ಸಾಮರ್ಥ್ಯಾಧಾರಿತ ಶಿಕ್ಷಣದಿಂದ ಭವಿಷ್ಯದಲ್ಲಿ ಮಹತ್ತರ ಬದಲಾವಣೆ

Upayuktha
0

ಡಾ.ಸಿಎ.ಎ ರಾಘವೇಂದ್ರ ರಾವ್ ಸೆಂಟರ್ ಫಾರ್ ಫ್ಯೂಚರ್ ಸ್ಕಿಲ್ ಉದ್ಘಾಟಿಸಿ ಸಚಿವ ಡಾ.ಶರಣ್ ಪ್ರಕಾಶ್ ರುದ್ರಪ್ಪ  ಪಾಟೀಲ್



ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯದ ಘಟಕವಾಗಿರುವ ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯ (SIT) ಜಾಗತಿಕ ಉದ್ಯಮ ಪ್ರವ್ರುತ್ತಿಗಳಿಗೆ ಅನುಗುಣವಾಗಿ ವಿದ್ಯಾರ್ಥಿಗಳಿಗೆ ಸುಧಾರಿತ ತಾಂತ್ರಿಕ ನಿಪುಣತೆಗಳನ್ನು ನೀಡುವ ಉದ್ದೇಶದಿಂದ ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ನಿಗಮ (NSDC) ಮತ್ತು ಎಥ್ನೋಟೆಕ್ ಅಕಾಡೆಮಿ ಸಹಭಾಗಿತ್ವದಲ್ಲಿ ಪ್ರಾರಂಭಿಸುತ್ತಿರುವ ಆವಿಷ್ಕಾರಾತ್ಮಕ ಯೋಜನೆ ಡಾ.ಸಿಎ.ಎ ರಾಘವೇಂದ್ರ ರಾವ್ ಸೆಂಟರ್ ಫಾರ್ ಫ್ಯೂಚರ್ ಸ್ಕಿಲ್ ಉದ್ಘಾಟನೆ ಕಾರ್ಯಕ್ರಮ ಜೂ.17ರಂದು ಶ್ರೀನಿವಾಸ ತಾಂತ್ರಿಕ ವಿಶ್ವವಿದ್ಯಾಲಯ ವಳಚ್ಚಿಲ್ ನಲ್ಲಿ ನಡೆಯಿತು.


ಕಾರ್ಯಕ್ರಮವನ್ನು ರಾಜ್ಯ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣ್ ಪ್ರಕಾಶ್ ರುದ್ರಪ್ಪ ಪಾಟೀಲ್ ಅವರು ಉದ್ಘಾಟಿಸಿ ಮಾತನಾಡಿ ಇಂದಿನ ಯುವಕರನ್ನು ವಿದೇಶಿ ಭಾಷೆಗಳಲ್ಲೂ ಪಾರಂಗತರನ್ನಾಗಿ ಮಾಡುವುದರ ಮೂಲಕ ಪಠ್ಯೇತರ ಚಟುವಟಿಕೆಗಳಿಗೂ ಪ್ರಾಶಸ್ತ್ಯ ನೀಡಿ ತರಬೇತು ಗೊಳಿಸಬೇಕು. ವೃತ್ತಿ ಶಿಕ್ಷಣ ಹಾಗೂ ಸಾಮರ್ಥ್ಯಾಧಾರಿತ ಶಿಕ್ಷಣದಿಂದ ಮಾತ್ರವೇ ಭವಿಷ್ಯದಲ್ಲಿ ಮಹತ್ತರ ಬದಲಾವಣೆ ತರಲು ಸಾಧ್ಯ ಎಂದರು. ಸಂಸ್ಥೆಯಲ್ಲಿ ಸೆಂಟರ್ ಶುಭಾರಂಭವನ್ನು ಅಧಿಕೃತವಾಗಿ ಘೋಷಿಸಿ ಯುವಕರಿಗೆ ಔದ್ಯೋಗಿಕ ರಂಗದಲ್ಲಿ ನೀಡಬೇಕಾದ ಪ್ರಾಧಾನ್ಯತೆ ಕುರಿತು ಮಾತನಾಡಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶ್ರೀನಿವಾಸ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ ಸಿಎ ಎ ರಾಘವೇಂದ್ರ ರಾವ್ ಯುವ ವಿದ್ಯಾರ್ಥಿಗಳಿಗೆ ಸಮಾಜದಲ್ಲಿ ಔದ್ಯೋಗಿಕ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸಬೇಕು ಎನ್ನುವ ಕಿವಿಮಾತನ್ನು ನೀಡಿದರು. ಶ್ರೀನಿವಾಸ ವಿಶ್ವವಿದ್ಯಾಲಯದ ಸಪ ಕುಲಾಧಿಪತಿ ಡಾ. ಎ. ಶ್ರೀನಿವಾಸ ರಾವ್ ವಿದ್ಯಾರ್ಥಿಗಳನ್ನುದ್ದೇಶಿಸಿ ವೃತ್ತಿಪರ ಶಿಕ್ಷಣ ಹಾಗೂ ಸಾಮರ್ಥ್ಯ ಬದುಕಿಗೆ ತುಂಬಾ ಮುಖ್ಯ,ಇದು ತಂತ್ರಜ್ಞಾನದ ಸಮರ್ಪಕ ಬಳಕೆಯಿಂದ ಸಾಧ್ಯ ಎಂದು ಹೇಳಿದರು. ಎಥ್ನೋಟೆಕ್ ಸಂಸ್ಥೆಯ ಮುಖ್ಯಸ್ಥ ಡಾ.ಕಿರಣ್ ಕೆ ರಾಜಣ್ಣ ವಿದ್ಯಾರ್ಥಿಗಳಿಗೆ ಔದ್ಯೋಗಿಕ ಅವಕಾಶವನ್ನು ಪಡೆಯುವ ಮಹತ್ವವನ್ನು ತಿಳಿಸಿದರು.


ಕಾರ್ಯಕ್ರಮದಲ್ಲಿ ಪ್ರೊ. ಡಾ. ಇಫ್ತಿಕರ್ ಫರೀದ್‌, ರಾಜೀವ್‌ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಸೆನೆಟ್‌ ಸದಸ್ಯರು, ಮಂಜುನಾಥ ಭಂಡಾರಿ, ವಿಧಾನ ಪರಿಷತ್‌ ಸದಸ್ಯರು ಮತ್ತು ಕಾಂಗ್ರೆಸ್‌ ಸಮಿತಿ ಕಾರ್ಯಕಾರಿ ಅಧ್ಯಕ್ಷರು, ಕಾರ್ಯನಿರತ ಅಧ್ಯಕ್ಷರು,  ವಿಜಯಲಕ್ಷ್ಮೀ ಆರ್. ರಾವ್, ಟ್ರಸ್ಟಿ ಸದಸ್ಯರು, ಶ್ರೀನಿವಾಸ ಗ್ರೂಪ್, ಪ್ರೊ. ಇಆರ್. ಮಿತ್ರಾ ಎಸ್. ರಾವ್, ಟ್ರಸ್ಟಿ ಸದಸ್ಯರು, ಶ್ರೀನಿವಾಸ ಗ್ರೂಪ್,  ವರುಣ್‌ ಭಾತ್ರಾ, ಜನರಲ್‌ ಮ್ಯಾನೇಜರ್‌ ರಾಷ್ಟ್ರೀಯ ಕೌಶಲಾಭಿವೃದ್ಧಿ ನಿಗಮ (ಎನ್‌ಎಸ್‌ಡಿಸಿ), ಡಾ. ಸತ್ಯನಾರಾಯಣ ರೆಡ್ಡಿ, ಉಪಕುಲಪತಿ ಶ್ರೀನಿವಾಸ ವಿಶ್ವವಿದ್ಯಾಲಯ, ಡಾ. ಅಜಯ್‌ ಕುಮಾರ್‌ ಅಭಿವೃದ್ಧಿ ರಿಜಿಸ್ಟ್ರಾರ್‌, ಶ್ರೀನಿವಾಸ ವಿಶ್ವವಿದ್ಯಾಲಯ ಉಪಸ್ಥಿತರಿದ್ದರು.


ವಳಚ್ಚಿಲ್ ಕಾಲೇಜಿನ ಪ್ರಾಂಶುಪಾಲರು ಹಾಗೂ ಶ್ರೀನಿವಾಸ ವಿಶ್ವವಿದ್ಯಾಲಯದ ಪರೀಕ್ಷಾಂಗ ರಿಜಿಸ್ಟ್ರಾರ್ ಡಾ. ಶ್ರೀನಿವಾಸ ಮಯ್ಯ ಡಿ ಸ್ವಾಗತಿಸಿ, ರಿಜಿಸ್ಟ್ರಾರ್ ಡಾ. ಅನಿಲ್ ಕುಮಾರ್ ವಂದಿಸಿದರು. ಡಾ ಸುಮನಾ ವಿ. ಎಸ್‌. ಹಾಗೂ ಪ್ರೊ.ರಶ್ಮಿ ಕಾರ್ಯಕ್ರಮ ನಿರೂಪಿಸಿದರು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top