ಮಂಗಳೂರು: ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಹತ್ತು ಸಮಸ್ತರು, ಸಾರ್ವಜನಿಕ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಜೂನ್ 9, ಸೋಮವಾರದಂದು ಬೆಳಿಗ್ಗೆ 9.30 ಗಂಟೆಗೆ ಲೋಕಕಲ್ಯಾಣಾರ್ಥ, ಸಾಮೂಹಿಕ ಪ್ರಾರ್ಥನೆ, ಸೀಯಾಳಾಭಿಷೇಕ ಆಯೋಜಿಸಲಾಗಿದೆ.
ತಂತ್ರಿಗಳು, ಅರ್ಚಕರು ಮತ್ತು ಸಿಬ್ಬಂದಿಗಳು, ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಎ.ಜೆ. ಶೆಟ್ಟಿ ಮತ್ತು ವ್ಯವಸ್ಥಾಪನಾ ಸಮಿತಿಯ ಸದಸ್ಯರು, ಆಡಳಿತಾಧಿಕಾರಿಗಳು, ಹತ್ತು ಸಮಸ್ತರು ಮತ್ತು ಜನ ಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಅಭಿಷೇಕಕ್ಕೆ ಬೇಕಾಗುವ ಸೀಯಾಳವನ್ನು ಮುಂಚಿತವಾಗಿ ದೇವಳಕ್ಕೆ ತಂದೊಪ್ಪಿಸಬಹುದು ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಂಪರ್ಕ: 9845083736.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ