ಪರಿಸರ ಸಂರಕ್ಷಣೆಯ ಕಾಳಜಿ ಮುಖ್ಯ: ಕೆ.ವಿ. ಪ್ರಭಾಕರ್

Chandrashekhara Kulamarva
0


ಮಂಗಳೂರು: ಜನ ಸಾಮಾನ್ಯರಲ್ಲಿ ಪರಿಸರ ಸಂರಕ್ಷಣೆಯ ಕಾಳಜಿ ಮೂಡಿಸುವುದು ಮುಖ್ಯ ಈ ನಿಟ್ಟಿನಲ್ಲಿ ಸಾಮೂಹಿಕ ಗಿಡ ನೆಡುವ ಕಾರ್ಯಕ್ರಮಗಳ ಅಗತ್ಯವಿದೆ ಎಂದು ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ತಿಳಿಸಿದರು.


ಅವರು ನಗರದ ಇಂದಿರಾ ಪ್ರೀಯದರ್ಶಿನಿ ವನಿತಾ ಪಾರ್ಕ್‌ನಲ್ಲಿಂದು ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್, ಕೆಪಿಟಿ ಮಂಗಳೂರು, ಸಂತ ಅಲೋಶಿಯಸ್ ಐಟಿಐ ಹಾಗೂ ಗ್ಲೋಬಲ್ ಗ್ರೀನ್ ಫೌಂಡೇಶನ್ ಸಹಯೋಗದೊಂದಿಗೆ ಹಮ್ಮಿಕೊಂಡ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಗಿಡ ನೆಡುವ ಮೂಲಕ ಚಾಲನೆ ನೀಡಿ ಮಾತನಾಡುತ್ತಿದ್ದರು.


ಈ ಸಂದರ್ಭದಲ್ಲಿ ರೋಟರಿ ಸೆಂಟ್ರಲ್ ಮಂಗಳೂರು ಘಟಕದ ಅಧ್ಯಕ್ಷ ಬ್ರಿಯಾನ್ ಪಿಂಟೊ, ಮಾಜಿ ರೋಟರಿ ಸಹಾಯಕ ಗವರ್ನರ್ ರಾಜಗೋಪಾಲ್  ರೈ, ಉದ್ಯಮಿ ರಮೇಶ್ ನಾಯಕ್, ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಸಂತ ಅಲೋಶಿಯಸ್ ಐಟಿಐ ಕಾಲೇಜು, ಕೆಪಿಟಿ ಮಂಗಳೂರಿನ ಶಿಕ್ಷಕರು ಮತ್ತು ವಿದ್ಯಾರ್ಥಿಗಳು, ಗ್ಲೋಬಲ್ ಗ್ರೀನ್ ಇಕೋ ಫೌಂಡೇಶನ್ ನ ಪದಾಧಿಕಾರಿಗಳು, ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ನ ಪದಾಧಿಕಾರಿಗಳು, ಮನಪಾ ಮಾಜಿ ಸದಸ್ಯೆ ಸಂಧ್ಯಾ ಆಚಾರ್ಯ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಜಯಲಕ್ಷ್ಮೀ ರಾಯಕೋಡ್, ವಲಯ ಅರಣ್ಯ ಅಧಿಕಾರಿ ರಾಜೇಶ್ ಮೊದಲಾದವರು ಉಪಸ್ಥಿತರಿದ್ದರು. ಪುಷ್ಪರಾಜ್ ಬಿ.ಎನ್ ಕಾರ್ಯಕ್ರಮ ನಿರೂಪಿಸಿ ಭಾಸ್ಕರ ರೈ ಕಟ್ಟ ಸ್ವಾಗತಿಸಿದರು.




ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top