ಉಜಿರೆ: ಎನ್‌ಎಸ್‌ಎಸ್ ಸ್ವಯಂ ಸೇವಕರಿಗೆ ಜೀವನ ಕೌಶಲ್ಯ ತರಬೇತಿ

Upayuktha
0


ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ನಿಮ್ಹಾನ್ಸ್, ಬೆಂಗಳೂರು ಇವರ ಸಹಯೋಗದಲ್ಲಿ ಎನ್ ಎಸ್ ಎಸ್ ಸ್ವಯಂ ಸೇವಕರಿಗೆ "ಜೀವನ ಕೌಶಲ್ಯ ತರಬೇತಿ" ಕಾರ್ಯಕ್ರಮ ಆಯೋಜಿಸಲಾಗಿತ್ತು.


ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ತರಬೇತುದಾರ ಶ್ರೀಕಾಂತ್ ಪೂಜಾರಿ ಅವರು ಹಾಗೂ ಜೀವನ ಕೌಶಲ್ಯ ತರಬೇತುದಾರರು ಮತ್ತು ಕಾಲೇಜಿನ ಎನ್‌ಎಸ್‌ಎಸ್ ಯೋಜನಾಧಿಕಾರಿ ಮಹೇಶ್ ಕುಮಾರ್ ಶೆಟ್ಟಿ, ಇವರು ಜೀವನ ನಿರ್ವಹಣೆ, ಸವಾಲುಗಳನ್ನು ಎದುರಿಸುವ ಕುರಿತು ತರಬೇತಿ ನೀಡಿದರು.


ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಪ್ರಮೋದ್ ಕುಮಾರ್ ರವರು "ಒಬ್ಬ ವ್ಯಕ್ತಿಯಲ್ಲಿ ಜೀವನ ಕೌಶಲ್ಯ ಬಹಳ ಅವಶ್ಯಕ. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿ ಕೂಡ ವಿದ್ಯಾರ್ಥಿ ದೆಸೆಯಲ್ಲಿಯೇ ಜೀವನದ ಸವಾಲುಗಳನ್ನು ಎದುರಿಸಿ ಬದುಕುವ ಕೌಶಲ್ಯ ಪಡೆದುಕೊಳ್ಳಬೇಕು" ಎಂದು ಹೇಳಿದರು.



ವೇದಿಕೆಯಲ್ಲಿ ಉಪ ಪ್ರಾಂಶುಪಾಲ ರಾಜೇಶ್ ಬಿ, ಯೋಜನಾಧಿಕಾರಿ ವಿಶ್ವನಾಥ್ ಎಸ್ ಉಪಸ್ಥಿತರಿದ್ದರು. ಸ್ವಯಂ ಸೇವಕಿ ಸುಪೇಕ್ಷಾ ನಿರೂಪಿಸಿ, ಸ್ವಯಂ ಸೇವಕ ವಿನೋದ್ ಸ್ವಾಗತಿಸಿ ಸ್ವಯಂ ಸೇವಕಿ ದೀಪ್ತಿ ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top