ಪುತ್ತೂರು: ಶೃಂಗೇರಿ ಜಗದ್ಗುರುಗಳ ಮಾರ್ಗದರ್ಶನದೊಂದಿಗೆ ಪುತ್ತೂರು ತಾಲೂಕಿನಾದ್ಯಂತ ಆರಂಭಿಸಲಾಗುತ್ತಿರುವ ಹಿಂದೂ ಧರ್ಮ ಶಿಕ್ಷಣವನ್ನು ನಿರ್ವಹಿಸುವ ಉದ್ದೇಶದೊಂದಿಗೆ ಅಸ್ತಿತ್ವಕ್ಕೆ ಬಂದಿರುವ ತಾಲೂಕು ಧರ್ಮ ಶಿಕ್ಷಣ ಸಮಿತಿಯ ವತಿಯಿಂದ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಮೇ 5ರಂದು ಶೃಂಗೇರಿಯಲ್ಲಿ ಜಗದ್ಗುರುಗಳಾದ ಶ್ರೀ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ ಅಮೃತ ಹಸ್ತದಿಂದ ಧರ್ಮ ಶಿಕ್ಷಣ ತರಗತಿಗಳು ಉದ್ಘಾಟನೆಗೊಳ್ಳಲಿದ್ದು, ಆ ಕಾರ್ಯಕ್ರಮಕ್ಕೆ ಪುತ್ತೂರಿನಿಂದ ಸಾವಿರಾರು ಮಂದಿ ಭಾಗಿಯಾಗುವ ಯೋಜನೆ ಹಾಕಿಕೊಳ್ಳಲಾಗಿದೆ. ಆ ದಿನ ಶೃಂಗೇರಿಗೆ ತೆರಳುವವರಿಗೆ ಉಚಿತ ಬಸ್ ಹಾಗೂ ಊಟೋಪಚರದ ವ್ಯವಸ್ಥೆಯನ್ನೂ ಕಲ್ಪಿಸಿ ಕೊಡ ಲಾಗುತ್ತಿದೆ. ಎಲ್ಲಾ ಬಸ್ ಗಳೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಿಂದ ಹೊರಡಲಿದ್ದು, ಆ ದಿನದ ಸಕಲ ಯೋಜನೆಗಳೂ ಸಾಂಗವಾಗಿ ನೆರವೆರುವಂತೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಾನದಲ್ಲಿ ಬೇಡಿಕೊಳ್ಳಲಾಯಿತು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ