ದಾವಣಗೆರೆ: ದಾವಣಗೆರೆಯ ಕಲಾಕುಂಚ ಸಾಂಸ್ಕøತಿಕ ಸಂಸ್ಥೆಯ ಆಶ್ರಯದಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ 2024-25ನೇ ಸಾಲಿನ ಶಿಕ್ಷಣ ಇಲಾಖೆಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ವಿವಿಧ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷರಾದ ಕೆ.ಹೆಚ್. ಮಂಜುನಾಥ್ ತಿಳಿಸಿದ್ದಾರೆ.
ಪ್ರಥಮ ಭಾಷೆ ಕನ್ನಡದಲ್ಲಿ 125 ಕ್ಕೆ 125 ಪರಿಪೂರ್ಣ ಅಂಕ ಪಡೆದ ಮಕ್ಕಳಿಗೆ ರಾಜ್ಯ ಮಟ್ಟದಲ್ಲಿ “ಕನ್ನಡ ಕೌಸ್ತುಭ” ರಾಜ್ಯ ಪ್ರಶಸ್ತಿ, ಕನ್ನಡದಲ್ಲಿ 125 ಕ್ಕೆ 120, 121, 122, 123, 124 ಅಂಕ ಪಡೆದ ಮಕ್ಕಳಿಗೆ “ಕನ್ನಡ ಕುವರ-ಕುವರಿ” ಜಿಲ್ಲಾ ಪ್ರಶಸ್ತಿ, ಒಟ್ಟು ಅಂಕ 625 ಕ್ಕೆ 600 ಕ್ಕೂ ಹೆಚ್ಚು ಅಂಕ ಪಡೆದ ಮಕ್ಕಳಿಗೆ “ಸರಸ್ವತಿ ಪುರಸ್ಕಾರ” ರಾಜ್ಯ ಪ್ರಶಸ್ತಿ ಸಿ.ಬಿ.ಎಸ್.ಸಿ. (ಸೆಂಟ್ರಲ್ ಸಿಲಿಬಸ್)ನಲ್ಲಿ ಒಟ್ಟು ಅಂಕ 500 ಕ್ಕೆ 480 ಕ್ಕೂ ಹೆಚ್ಚು ಅಂಕ ಪಡೆದ ಮಕ್ಕಳಿಗೆ “ಸರಸ್ವತಿ ಪುರಸ್ಕಾರ” ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಸಂಸ್ಥೆಯ ಸಂಸ್ಥಾಪಕ ಸಾಲಿಗ್ರಾಮ ಗಣೇಶ್ ಶೆಣೈ ಪ್ರಕಟಿಸಿದ್ದಾರೆ.
2025ನೆ ಜುಲೈ 19 ಶನಿವಾರ, 20 ಭಾನುವಾರ ದಾವಣಗೆರೆಯಲ್ಲಿ ನಡೆಯುವ ಈ ವಿಜೃಂಭಣೆಯ ಅಪರೂಪದ ಸಮಾರಂಭದಲ್ಲಿ ಮಕ್ಕಳನ್ನು ಮಂಗಳವಾದ್ಯದೊಂದಿಗೆ ಮೆರವಣಿಗೆ ಯಲ್ಲಿ ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿ ಪ್ರತ್ಯೇಕ ಸಿಂಹಾಸನದಲ್ಲಿ ಕೂರಿಸಿ, ಮಕ್ಕಳ ತಂದೆ-ತಾಯಿ ಯೊಂದಿಗೆ ಕನ್ನಡ ತಿಲಕವಿಟ್ಟು, ಕನ್ನಡ ಕಂಕಣ ಕಟ್ಟಿ, ಕನ್ನಡಾರತಿ ಬೆಳಗಿ, ವೇದಿಕೆಯ ಮದುವೆ ಮಂಟಪದಲ್ಲಿ ಮಕ್ಕಳ ತಲೆ ಮೇಲೆ ಕಿರೀಟವಿಟ್ಟು ಅವರದೇ ಭಾವಚಿತ್ರ ವಿರುವ ಅವರ ತಂದೆ-ತಾಯಿ ಹೆಸರಿನೊಂದಿಗೆ ಸನ್ಮಾನಪತ್ರ, ಕನ್ನಡ ತಾಯಿ ಭುವನೇಶ್ವರಿ ಸ್ಮರಣಿಕೆ, ಚಿನ್ನದ ಲೇಪನದ ಪದಕ ಕೊರಳಿಗೆ ಹಾಕಿ ಪುಷ್ಪವೃಷ್ಠಿಯೊಂದಿಗೆ ನಾಡಿನ ಗಣ್ಯಮಾನ್ಯರ ಅಮೃತ ಹಸ್ತದಲ್ಲಿ ಸನ್ಮಾನಿಸಿ ಗೌರವಿಸಲಾಗುವುದು. ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20-06-2025.
ಹೆಚ್ಚಿನ ಮಾಹಿತಿಗೆ 9538732777, 9743897578, 9945785170, 9448423683 ಈ ಸನೀಹವಾಣಿಗಳಿಗೆ ಸಂಪರ್ಕಿಸಬಹುದು ಎಂದು ಕಲಾಕುಂಚ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ಉಮೇಶ್ ವಿನಂತಿಸಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ