಲಿ ಶಂಕರ ಜಯಂತಿ

Upayuktha
0


ಉಜಿರೆ: 'ಆಚಾರ್ಯ ತ್ರಯರಲ್ಲಿ ಶಂಕರರದ್ದು ದೊಡ್ಡ ಹೆಸರು. ಭಾರತದ ಇಕ್ಕೆಲೆಗಳಲ್ಲಿ ಸಂಚರಿಸಿ ಧರ್ಮದ ಪುನರುತ್ಥಾನ ಮಾಡಿದ ಮಹಾನುಭಾವರು. ಪ್ರಸ್ಥಾನತ್ರಯ ಭಾಷ್ಯ ರಚನೆಯೇ ಮುಂತಾದ ಅನೇಕ ಕೃತಿಗಳನ್ನು ಲೋಕಕ್ಕೆ ನೀಡಿದ ಮಹಾನ್ ದಾರ್ಶನಿಕರು. ಬಾಲ್ಯದಲ್ಲಿಯೇ ಸನ್ಯಾಸತ್ವ ಸ್ವೀಕರಿಸಿ,  ವೇದಾದಿಗಳನ್ನು, ಶಾಸ್ತ್ರಗಳ ಜ್ಞಾನದೀವಿಗೆ ಪಡೆದು ಲೋಕಕ್ಕೆ ಹೊಸ ಬೆಳಕನ್ನು ನೀಡಿದವರು ಶಂಕರರು' ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸನ್ನಕುಮಾರ ಐತಾಳ್ ಹೇಳಿದರು. 


ಇವರು ಉಜಿರೆಯ ಸಿದ್ದವನ ಗುರುಕುಲದಲ್ಲಿ ನಡೆದ ಶಂಕರ ಜಯಂತಿ ಕಾರ್ಯಕ್ರಮದ ಅಭ್ಯಾಗತರಾಗಿ ಮಾತನಾಡಿದರು. 


ಗುರುಕುಲದ ಪ್ರಧಾನ ಪಾಲಕರಾದ ಕೇಶವ ನಾಯ್ಕ್ ಅಧ್ಯಕ್ಷತೆ ವಹಿಸಿ ಶಂಕರರ ಜೀವನದ ಬಗ್ಗೆ ಮಾತನಾಡಿದರು. 

ಸಹ ಪಾಲಕರಾದ ಸಚಿನ್ ಉಪಸ್ಥಿತರಿದ್ದರು. ವಿದ್ಯಾರ್ಥಿ ರೋಹಿತ್ ನಿರೂಪಿಸಿ ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top