ದಾವಣಗೆರೆ: ಯೋಗಾಸನಗಳು ಯೋಗ ದಿನಾಚರಣೆಗೆ ಸೀಮಿತವಾಗದೇ ದಿನಂಪ್ರತಿ ಯೋಗ, ಧ್ಯಾನದಿಂದ ಜೀವನದ ಪರಿಜ್ಞಾನ, ಸಾಮಾನ್ಯ ಜ್ಞಾನ ಹೆಚ್ಚುತ್ತದೆ. ಕೆಲವು ರೋಗಗಳಿಗೆ ಭವ್ಯ ದಿವ್ಯ ಔಷಧಿ ಯೋಗ, ಧ್ಯಾನ ಈ ಸಮಾರಂಭ ಸಾಂಕೇತಿಕವಾಗಿ ಸಮಾರೋಪ ಎಂದು ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ಶೆಣೈಯವರು ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಸಾರ್ವಜನಿಕರಿಗೆ ಯೋಗ ಶಿಬಿರ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿಕೊಂಡು ಮಾತನಾಡಿದರು.
ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಸಿದ್ದವೀರಪ್ಪ ಬಡಾವಣೆಯ ಶಾಖೆಯ ಆಶ್ರಯದಲ್ಲಿ ನಗರದ ಸಿದ್ದವೀರಪ್ಪ ಬಡಾವಣೆಯ ಯಗಟಿ ಮಲ್ಲಿಕಾರ್ಜುನ ನಿಲಯದ ಸಭಾಂಗಣದಲ್ಲಿ ಸಮಾರೋಪ ಸಮಾರಂಭದಲ್ಲಿ ಶೆಣೈಯವರು ತಮ್ಮ ಅಂತರಾಳದ ಭಾವನೆಗಳನ್ನು ಹಂಚಿಕೊಂಡರು.
ವೇದಿಕೆಯಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಜಾಗತಿಕ ಲಿಂಗಾಯತ ಮಹಾಸಭಾ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾದ ಕುಸಮ ಲೋಕೇಶ್, ಕಲಾಕುಂಚ ಡಿ.ಸಿ.ಎಂ. ಶಾಖೆಯ ಅಧ್ಯಕ್ಷರಾದ ಶಾರದಮ್ಮ ಶಿವನಪ್ಪನವರು ಮಾತನಾಡಿ, ಯೋಗ, ಧ್ಯಾನ ಕೇವಲ ಸ್ಪರ್ಧೆಗಳಿಗೆ, ಪ್ರಚಾರಗಳಿಗೆ ಸೀಮಿತವಾಗದೇ ಮಾನವನ ಜೀವನಕ್ಕೆ ಸಾರ್ಥಕತೆ ಬರುತ್ತದೆ. ಈ ಚಟುವಟಿಕೆಗಳು ದೇವರ ಪೂಜೆ. ನಾವು ನೀವೆಲ್ಲರೂ ಪ್ರತೀ ನಿತ್ಯ ಬೆಳಗನ ಜಾವ ಎದ್ದು ಯೋಗ, ಧ್ಯಾನದೊಂದಿಗೆ ಮನವೀಯ ಮೌಲ್ಯಕ್ಕೆ ದೇಹದ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ ಎಂದರು.
ಉಚಿತ ಯೋಗ ಶಿಬಿರದ ಯೋಗ ಶಿಕ್ಷಕಿಯರಾದ ಸಂಧ್ಯಾ ಶ್ರೀನಿವಾಸ್, ಸಂಧ್ಯಾ ಶ್ರೀನಿವಾಸ್ ಮಾತನಾಡಿ, ಯೋಗ, ಧ್ಯಾನಗಳ ವಿವರಗಳನ್ನು ತಿಳಿಸಿದರು. ವೇದಿಕೆಯಲ್ಲಿ ಕಲಾಕುಂಚ ಮಹಿಳಾ ವಿಭಾಗದ ಸಂಸ್ಥಾಪಕರಾದ ಜ್ಯೋತಿ ಗಣೇಶ್ ಶೆಣೈ ಮುಂತಾದವರು ವೇದಿಕೆಯಲ್ಲಿ ಗೌರವ ಉಪಸ್ಥಿತರಿದ್ದರು.
ಸಂಧ್ಯಾ ಶ್ರೀನಿವಾಸ್ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಈ ಸಮಾರಂಭಕ್ಕೆ ಸಿದ್ದವೀರಪ್ಪ ಬಡಾವಣೆಯ ಶಾಖೆಯ ಪ್ರಧಾನ ಕಾರ್ಯದರ್ಶಿ ಸುಮಾ ಏಕಾಂತಪ್ಪ ಸ್ವಾಗತಿಸಿದರು. ಕಲಾಕುಂಚದ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ಅಚ್ಚುಕಟ್ಟಾಗಿ ನಿರೂಪಿಸಿದರು, ಕೊನೆಯಲ್ಲಿ ಕಲಾಕುಂಚ ಡಿ.ಸಿ.ಎಂ. ಶಾಖೆಯ ಪ್ರಧಾನ ಕಾರ್ಯದರ್ಶಿ ಡಿ.ಹೆಚ್. ಚನ್ನಬಸಪ್ಪ ವಂದಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ