ಜೇನುಗೂಡಿಗೆ ಕಲ್ಲು ಹೊಡೆಯಬೇಡಿ, ಸರಕಾರವೇ ಸಮಾಜದ ಸ್ವಾಸ್ಥ್ಯ ಕೆಡಿಸಬಾರದು: ಶಾಸಕ ಡಾ. ಭರತ್ ಶೆಟ್ಟಿ ಎಚ್ಚರಿಕೆ

Upayuktha
0

ವಿರಾಟ್ ಹಿಂದೂ ಸಂಘಟನಾ ಶಕ್ತಿ ಕುಗ್ಗಿಸಲು ಆರೆಸ್ಸೆಸ್‌ ನಾಯಕರ ಮೇಲೆ ಕೇಸ್



ಮಂಗಳೂರು: ಸರಕಾರದ ಬೇಜವಾಬ್ದಾರಿ ಆಡಳಿತ ಮತ್ತು ಓಲೈಕೆಯ ರಾಜಕಾರಣದಿಂದ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದೆಗೆಟ್ಟಿದೆ ಹೊರತು ಹಿಂದೂ ನಾಯಕರಿಂದ ಅಲ್ಲ. ಓಲೈಕೆಯ ತಂತ್ರವಾಗಿ ಆರ್ ಎಸ್ ಎಸ್ ನೇತಾರ ಡಾ.ಕಲ್ಲಡ್ಕ ಪ್ರಭಾಕರ ಭಟ್ ಅವರ ಮೇಲೆ ಕೇಸು ದಾಖಲಿಸಲಾಗಿದೆ. ಸರಕಾರ ಮತ್ತಷ್ಟು ಸ್ವಾಸ್ಥ್ಯ ಕೆಡಿಸಲು ಮುಂದಾಗಿರುವಂತೆ ಕಾಣುತ್ತದೆ. ಜೇನು ಗೂಡಿಗೆ ಕಲ್ಲು ಹೊಡೆಯಲು ಹೋದರೆ ಏನಾಗುತ್ತದೆ ಎಂಬುದು ಸರಕಾರಕ್ಕೆ ತಿಳಿದಿರಬೇಕು ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ಪರೋಕ್ಷ ಎಚ್ಚರಿಕೆ ನೀಡಿದ್ದು, ಕೇಸ್ ವಾಪಸ್ ಪಡೆಯಲು ಒತ್ತಾಯಿಸಿದ್ದಾರೆ.



ದೇಶದ ಸಂವಿಧಾನ ಎಲ್ಲರಿಗೂ ತಮ್ಮ ಅಭಿಪ್ರಾಯ ಹೇಳುವ, ಮಾತನಾಡುವ ಸ್ವಾತಂತ್ರ ನೀಡಿದೆ. ಆರ್ ಎಸ್ ಎಸ್ ಮುಖಂಡರಾದ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಹಿಂದೂ ಸಮಾಜದ ಮೇಲಾಗುತ್ತಿರುವ ಅನ್ಯಾಯದ ಬಗ್ಗೆ ಮಾತನಾಡಿದರೆ ಅದು ಪ್ರಚೋದನೆಯೆ? ಹಿಂದೂಗಳ ಧ್ವನಿಯನ್ನು ಕೇಸ್ ಹಾಕುವ ಮೂಲಕ ಅಡಗಿಸಲು ಸಾಧ್ಯವಾಗದು. ಅದೂ 20 ದಿನಗಳ ಬಳಿಕ ಆರ್ ಎಸ್ ಎಸ್ ನೇತಾರ ಡಾ. ಪ್ರಭಾಕರ ಭಟ್ ಅವರ ಮೇಲೆ  ವಿಳಂಬವಾಗಿ ಕೇಸು ಹಾಕಿರುವುದು ನಿಮ್ಮ ಪಕ್ಷವನ್ನು ತೊರೆಯುತ್ತಿರು ವವರನ್ನು ಸಂತೋಷ ಪಡಿಸಲು ಎಂಬಂತೆ ಕಾಣುತ್ತಿದೆ ಎಂದು ಡಾ. ಭರತ್ ಶೆಟ್ಟಿ ವಾಗ್ದಾಳಿ ನಡೆಸಿದ್ದಾರೆ.


ಹಿಂದೂ ನಾಯಕರ ಮನೆ ಫೋಟೋ ತೆಗೆಯೋದು, ನಡು ರಾತ್ರಿ ಮನೆಗೆ ತೆರಳಿ ವಿಚಾರಣೆ ನೆಪದಲ್ಲಿ ತೊಂದರೆ ಕೊಡುವುದು ಕಾನೂನು ಮೀರಿದ ನಡವಳಿಕೆಯನ್ನು ಪೊಲೀಸರು ತೋರುತ್ತಿದ್ದಾರೆ. ಗ್ರಾಮಾಂತರ ಪ್ರದೇಶದ ಕಾರ್ಯಕರ್ತರ ಮನೆಗೆ ನುಗ್ಗಿ ವಿಚಾರಣೆ, ಬೆದರಿಸುವ ವರ್ತನೆ ತುರ್ತು ಪರಿಸ್ಥಿತಿ  ನೆನೆಪಿಸುತ್ತಿದೆ. ಜೇನು ಗೂಡಿಗೆ ಕೈ ಹಾಕಿ ಪರಿಸ್ಥಿತಿ ಹದೆಗೆಡಿಸುವ ಬದಲು, ಸುಹಾಸ್ ಶೆಟ್ಟಿ ಪ್ರಕರಣದ ಆರೋಪಿಗಳು ಇನ್ನೂ ರಾಜಾರೋಷವಾಗಿ ತಿರುಗುತ್ತಿದ್ದಾರೆ. ಸಿಸಿ ಟಿವಿಯ ದೃಶ್ಯ ಎಲ್ಲಾ ಸತ್ಯವನ್ನು ಹೇಳುತ್ತಿದೆ. ನಿಮ್ಮ ಆಡಳಿತ ಪಕ್ಷದ ಅತಿಯಾದ ಓಲೈಕೆಯಿಂದ ಹಿಂದೂ ಸಮಾಜ ಬೇಸತ್ತಿದ್ದು, ಬೆದರಿಸುವ ಬದಲು, ಜನರಲ್ಲಿ ಕಾನೂನಿನ ಮೇಲೆ ನಂಬಿಕೆ ಹೆಚ್ಚಾಗಲು ತನಿಖೆಯನ್ನು ನಿಷ್ಪಕ್ಷಪಾತವಾಗಿ ಮಾಡಿ ಎಂದು ಒತ್ತಾಯಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top