ಅಡ್ಯನಡ್ಕ: ಇಲ್ಲಿನ ಜನತಾ ಪ್ರೌಢಶಾಲೆಯಲ್ಲಿ ಇಂದು (ಜೂ.21) ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು. ಮುಖ್ಯೋಪಾಧ್ಯಾಯರಾದ ಟಿ. ಆರ್. ನಾಯ್ಕ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಕನ್ನಡ ಅಧ್ಯಾಪಕರು ಹಾಗೂ ಆಯುಷ್ ಇಲಾಖೆಯ ಪ್ರಮಾಣಿಕೃತ ಯೋಗ ತರಬೇತುದಾರ ಶಿವಕುಮಾರ್ ಸಾಯ ಅವರು ವಿದ್ಯಾರ್ಥಿಗಳಿಗೆ ಯೋಗಾಸನದ ಪ್ರಯೋಜನಗಳ ಬಗ್ಗೆ ಮಾಹಿತಿ- ಮಾರ್ಗದರ್ಶನ ನೀಡಿದರು. ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ ನಡೆಯಿತು. ಎಲ್ಲಾ ಶಿಕ್ಷಕರು ಕಾರ್ಯಕ್ರಮ ಸಂಘಟನೆಯಲ್ಲಿ ಸಹಕರಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ