ಕರ್ನಾಟಕ ಶಾಸ್ತ್ರೀಯ ಸಂಗೀತಕ್ಕೆ ವಿದ್ವಾನ್ ಸುಬ್ರಾಯ ಮಾಣಿ ಭಾಗವತರ್ ಕೊಡುಗೆ ಅಪಾರ

Upayuktha
0


ಸುರತ್ಕಲ್‌: ಕರ್ನಾಟಕ ಶಾಸ್ತ್ರೀಯ ಸಂಗೀತಕ್ಕೆ ವಿದ್ವಾನ್ ಶ್ರೀ ಸುಬ್ರಾಯ ಮಾಣಿ ಭಾಗವತರ್ ಅವರ ಕೊಡುಗೆ ಅಪಾರವಾಗಿದ್ದು, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಸ್ತ್ರೀಯ ಸಂಗೀತದ ಕಲಿಕೆಗೆ ಅವಕಾಶ ಸೃಷ್ಟಿಸಿದ ಶ್ರೇಷ್ಠ ಗುರುಗಳು ಎಂದು ಮಣಿ ಕೃಷ್ಣಸ್ವಾಮಿ ಅಕಾಡಮಿಯ ಕಾರ್ಯದರ್ಶಿ ಪಿ ನಿತ್ಯಾನಂದ ರಾವ್ ನುಡಿದರು.


ಅವರು ಸುರತ್ಕಲ್‌ನ ಅನುಪಲ್ಲವಿಯ ಶ್ರೀ ವಿಶ್ವೇಶ ತೀರ್ಥ ಸಭಾಂಗಣದಲ್ಲಿ ಮಣಿ ಕೃಷ್ಣಸ್ವಾಮಿ ಅಕಾಡಮಿ ಮತ್ತು ನಾಗರಿಕ ಸಲಹಾ ಸಮಿತಿ, ಸುರತ್ಕಲ್ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಿದ್ದ ವಿದ್ವಾನ್ ಶ್ರೀ ಸುಬ್ರಾಯ ಮಾಣಿ ಭಾಗವತರ್ ಸಂಸ್ಮರಣಾ ಶಾಸ್ತ್ರೀಯ ಸಂಗೀತ ಕಛೇರಿ ಸಂದರ್ಭದಲ್ಲಿ ನುಡಿ ನಮನ ಸಲ್ಲಿಸಿ ಮಾತನಾಡಿದರು.


ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಕರ್ಮಯೋಗಿ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಅವರು ಹಿರಿಯ ಸಂಗೀತ ವಿದ್ವಾಂಸರ ಸ್ಮರಣೆ ನಿರಂತರವಾಗಿ ನಡೆಯ ಬೇಕು ಎಂದರು.


ಯುಗಪುರುಷ ಸಂಪಾದಕ ಭುವನಾಭಿರಾಮ ಉಡುಪ ಶುಭ ಹಾರೈಸಿದರು. ನಾಗರಿಕ ಸಲಹಾ ಸಮಿತಿ ಅಧ್ಯಕ್ಷ ಡಾ. ಕೆ. ರಾಜಮೋಹನ ರಾವ್, ಡಾ. ಅರುಣ್ ಕುಮಾರ್ ಎಸ್.ಆರ್. ರಾಗ ಧನ ಸಂಸ್ಥೆಯ ಕಾರ್ಯದರ್ಶಿ ಉಮಾ ಶಂಕರಿ, ಕಾರ್ಯಕ್ರಮದ ಪ್ರಾಯೋಜಕರಾದ ಶ್ರೀನಿವಾಸ್ ಭಾಗವತರ್, ಪಡುಬಿದ್ರೆ ಮುಂತಾದವರು ಉಪಸ್ಥಿತರಿದ್ದರು. ಕೃಷ್ಣಮೂರ್ತಿ ಚಿತ್ರಾಪುರ ವಂದಿಸಿದರು.


ಆತ್ರೇಯ ಕೃಷ್ಣ ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಿತು. ತನ್ಮಯೀ ಉಪ್ಪಂಗಳ ವಯಲಿನ್ ನಲ್ಲಿ, ನಂದನ್ ಕಶ್ಯಪ್ ಮೃದಂಗದಲ್ಲಿ ಮತ್ತು ಮೇಧಾ ಉಡುಪ ತಂಬೂರದಲ್ಲಿ ಸಹಕರಿಸಿದರು.


ಕಾರ್ಯಕ್ರಮದ ಕೊನೆಯಲ್ಲಿ ಈ ಬಾರಿಯ 'ಯುವಕಲಾಮಣಿ' ವಾರ್ಷಿಕ ಪ್ರಶಸ್ತಿಯನ್ನು ಆತ್ರೇಯೀ ಕೃಷ್ಣ ಅವರಿಗೆ ನೀಡಲಾಗುವುದೆಂದು ಪ್ರಕಟಿಸಲಾಯಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top