ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ಮಂಡಲದಲ್ಲಿ ಇಂದು ಹಿಂದೂ ನಾಯಕರು ಮತ್ತು ಕಾರ್ಯಕರ್ತರ ಮೇಲೆ ಕೇಸು ದಾಖಲಿಸಿರುವುದು ಮತ್ತು ಗಡಿಪಾರಿನ ವಿಷಯದ ಬಗ್ಗೆ ಚರ್ಚಿಸಿ ಮುಂದಿನ ಕ್ರಮಗಳ ಬಗ್ಗೆ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಸಂಘಟನಾತ್ಮಕ ಸಭೆಯನ್ನು ನಡೆಸಿದರು.
ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು ಮತ್ತು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವರ್, ನಿಕಟಪೂರ್ವ ಶಾಸಕರಾದ ಸಂಜೀವ್ ಮಠದೂರ್, ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತ, ಜಿಲ್ಲಾ ಉಪಾಧ್ಯಕ್ಷರಾದ ಸುನಿಲ್ ಆಳ್ವ, ರಾಜ್ಯ ಹಿಂದುಳಿದ ಮೋರ್ಚಾ ಕಾರ್ಯದರ್ಶಿ ಆರ್ಸಿ ನಾರಾಯಣ್, ಜಿಲ್ಲಾ ಕಾರ್ಯದರ್ಶಿ ವಿದ್ಯಾ ಗೌರಿ, ಜಿಲ್ಲೆಯ ಯುವ ಮೋರ್ಚಾ ಅಧ್ಯಕ್ಷ ನಂದನ್ ಮಲ್ಯ, ಜಿಲ್ಲಾ ಎಸ್ ಸಿ ಮೋರ್ಚಾದ ಅಧ್ಯಕ್ಷ ಹರೀಶ್ ಬಿಜಾತ್ರೆ, ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ, ಶಿವಕುಮಾರ್ ಪುತ್ತೂರು, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಉಮೇಶ್ ಗೌಡ, ಪ್ರಶಾಂತ್ ಮತ್ತು ಅನಿಲ್ ತೆಂಕಿಲ, ಪದಾಧಿಕಾರಿಗಳು ಮತ್ತು ಮಂಡಲದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ