ಸುಪ್ರಸಿದ್ಧ ಮುರುಡೇಶ್ವರ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿ; ಹಿಂದೂ ಸಂಘಟನೆಗಳ ಸಂಘಟಿತ ಪ್ರಯತ್ನದ ಫಲ

Upayuktha
0

ರಾಜ್ಯದ ಎಲ್ಲ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿಗೊಳ್ಳಲಿ: ಹಿಂದೂ ಜನಜಾಗೃತಿ ಸಮಿತಿ 




ಮುರುಡೇಶ್ವರ: ವಿಶ್ವ ಪ್ರಸಿದ್ಧ ಮಹತೋಭಾರ ಶ್ರೀ ಮುರುಡೇಶ್ವರ ದೇವಸ್ಥಾನದಲ್ಲಿ 22 ಜೂನ್ ರಿಂದ ವಸ್ತ್ರ ಸಂಹಿತೆ ಜಾರಿಗೊಳಿಸಲಾಗಿದೆ. ಹಿಂದೂ ಜನಜಾಗೃತಿ ಸಮಿತಿ, ಕರ್ನಾಟಕ ಮಂದಿರ ಮಹಾಸಂಘ ಮತ್ತು ಅನೇಕ ಹಿಂದೂ ಸಂಘಟನೆಗಳು ಸೇರಿ ಡಿಸೆಂಬರ್ 2022 ರಲ್ಲಿ ದೇವಸ್ಥಾನ ಆಡಳಿತ ಮಂಡಳಿಗೆ ವಸ್ತ್ರ ಸಂಹಿತೆ ಜಾರಿಗೊಳಿಸುವಂತೆ ಮನವಿ ನೀಡಲಾಗಿತ್ತು, ಇದಕ್ಕೆ ಸ್ಪಂದಿಸಿ ಆಡಳಿತ ಮಂಡಳಿಯು ಇದೀಗ ವಸ್ತ್ರಸಂಹಿತೆ ಜಾರಿಗೆ ತಂದಿರುವುದು ಅತ್ಯಂತ ಸ್ವಾಗತಾರ್ಹ. ಇದರಿಂದ ಪ್ರೇರಣೆ ಪಡೆದು ರಾಜ್ಯದ ಎಲ್ಲ ದೇವಾಲಯಗಲ್ಲಿಯೂ ವಸ್ತ್ರ ಸಂಹಿತೆ ಜಾರಿಗೊಳಿಸಬೇಕಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯ ಮೋಹನ್ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹಿಂದೂ ಜನಜಾಗೃತಿ ಸಮಿತಿಯು ಆಡಳಿತ ಮಂಡಳಿಗೆ ನೀಡಿದ ಮನವಿಯಲ್ಲಿ ಐತಿಹಾಸಿಕವಾಗಿ ಪ್ರಸಿದ್ಧಿ ಪಡೆದ ಮುರುಡೇಶ್ವರ ದೇವಸ್ಥಾನದ ಪಾವಿತ್ರತೆಯನ್ನು ಕಾಪಾಡುವ ದೃಷ್ಟಿಯಿಂದ ಸಾಂಪ್ರದಾಯಿಕ ಉಡುಪು ಕಡ್ಡಾಯ ಮಾಡಬೇಕು. ದೇವಸ್ಥಾನದಲ್ಲಿ ಭಕ್ತರು ದೇವರ ದರ್ಶನ ಪಡೆಯಲು ಬರುವಾಗ ದೇವಾಲಯದ ವಾತಾವರಣವೂ ಅಷ್ಟೇ ಪವಿತ್ರ ಮತ್ತು ಸೂಕ್ತವಾಗಿರಬೇಕು. ಪಾಶ್ಚಾತ್ಯ ಉಡುಪು ಅಥವಾ ತುಂಡು ಉಡುಪು ಧರಿಸಿ ದೇವಸ್ಥಾನಕ್ಕೆ ಬರುವವರಿಗೆ ಪ್ರವೇಶ ನೀಡಬಾರದು. ಭಾರತೀಯ ಸಂಪ್ರದಾಯಿಕ ಉಡುಪು ಧರಿಸಿ ಬರುವವರಿಗೆ ಮಾತ್ರ ದೇವಸ್ಥಾನ ಪ್ರವೇಶಕ್ಕೆ ಅವಕಾಶ ಕೊಡಬೇಕು, ವಸ್ತ್ರ ಸಹಿತೆಗೆ ಜಾರಿಗೆ ಬಂದ ನಂತರ ದೇವಾಲಯದ ಅಂಗಳದಲ್ಲಿ ಇದರ ಬಗ್ಗೆ ಮಾಹಿತಿ ನೀಡುವ ಫಲಕವನ್ನೂ ಅಳವಡಿಸಬೇಕು ಎಂದು ಆಗ್ರಹಿಸಲಾಗಿತ್ತು. ಎಲ್ಲ ಸಂಘಟನೆಗಳು ಒಟ್ಟಾಗಿ ಪ್ರಯತ್ನಿಸಿದರ ಫಲವಾಗಿ ಇಂದು ಈ ವಿಜಯ ಸಿಕ್ಕಿದೆ.


ಈ ಹಿಂದೆ ಸಮಿತಿಯು ಮಾಡಿದ ಮನವಿಯ ನಂತರ ವಿಶ್ವ ಪ್ರಸಿದ್ಧ ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನ, ಶೃಂಗೇರಿ ಶಾರದಾಂಬೆ ದೇವಸ್ಥಾನ ಸೇರಿದಂತೆ ರಾಜ್ಯದ 250ಕ್ಕೂ ಹೆಚ್ಚು ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸಲಾಗಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top