ಮಂಗಳೂರು: ನಗರದ ಕೆನರಾ ಬ್ಯಾಂಕ್ ವೃತ್ತ ಕಚೇರಿಯಲ್ಲಿ ವಿಶ್ವ ಯೋಗ ದಿನಾಚರಣೆ ಆಯೋಜಿಸಲಾಗಿತ್ತು. ಬ್ಯಾಂಕ್ ಮಹಾ ಪ್ರಬಂಧಕ ಮಂಜುನಾಥ್ ಸಿಂಘಯ್ ಮುಖ್ಯ ಅತಿಥಿಯಾಗಿದ್ದರು.
ಬಳಿಕ ಮಾತನಾಡಿದ ಅವರು, ಯೋಗ ಅಭ್ಯಾಸದ ಮೂಲಕ ಉತ್ತಮ ಅರೋಗ್ಯ ಕಾಪಾಡಿಕೊಳ್ಳಬಹು ದಾಗಿದೆ. ಮಾನಸಿಕ ಹಾಗೂ ದೈಹಿಕ ಅರೋಗ್ಯಕ್ಕೂ ಇದು ಸಹಕಾರಿ ಆಗಲಿದೆ ಎಂದು ಹೇಳಿದರು.
ಬ್ಯಾಂಕ್ ಡಿಜಿಎಂ ಶೈಲೇಂದ್ರನಾಥ್ ಶೀತ್, ಸಹಾಯಕ ಮಹಾ ಪ್ರಬಂಧಕರಾದ ತರುಣ್ ಕುಮಾರ್, ಮಹೇಶ್ ಪ್ರಕಾಶ್, ವಿಭಾಗಿಯ ಪ್ರಬಂಧಕ ವನಜ ಪ್ರಸಾದ್, ಮಾರ್ಕೆಟಿಂಗ್ ಮ್ಯಾನೇಜರ್ ವಿನೋದ್ ತಹಲ್ಯಾಣಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ