ಆರ್ ವೈ ಎಂ ಸಿ ಕಾಲೇಜಿನಲ್ಲಿ “ಅಸ್ತ್ರ - 2K25” ರಾಷ್ಟ್ರ ಮಟ್ಟದ ಮ್ಯಾನೇಜ್ಮೆಂಟ್ ಫೆಸ್ಟ್ ಉದ್ಘಾಟನೆ

Upayuktha
0


ಬಳ್ಳಾರಿ: ನಗರದ ವೀರಶೈವ ವಿದ್ಯಾವರ್ಧಕ ಸಂಘದ ರಾವ್ ಬಹದ್ದೂರ್ ವೈ ಮಹಾಬಲೇಶ್ವರಪ್ಪ ಇಂಜಿನಿಯರಿಂಗ್ ಕಾಲೇಜು ಎಂಬಿಎ ವಿಭಾಗದಿಂದ ರಾಷ್ಟ್ರೀಯ ಮಟ್ಟದ ಅಸ್ತ್ರ 2k25  ಮ್ಯಾನೇಜ್ಮೆಂಟ್ ಫೆಸ್ಟ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು


ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಪ್ರಶಾಂತ್ ರಾಮದುರ್ಗ  ಮಾತನಾಡಿ,  ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳು ತರಗತಿಗಳಲ್ಲಿ ಕಲಿಯುವುದಕ್ಕಿಂತ ಹೆಚ್ಚಾಗಿ ಇಂಥ ಸ್ಪರ್ಧೆಗಳಲ್ಲಿ ವೇದಿಕೆಗಳಲ್ಲಿ ಚೆನ್ನಾಗಿ ಕಲಿತು ತಮ್ಮ ನೈಪುಣ್ಯತೆ ಹೆಚ್ಚಿಸಿಕೊಳ್ಳಲು ಸಾಧ್ಯವಾಗುತ್ತದೆ. ಇಲ್ಲಿ ಕಲಿಯುವ ತಂಡ ಮುನ್ನಡೆಸುವಿಕೆ, ಸಹಕಾರ, ಕಮ್ಯುನಿಕೇಶನ್ಸ್ ಸ್ಕಿಲ್ಸ್, ಇವೆಂಟ್ ಮ್ಯಾನೇಜ್ಮೆಂಟ್ ಸ್ಕಿಲ್ಸ್ , ಸಹಕಾರ ಕಾರ್ಪೊರೇಟ್ ಜಗತ್ತಿನಲ್ಲಿ ತುಂಬಾ ಉಪಯೋಗಕ್ಕೆ ಬರುತ್ತದೆ. ಇಂತಹ ನೈಪುಣ್ಯತೆಗಳನ್ನು ವಿದ್ಯಾರ್ಥಿಗಳು ಹೆಚ್ಚುಹೆಚ್ಚಾಗಿ ಮೈಗೂಡಿಸಿಕೊಳ್ಳಬೇಕು ಎಂದು ತಿಳಿಸಿದರು.


ಈ ಕಾರ್ಯಕ್ರಮದಲ್ಲಿ ರಾಜ್ಯ ಸೇರಿದಂತೆ  ನೆರೆಯ ಆಂಧ್ರಪ್ರದೇಶದಿಂದ ಸುಮಾರು 20 ಕಾಲೇಜಿನ ವಿದ್ಯಾರ್ಥಿಗಳು  ಭಾಗವಹಿಸಿದ್ದರು. ವಿದ್ಯಾರ್ಥಿಗಳ ಪ್ರತಿಭಾ ಅನ್ವೇಷಣೆಗಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ  ಓ.ಎಸ್.ಪಿ ಲೀಡ್ - ದಕ್ಷಿಣ ಏಷ್ಯಾ ಸೇಲ್ಸ್ ಫೋರ್ಸ್, ಬೆಂಗಳೂರು,  ಕಾರ್ತಿಕ್ ಎನ್, ಎಫ್ ಪಿ ಎ ಮ್ಯಾನೇಜರ್, ಟಿ ಸಿ ಎಸ್, ಬೆಂಗಳೂರು, (ನಮ್ಮ ಎಂಬಿಎ ವಿಭಾಗದ ಗಣ್ಯ ಹಳೆಯ ವಿದ್ಯಾರ್ಥಿಗಳು), ಭಾಗವಹಿಸಿದ್ದರು. ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ ಸೃಜನಶೀಲತೆ ಆಸಕ್ತಿ ಕತೆಗಳನ್ನು ಪ್ರದರ್ಶಿಸಲು ವೇದಿಕೆಯನ್ನು ಒದಗಿಸಿತು.


ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ  ಡಾ. ಟಿ. ಹನುಮಂತರೆಡ್ಡಿ,  ಡಾ. ಸವಿತಾ ಸೋನೋಳಿ ಉಪ ಪ್ರಾಂಶುಪಾಲರು ಹಾಗೂ ಡಾ. ತಿಮ್ಮನಗೌಡ ವಿಭಾಗದ ಮುಖ್ಯಸ್ಥರು ಮಾತನಾಡಿದರು. ಸಮಾರಂಭದಲ್ಲಿ ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು ಸಿಬ್ಬಂದಿವರ್ಗ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top