ಮಂಗಳೂರು: ಆರ್ ಸಿ ಬಿ ತಂಡದ ವಿಜಯೋತ್ಸವದ ಸಂದರ್ಭ ಕಾಲ್ತುಳಿತ ಪ್ರಕರಣ ಜೀವ ಹಾನಿಗೆ ಸರಕಾರ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳದೆ ಇರುವುದು ಕಾರಣವಾಗಿದೆ ಎಂದು ಶಾಸಕ ಡಾ. ವೈ. ಭರತ್ ಶೆಟ್ಟಿ ಹೇಳಿದ್ದಾರೆ.
ಮೃತ ಕುಟುಂಬಗಳಿಗೆ ಸಾಂತ್ವಾನ ಹೇಳಬಯಸುತ್ತೇನೆ. ಗಾಯಾಳುಗಳು ಬೇಗನೇ ಗುಣಮುಖರಾಗಲಿ ಎಂದು ದೇವರಲ್ಲಿ ಬೇಡುತ್ತೇನೆ. 18 ವರ್ಷಗಳ ಬಳಿಕ ಟ್ರೋಫಿ ಗಳಿಸಿರುವ ತಂಡದ ವೀಕ್ಷಣೆಗೆ ಲಕ್ಷಾಂತರ ಜನ ಮುಗಿಬೀಳಬಹುದು ಎಂಬ ಮುಂದಾಲೋಚನೆ ಸರಕಾರಕ್ಕೆ ಇರಬೇಕಿತ್ತು. ಕ್ರಿಕೆಟ್ ಆಟಗಾರರ ಚಲಿಸುವ ಮಾರ್ಗದ ಉದ್ದಕ್ಕೂ ಕ್ರೀಡಾಂಗಣದ ಸುತ್ತಮುತ್ತ ಬ್ಯಾರಿಕೇಡ್ ಅಳವಡಿಸಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕಿತ್ತು ಎಂದು ಶಾಸಕರು ಹೇಳಿದರು.
ಇದೆಲ್ಲವನ್ನು ಬಿಟ್ಟು ವಿಧಾನಸೌಧದ ಮುಂಭಾಗ ಸರಕಾರ ಆಟಗಾರರನ್ನು ಗೌರವಿಸುವ ಮೂಲಕ ಆರ್ಸಿಬಿ ಅಭಿಮಾನಿಗಳ ಸುರಕ್ಷತಾ ಕ್ರಮಕ್ಕೆ ಗಮನ ನೀಡದೆ ಈ ಘಟನೆ ಸಂಭವಿಸಿದೆ. ಸರಕಾರ ವೈಫಲ್ಯದ ಜವಾಬ್ದಾರಿಯನ್ನು ಹೊತ್ತುಕೊಳ್ಳಬೇಕು ಎಂದು ಹೇಳಿದ್ದಾರೆ. ಸರಕಾರ ಹಾಗೂ ಆರ್ ಸಿಬಿ, ಬಿಸಿಸಿಐ ಜತೆ ಸೇರಿ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ