ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ 'ನಗಬೇಕು ಆಗಾಗ ಬದುಕಿನೊಳಗೆ' ಎಂಬ ವಿಶೇಷವಾದ ತರಬೇತಿ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ನೆಲ್ಯಾಡಿ ಸಂತ ಜಾರ್ಜ್ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪುರಸ್ಕೃತ, ಕಲಾರತ್ನ ವಿಶ್ವನಾಥ ಶೆಟ್ಟಿ ಇವರು ತರಬೇತಿ ಕಾರ್ಯಕ್ರಮವನ್ನು ಸಂಗೀತ ಸಾಹಿತ್ಯದ ಮೂಲಕ ಹಲವು ನಿದರ್ಶನಗಳೊಂದಿಗೆ ನಡೆಸಿಕೊಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಸಂತೋಷ್ ಸಲ್ಡಾನ ಅವರು ಮಾತನಾಡುತ್ತಾ, ನಿರಂತರ ಕಾರ್ಯ ಒತ್ತಡದಿಂದಾಗಿ ನಮ್ಮ ಬದುಕಿನಲ್ಲಿ ನಗು ಮಾಯವಾಗುತ್ತಿದೆ ಮತ್ತು ಮಾನವೀಯ ಮೌಲ್ಯಗಳು ಕಡಿಮೆಯಾಗುತ್ತಿರುವ ಈ ಸಂದರ್ಭದಲ್ಲಿ ಇಂತಹ ತರಬೇತಿಗಳು ವಿದ್ಯಾರ್ಥಿಗಳ ಬದುಕಿನಲ್ಲಿ ಪುನಶ್ಚೇತನ ಉಂಟುಮಾಡುತ್ತದೆ ಎಂದು ಹೇಳಿದರು.
ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿ ಗಾಯನ ತಮ್ಮ ಅನಿಸಿಕೆ ತಿಳಿಸಿ, ಪ್ರಶಿಕ್ಷಣಾರ್ಥಿ ಸಾಯಿಧೃತಿ ಹಿನ್ನಲೆ ಸಂಗೀತ ಕೀಬೋರ್ಡ್ ನುಡಿಸಿ, ಸುಬ್ರಹ್ಮಣ್ಯ ರವರು ತಾಂತ್ರಿಕ ಸಹಾಯಕರಾಗಿ ಸಹಕರಿಸಿದರು. ವೇದಿಕೆಯಲ್ಲಿ ವಿದ್ಯಾರ್ಥಿ ನಾಯಕಿ ವೀಕ್ಷಾದೀಪ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಬಿ.ಎಡ್. ಕಾಲೇಜಿನ ಎಲ್ಲಾ ಉಪನ್ಯಾಸಕ ವೃಂದ ಮತ್ತು ಪ್ರಥಮ ಹಾಗೂ ದ್ವಿತೀಯ ಬಿ.ಇಡಿ. ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು. ಪ್ರಥಮ ಬಿ.ಇಡಿ. ಪ್ರಶಿಕ್ಷಣಾರ್ಥಿಗಳಾದ ಶ್ವೇತಾ ಸ್ವಾಗತಿಸಿ, ಸ್ವಾತಿ ವಂದಿಸಿ, ವೈಷ್ಣವಿ ಕಾಯಕ್ರಮವನ್ನು ನಿರೂಪಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ