MRPL ನ CSR ಉಪಕ್ರಮದಡಿ ಸ್ನೇಹಾಲಯ ಸಂಸ್ಥೆಯ ನೂತನ ಸೌಲಭ್ಯದ ಉದ್ಘಾಟನೆ

Upayuktha
0


ಮಂಗಳೂರು: ಮಾನಸಿಕ ರೋಗಿಗಳ ಸಾಮಾಜಿಕ ಪುನರ್ವಸತಿಗಾಗಿ ಸ್ಥಾಪಿಸಲ್ಪಟ್ಟು ಅಮೋಘ ಸೇವೆಯಲ್ಲಿ ನಿರತವಾಗಿರುವ ಸ್ನೇಹಾಲಯ ಸಂಸ್ಥೆಯು ಗುರುವಾರ (ಜೂ.5) ತಮ್ಮ ವ್ಯಸನ ನಿವಾರಣಾ ಕೇಂದ್ರದಲ್ಲಿ ಹೊಸದಾಗಿ ನಿರ್ಮಿಸಲಾದ ಟೆರೇಸ್ ರೂಫಿಂಗ್ ಮತ್ತು ನೆಲಹಾಸಿನ ಉದ್ಘಾಟನೆಯನ್ನು ನೆರವೇರಿಸಿದರು.


ಈ ಸೌಲಭ್ಯವನ್ನು ಮಂಗಳೂರಿನ MRPL ಸಂಸ್ಥೆಯು ಸಾಂಸ್ಥಿಕ ಸಮಾಜಿಕ ಯೋಜನೆಯಡಿ (CSR ಉಪಕ್ರಮದ ಅಡಿಯಲ್ಲಿ) ಪ್ರೋತ್ಸಾಹಿಸುತ್ತಿದೆ. ಈ ಸೌಲಭ್ಯವನ್ನು ವ್ಯಸನ ಮುಕ್ತ ಸಮಾಜಕ್ಕಾಗಿ ರೋಗಿಗಳ ಚೇತರಿಕೆಯ ಹಾದಿಯಲ್ಲಿ ಸಬಲೀಕರಣಗೊಳ್ಳುವ ಅಭಿವ್ಯಕ್ತಿಶೀಲ ಕಲಾ ಚಿಕಿತ್ಸೆ ಮತ್ತು ವಿವಿಧ ಗುಣಪಡಿಸುವ ಶಾರೀರಿಕ ಹಾಗೂ ಮಾನಸಿಕ ಚಟುವಟಿಕೆಗಳಿಗೆ ಮೀಸಲಿಡಲಾಗುವುದು.


ಉದ್ಘಾಟನಾ ಸಮಾರಂಭವು ಬಹಳ ಅರ್ಥಪೂರ್ಣವಾಗಿತ್ತು ಮತ್ತು ಹೃದಯಸ್ಪರ್ಶಿ ಕಾರ್ಯಕ್ರಮ ವಾಗಿತ್ತು, ಹಲವಾರು ಗಣ್ಯ ಅತಿಥಿಗಳ ಉಪಸ್ಥಿತರಿದ್ದು ಕಾರ್ಯಕ್ರಮದ ಮೆರುಗು ಹೆಚ್ಚಿಸಿದರು. MRPL ನ CSR ವಿಭಾಗದ ಹಿರಿಯ ವ್ಯವಸ್ಥಾಪಕ ಕೆ. ನಾಗರಾಜ್ ರಾವ್ ಅವರು ಮುಖ್ಯ ಅತಿಥಿಯಾಗಿ ಹಾಜರಿದ್ದು MRPL-ONGC ಮಂಗಳೂರಿನ ಗ್ರೂಪ್ ಜನರಲ್ ಮ್ಯಾನೇಜರ್ ಕೃಷ್ಣ ಹೆಗ್ಡೆ ಮಿಯಾರ್ ಅವರ ಪರವಾಗಿ ರಿಬ್ಬನ್ ಕತ್ತರಿಸುವ ಮೂಲಕ ಹೊಸ ಸೌಲಭ್ಯವನ್ನು ಉದ್ಘಾಟಿಸಿದರು. ನೆರೆದ ಅತಿಥಿಗಳು ದೀಪ ಬೆಳಗಿಸಿ, ಹಾಗೂ ವನಮಹೋತ್ಸವ ಸಾಂಕೇತಿಸಲು ಗಿಡ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.


ಗೌರವಾನ್ವಿತ ಅತಿಥಿಗಳಾಗಿ ಮಂಗಳೂರಿನ ರಚನಾ ಕ್ಯಾಥೊಲಿಕ್ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿಯ ಜಾನ್ ಬಿ. ಮೊಂತೆರೊ, ಉದ್ಯಾವರ ಮಾಡ ಅರಸು ಮಂಜಿಷ್ಣಾರ್ ಕ್ಷೇತ್ರದ ಪೂಜ್ಯ ಶ್ರೀ ರಾಜ ಬಲ್ಚಡ, ಸ್ನೇಹಾಲಯದ ಚಾಪ್ಲಿನ್ ರೆವರೆಂಡ್ ಫಾದರ್ ಸಿರಿಲ್ ಡಿ'ಸೋಜಾ, ಮಂಗಳೂರಿನ ಪ್ರೇರಣಾ ಭಾಷಣಕಾರರಾದ ರಫೀಕ್ ಮಾಸ್ಟರ್ ಭಾಗವಹಿಸಿದ್ದರು.


ಸ್ನೇಹಾಲಯದ ಸ್ಥಾಪಕ ಮತ್ತು ಕಾರ್ಯನಿರ್ವಾಹಕ ನಿರ್ದೇಶಕ ಬ್ರದರ್ ಜೋಸೆಫ್ ಕ್ರಾಸ್ತಾ ಅವರು ಅತಿಥಿಗಳನ್ನು ಹೃತ್ಪೂರ್ವಕವಾಗಿ ಸ್ವಾಗತಿಸಿದರು ಮತ್ತು ಸಂಸ್ಥೆಯ ಧ್ಯೇಯದ ಆಶಯ ವ್ಯಕ್ತ ಪಡಿಸಿದರು.


ಸ್ನೇಹಾಲಯವನ್ನು ವ್ಯಸನದಿಂದ ಮುಕ್ತಿ ಬಯಸುವವರಿಗೆ ಒಂದು ಪವಿತ್ರ ಸ್ಥಳವನ್ನಾಗಿ ರೂಪಿಸಿದ ಸಮರ್ಪಣೆಯನ್ನು ಅವರ ಮಾತುಗಳು ಪ್ರತಿಧ್ವನಿಸಿದವು.


ಕಾರ್ಯಕ್ರಮವನ್ನು ಸೊಗಸಾಗಿ ಜಿಯೋ ಡಿಸಿಲ್ವಾ ಅವರು ನಿರೂಪಿಸಿದರು. ಶ್ರೀಮತಿ ಒಲಿವಿಯಾ ಕ್ರಾಸ್ತಾ ಸ್ನೇಹಾಲಯದ ಕಾರ್ಯದರ್ಶಿಗಳು ಅತಿಥಿಗಳಿಗೆ, ವಿಶೇಷವಾಗಿ MRPL ಮಂಗಳೂರು ಇವರಿಗೆ ಮತ್ತು ಈ ಕನಸನ್ನು ನನಸಾಗಿಸಲು ಬೆಂಬಲ ನೀಡಿದ ಎಲ್ಲರಿಗೂ ಅಂತರಾಳದ ಕೃತಜ್ಞತೆ ವ್ಯಕ್ತಪಡಿಸಿದರು.


ಜೀವನ ಪರಿವರ್ತನೆಗೆ ಸ್ನೇಹಾಲಯದ ಅಚಲ ಬದ್ಧತೆಯನ್ನು ಅತಿಥಿಗಳು ಶ್ಲಾಘಿಸಿದರು, ಹೊಸ ಟೆರೇಸ್ ಜಾಗವು ಸೃಜನಶೀಲತೆ ಮತ್ತು ಅಭಿವ್ಯಕ್ತಿಯ ಮೂಲಕ ಗುಣಪಡಿಸುವಲ್ಲಿ ಹೇಗೆ ಪ್ರಮುಖ ಪಾತ್ರ ವಹಿಸುತ್ತದೆ ಎಂಬುದನ್ನು ಒತ್ತಿ ಹೇಳಿದರು. ಅವರ ಹೃತ್ಪೂರ್ವಕ ಸಂದೇಶಗಳು ಸಹಾನುಭೂತಿಯ ಸೇವೆ ಮತ್ತು ಜವಾಬ್ದಾರಿಯುತ ಕಾರ್ಪೊರೇಟ್ ಸಂಸ್ಥೆಗಳು ಇಲ್ಲಿ ಸ್ವರ್ಗವನ್ನು ರೂಪಿಸಬಹುದು ಎಂಬ ಪ್ರಭಾವದ ಸಂದೇಶವನ್ನು ಸಾರಿದವು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top