ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ
ತೆಂಕನಿಡಿಯೂರು: ಶಿಕ್ಷಣ ಮತ್ತು ಪಠ್ಯೇತರ ಚಟುವಟಿಕೆಗಳ ಮೂಲಕ ಸದೃಢ ಸಂಸ್ಥೆ, ಸಮಾಜ ಮತ್ತು ರಾಷ್ಟ್ರ ನಿರ್ಮಾಣ ಸಾಧ್ಯ. ಜಿಲ್ಲೆಯ ಶಿಕ್ಷಣ ಸಂಸ್ಥೆಗಳ ಪ್ರಗತಿಗೆ ಮತ್ತು ದೇಶದ ರಕ್ಷಣೆಗೆ ದುಡಿಯುವ ಕೈಗಳು ಇನ್ನಷ್ಟು ಬಲಗೊಳ್ಳಲಿ, ಹಾಗೂ ಶುಭವಾಗಲಿ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ನುಡಿದರು.
ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರವರು ಅಮೃತ್ ಗಾರ್ಡನ್ ಉಡುಪಿಯಲ್ಲಿ ಆಯೋಜಿಸಿದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ಐಸಿರಿ 2025ನ್ನು ಉದ್ಘಾಟಿಸಿ ಮಾತನಾಡಿದರು. ಅಲ್ಲದೆ ಕಾರ್ಯಕ್ರಮದ ಸಂಚಾಲಕರು ಹಾಗೂ ಕಾಲೇಜಿನ ಗ್ರಂಥಪಾಲಕ ಕೃಷ್ಣ ಸಾಸ್ತಾನರವರು ಸಂಪಾದಿಸಿದ ಕಾಲೇಜು ವಾರ್ಷಿಕಾಂಕ ಸುದರ್ಶನವನ್ನು ಶಾಸಕರು ಬಿಡುಗಡೆಗೊಳಿಸಿದರು.
ಸಭಾ ಕಾರ್ಯಕ್ರಮದಲ್ಲಿ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಡಾ ಗಣೇಶ್ ಪ್ರಸಾದ್ ರವರನ್ನು ಸನ್ಮಾನಿಸಲಾಯಿತು. ಉಡುಪಿ ಮತ್ತು ದಕ್ಷಿಣಕನ್ನಡ ಜಿಲ್ಲೆಯ ಹತ್ತಕ್ಕೂ ಅಧಿಕ ಕಾಲೇಜುಗಳು ಐಸಿರಿ 2025ರ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಅಂತರ್ಕಾಲೇಜು ಸ್ಪರ್ಧೆ ಐಸಿರಿ 2025 ಪ್ರಥಮ ಸ್ಥಾನವನ್ನು, ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು ಕುಂದಾಪುರ, ದ್ವಿತೀಯ ಸ್ಥಾನವನ್ನು ಮಂಜುನಾಥ ಪೈ ಸ್ಮಾರಕ ಸಪ್ರದ ಕಾಲೇಜು ಕಾರ್ಕಳ, ಹಾಗೂ ತೃತೀಯ ಸ್ಥಾನವನ್ನು ಎಂಜಿಎA ಕಾಲೇಜು ಉಡುಪಿ ಪಡೆದುಕೊಂಡರು.
ಕಾರ್ಯಕ್ರಮದಲ್ಲಿ ವಿಶ್ರಾಂತ ಪ್ರಾಂಶುಪಾಲ ಎಂ ಎಲ್ ಸಾಮಗ, ಹೋಟೆಲ್ ವೈಟ್ ಲೋಟಸ್ ಉಡುಪಿಯ ಪ್ರವರ್ತಕ ಅಜಯ್ ಪಿ ಶೆಟ್ಟಿ, ಕೃಷ್ಣಯ್ಯ ಚಾರಿಟೇಬಲ್ ಟ್ರಸ್ಟ್ ಪ್ರವರ್ತಕ ಮುನಿಯಾಲು ಉದಯ್ಕುಮಾರ್ ಶೆಟ್ಟಿ, ದಿನೇಶ್ ಹೆಗಡೆ ಮೊಳಹಳ್ಳಿ, ಕಾರ್ತಿಕ್ ಎಸ್ಟೇಟ್ ಪ್ರವರ್ತಕ ಹರಿಯಪ್ಪ ಕೋಟ್ಯಾನ್ ಸರಳ ಉಡ್ ಇಂಡಸ್ಟ್ರೀಸ್ ನಂದಳಿಕೆಯ ಪ್ರವರ್ತಕ ಸುಹಾಸ್ ಹೆಗ್ಡೆ, ಡಿಸ್ಟ್ರಿಕ್ಟ್ 317 ಲಯನ್ಸ್ ಕ್ಲಬ್ ಅಮೃತ್ನ ಅಧ್ಯಕ್ಷ ಲಯನ್ ಭಾರತಿ ಹೆಚ್ ಎಸ್, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿಯ ಮಾಜಿ ಶಾಸಕ ಕೆ ರಘುಪತಿ ಭಟ್, ಕಾಂಚನ್ ಹುಂಡೈ ಪ್ರವರ್ತಕ ಪ್ರಸಾದ್ರಾಜ ಕಾಂಚನ್, ಮಾಜಿ ಲಯನ್ ಗವರ್ನರ್ ಲಯನ್ ವಿಜಿ ಶೆಟ್ಟಿ, ಉಡುಪಿ ನಗರಸಭಾ ಸದಸ್ಯರಾದ ವಿಜಯ್ ಕೊಡವೂರು, ರಾಧ್ಮಾ ಹೋಟೆಲ್ ಪ್ರವರ್ತಕ ಪ್ರಖ್ಯಾತ್ ಶೆಟ್ಟಿ, ಉಡುಪಿ ತುಳು ಕೂಟದ ಸಂಘಟನಾ ಕಾರ್ಯದರ್ಶಿ ಶ್ರೀಮತಿ ವಿದ್ಯಾ ಸರಸ್ವತಿ, ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಕಾಲೇಜಿನ ಐ.ಕ್ಯೂ.ಎ.ಸಿ. ಸಂಚಾಲಕ ಡಾ. ಮೇವಿ ಮಿರಾಂದ, ಶೈಕ್ಷಣಿಕ ಸಲಹೆಗಾರ ಶ್ರೀಧರ್ ಭಟ್, ಡಾ. ಉದಯಶೆಟ್ಟಿ ಕೆ, ಶ್ರೀಮತಿ ಸುಷ್ಮಾ ಟಿ, ವಿದ್ಯಾರ್ಥಿ ಸಂಘದ ನಾಯಕರಾದ ರಿಶಿತ್ ಸಾಲಿಯಾನ್ ಮತ್ತು ನೈನಾ ಶೆಟ್ಟಿ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲ ನಿತ್ಯಾನಂದ ವಿ ಗಾಂವಕರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ ರಘು ನಾಯ್ಕ ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರಶಾಂತ್ ನೀಲಾವರ ವಂದಿಸಿದರು. ಡಾ. ರೋಶನ್ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ