ಶಿಕ್ಷಣದೊಂದಿಗೆ ಮಕ್ಕಳಲ್ಲಿ ಸಂಸ್ಕಾರ, ದೇಶಪ್ರೇಮ ಬಿತ್ತಬೇಕು: ವೆಂಕಪ್ಪಗೌಡ

Upayuktha
0

ನೆಲ್ಲಿಕಟ್ಟೆಅಂಬಿಕಾ ಪ.ಪೂ. ವಿದ್ಯಾಲಯದ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ



ಪುತ್ತೂರು: ಮಾತಾ ಪಿತರು ತಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ ಗುಣಮಟ್ಟದ ವಿದ್ಯಾಭ್ಯಾಸ ಮಾತ್ರವಲ್ಲದೆ ಧರ್ಮ, ದೇಶ ಸೇವೆಯ ಮಹತ್ವವನ್ನೂ ತಿಳಿಸಿದರೆ ಅದುವೇ ಮಕ್ಕಳ ಮುಂದಿನ ಉತ್ತಮ ಭವಿಷ್ಯಕ್ಕೆ ಕೂಡಿಡುವ ಸಂಪತ್ತು. ಇದರ ಹೊರತಾಗಿ ಮತ್ಯಾವ ಸಂಪತ್ತನ್ನೂ ಪೋಷಕರು ಮಕ್ಕಳಿಗಾಗಿ ಕೂಡಿಡಬೇಕಾಗಿಲ್ಲ ಎಂದು ನಿವೃತ್ತ ಯೋಧ, ಸಮಾಜ ಸೇವಕ ವೆಂಕಪ್ಪಗೌಡ ಹೇಳಿದರು.


ಅವರು ಬಪ್ಪಳಿಗೆಯ ಶ್ರೀ ಶಂಕರ ಸಭಾ ಭವನದಲ್ಲಿ ನಗರದ ನಟ್ಟೋಜ ಫೌಂಡೇಶನ್‍ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಥಮ ಪಿಯುಸಿ ಶೈಕ್ಷಣಿಕ ವರ್ಷದ ತರಗತಿಗಳನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಮಾತನಾಡಿ, ಹಲವಾರು ಪ್ರಥಮಗಳಿಗೆ ಅಂಬಿಕಾದ ಹೆಸರಾಗಿದೆ. ಅರ್ಹರಿಗೆ ಉಚಿತ ಶಿಕ್ಷಣ, ಪಠ್ಯದಲ್ಲಿ ಯೋಗ ಶಿಕ್ಷಣ, ಧರ್ಮ ಶಿಕ್ಷಣ, ದೇಶ ಭಕ್ತಿಯ ಪಾಠ ಇದರ ಜೊತೆಗೆ ಗುಣಮಟ್ಟದ ಶಿಕ್ಷಣ ಅಂಬಿಕಾದಲ್ಲಿ ದೊರಕುತ್ತಿದೆ. ಜೆಇಇ ನೀಟ್‍ನಂತಹ ಪರೀಕ್ಷೆಗಳಲ್ಲಿ ಅಂಬಿಖಾದ ವಿದ್ಯಾಥಿಗಳು ಸಾಧನೆಗೈಯುತ್ತಿದ್ದಾರೆ ಎಂದರು.


ವಿದ್ಯಾರ್ಥಿಗಳು ಸಮಯಕ್ಕೆ ಮಹತ್ವ ಕೊಡಬೇಕು. ಹಾಗೆಯೇ ಹೆತ್ತವರು ಮಕ್ಕಳ ಕೈಗೆ ಮೊಬೈಲ್‍ ಕೊಡಬಾರದು, ಬದಲಾಗಿ ಮಕ್ಕಳ ಜತೆಗಿರಬೇಕು. ಹೆತ್ತವರು, ಶಿಕ್ಷಕರು, ಆಡಳಿತ ಮಂಡಳಿಯವರೆಲ್ಲರೂ ಮಕ್ಕಳ ಜತೆಗಿದ್ದಾಗ ಸಾಧನೆ ಸುಲಭವೆನಿಸುತ್ತದೆ. ಉತ್ತಮ ಅಂಕಗಳೊಂದಿಗೆ ದೇಶ ಉಳಿಸುವ, ಸ್ವಾಭಿಮಾನ ಹೊಂದಿರುವ ಯುವ ಸಮೂಹವನ್ನು ರೂಪುಗೊಳಿಸುವ ಅಗತ್ಯವಿದೆ ಎಂದು ಹೇಳಿದರು.


ಕಳೆದ ಶೈಕ್ಷಣಿಕ ವರ್ಷದ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಶಿವರಾಮ ಆಳ್ವ ಅಂಬಿಕಾ ಶುಭ ಹಾರೈಸಿದರು. ನಟ್ಟೋಜ ಫೌಂಡೇಶನ್‍ ಟ್ರಸ್ಟ್‌ನ ಕಾರ್ಯದರ್ಶಿ ರಾಜಶ್ರೀ ಎಸ್ ನಟ್ಟೋಜ, ಆಡಳಿತ ಮಂಡಳಿಯ ಸದಸ್ಯ ಸುರೇಶ ಶೆಟ್ಟಿ, ಅಂಬಿಕಾ ವಿದ್ಯಾಲಯ ಸಿಬಿಎಸ್‍ಇ ಸಂಸ್ಥೆಯ ಪ್ರಾಂಶುಪಾಲೆ ಮಾಲತಿ ಡಿ. ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಜೆಇಇ, ನೀಟ್, ಪಿಯು  ಇಲಾಖಾ ಪರೀಕ್ಷೆಯಲ್ಲಿ ರಾಜ್ಯ ಮತ್ತು ತಾಲೂಕು ಮಟ್ಟದಲ್ಲಿಉತ್ತಮ ಸಾಧನೆ ಮೆರೆದ ಸಾಧಕ ವಿದ್ಯಾರ್ಥಿಗಳನ್ನು ಪೋಷಕರ ಸಹಿತ ಶಾಲು ಹೊದೆಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಅಂಬಿಕಾ ವಿದ್ಯಾಲಯ ಸಿಬಿಎಸ್‍ಇ ಯಲ್ಲಿ ಹತ್ತನೆಯ ತರಗತಿಯಲ್ಲಿ ಉತ್ತಮ ಅಂಕಪಡೆದ ವಿದ್ಯಾರ್ಥಿಗಳನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು. ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳನ್ನು ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಭಾರತೀಯ ಸಂಸ್ಕೃತಿಯಂತೆ ಮಕ್ಕಳು ತಮ್ಮ ಪೋಷಕರ ಪಾದ ಪೂಜೆಯನ್ನು ನೆರವೇರಿಸಿದರು.


ವಿದ್ಯಾರ್ಥಿನಿ ಧರಣಿ ಮತ್ತು ಬಳಗ ಪ್ರಾರ್ಥಿಸಿದರು. ಪ್ರಾಚಾರ್ಯ ಸತ್ಯಜಿತ್‍ ಉಪಾಧ್ಯಾಯ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪನ್ಯಾಸಕರಾದ ವಿಷ್ಣು ಪ್ರದೀಪ, ಜಗದೀಶ, ಗೌರಿ ಬಿ.ವಿ. ಸನ್ಮಾನಿತರ ಪಟ್ಟಿಯನ್ನು ವಾಚಿಸಿದರು. ಉಪ ಪ್ರಾಂಶುಪಾಲೆ ಶೈನಿ ಕೆ.ಜೆ.ವಂದಿಸಿದರು. ಕನ್ನಡ ಉಪನ್ಯಾಸಕ ಸತೀಶ್‍ ಇರ್ದೆ ಕಾರ್ಯಕ್ರಮ ನಿರೂಪಿಸಿದರು.


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top