ಬ್ರಹ್ಮಾವರ ಜನೌಷಧಿ ಕೇಂದ್ರದಲ್ಲಿ ಪರಿಸರ ದಿನಾಚರಣೆ

Upayuktha
0


ಬ್ರಹ್ಮಾವರ: ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ, ಭಾರತೀಯ ಜನ ಔಷಧಿ ಕೇಂದ್ರ, ಸುವರ್ಣ ಎಂಟರ್ಪ್ರೈಸಸ್ ಬ್ರಹ್ಮಾವರ ಮತ್ತು ನರ್ಸರಿ ಮೆನ್ ಎಸೋಸಿಯೇಷನ್ ಇದರ ಜಂಟಿ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ವಿತರಣಾ ಸಮಾರಂಭ ಬ್ರಹ್ಮಾವರ ಜನೌಷಧಿ ಕೇಂದ್ರ ವಠಾರದಲ್ಲಿ ಜೂನ್ 5ರಂದು ನಡೆಯಿತು.


ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ, ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ನಮ್ಮಿಂದ ಪ್ಲಾಸ್ಟಿಕ್ ತ್ಯಾಜ್ಯ ಹೆಚ್ಚಾಗುತ್ತಿದೆ ಇದರಿಂದ ಪರಿಸರ ಅಸಮತೋಲನವಾಗುವುದು. ಅಲ್ಲದೆ, ಎಲ್ಲಾ ಜೀವಿಗಳಿಗೆ ತೊಂದರೆಯಾಗುತ್ತಿದೆ. ಈ ನಿಟ್ಟಿನಲ್ಲಿ ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುವ ಕೆಲಸವಾಗಬೇಕು ಮತ್ತು ಆದಷ್ಟು ಗಿಡಗಳನ್ನು ಬೆಳೆಸುವ ಕಾರ್ಯ ನಿರಂತರವಾಗಿ ನಡೆಯಬೇಕು ಎಂದರು.


ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಸವರಾಜ ಹುಬ್ಬಳ್ಳಿ ಮಾತನಾಡಿ, ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರದ ಪರಿಸರಕ್ಕೆ ಸಂಬಂಧಿಸಿದ ಬಹಳಷ್ಟು ಕಾರ್ಯಕ್ರಮಗಳು ಮಾದರಿಯಾಗಿವೆ. ಗಿಡಗಳನ್ನು ಬೆಳೆಸುವುದರಿಂದ ಪರಿಸರ ಉಳಿಯಲು ಸಾಧ್ಯ ಎಂದರು.


ಜಯಂಟ್ಸ್ ಫೆಡರೇಶನ್ ಅಧ್ಯಕ್ಷ ತೇಜಶ್ವರ್ ರಾವ್ ಶುಭ ಹಾರೈಸಿದರು. ವೇದಿಕೆಯಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಯಂಟ್ಸ್ ಅಧ್ಯಕ್ಷ ಅಣ್ಣಯ್ಯ ದಾಸ್ ವಹಿಸಿ ಅತಿಥಿಗಳನ್ನು ಸ್ವಾಗತಿಸಿದರು. ಸೆಂಟ್ರಲ್ ಕಮಿಟಿ ಸದಸ್ಯ ದಿನಕರ ಅಮೀನ್, ನಿಕಟ ಪೂರ್ವ ಅಧ್ಯಕ್ಷ ಸುಂದರ ಪೂಜಾರಿ ಮುಡುಕುಕ್ಕುಡೆ, ವಿವೇಕಾನಂದ ಕಾಮತ್, ಮಿಲ್ಟನ್ ಒಲಿವೇರಾ ಸಮುದಾಯ ಕೇಂದ್ರದ ಡಾ. ಮಹೇಶ್ ಐತಾಳ ಮುಂತಾದವರು ಉಪಸ್ಥಿತರಿದ್ದರು ಈ ಸಂದರ್ಭದಲ್ಲಿ ನರ್ಸರಿ ಮೆನ್ ಎಸೋಸಿಯೇಷನ್ ಅಧ್ಯಕ್ಷ ಸುರೇಶ್ ಸುವರ್ಣ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಸಂಘಟಕ ಜಯಂಟ್ಸ್ ಫೆಡರೇಶನ್ ಮಾಜಿ ಅಧ್ಯಕ್ಷ ಮಧುಸೂದನ್ ಹೇರೂರು ಪ್ರಸ್ತಾವನೆ ಗೈದರು.ರಾಘವೇಂದ್ರ ಕವಾ೯ಲು ನಿರೂಪಿಸಿದರು.


ಶ್ರೀನಾಥ್ ಕೋಟ, ಪ್ರತಿಭಾ ರೊನಾಲ್ಡ್ ಡಯಾಸ್, ಸಚಿನ್ ಮುಂತಾದವರು ಸಹಕರಿಸಿದರು. ಸುಮಾರು 5000ಕ್ಕೂ ಮಿಕ್ಕಿ ಗಿಡಗಳನ್ನು ಸಾರ್ವಜನಿಕರಿಗೆ ವಿತರಿಸಲಾಯಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top