ಉಡುಪಿ: ಹೊಸ ಮಾರಿಗುಡಿ ದೇವಸ್ಥಾನ ಕಾಪು ಹಾಗೂ ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ (ರಿ.) ಇವರ ವತಿಯಿಂದ ಇಂದು (ಜೂ.17) ನಡೆದ ಶ್ರೀ ಮಾತಾ ಸಭಾಭವನ ಉದ್ಘಾಟನೆ, ಮಹಾಮಾತೆ ಮಾರಿಯಮ್ಮ ಗ್ರಂಥ ಬಿಡುಗಡೆ ಹಾಗೂ ಘಂಟಾನಾದ ಸೇವಾ ಚಾಲನೆ ಪ್ರಯುಕ್ತ ಶ್ರೀ ಮಾತಾ ಸುವರ್ಣ ಪುಷ್ಪಾಂಜಲಿ ಸೇವೆ ನಡೆಯಿತು.
ಈ ಸಂದರ್ಭದಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಉಡುಪಿಯ ನಿಕಟಪೂರ್ವ ಶಾಸಕರು ಹಾಗೂ ನವದುರ್ಗಾ ಲೇಖನ ಸಮಿತಿಯ ಅಧ್ಯಕ್ಷ ಕೆ ರಘುಪತಿ ಭಟ್ ಅವರು ಭಾಗವಹಿಸಿದರು. ಈ ಕಾರ್ಯಕ್ರಮದಲ್ಲಿ ದೇವಸ್ಥಾನದ ಸಮಿತಿಯ ವತಿಯಿಂದ ಕೆ ರಘುಪತಿ ಭಟ್ ಅವರನ್ನು ಸನ್ಮಾನಿಸಲಾಯಿತು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ