ಮಂಗಳೂರು: ಗಿಡಗಳ ಸಂರಕ್ಷಣೆಯ ಬಗ್ಗೆ ಸಾಮೂಹಿಕ ಜಾಗೃತಿ ಅಗತ್ಯವಿದೆ ಎಂದು ಮಂಗಳೂರು ವಲಯ ಅರಣ್ಯ ಅಧಿಕಾರಿ ರಾಜೇಶ್ ತಿಳಿಸಿದರು.
ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮಾಚರಣೆಯ ಅಂಗವಾಗಿ ಅರಣ್ಯ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಸುರತ್ಕಲ್ ಕೋಡಿಕೆರೆ (ಎಸ್ಟಿಪಿ)ಯಲ್ಲಿ ವನಮಹೋತ್ಸವ ಹಾಗೂ 50 ಗಿಡಗಳನ್ನು ನೆಡುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಜಾಗತಿಕ ತಾಪಮಾನ ಏರಿಕೆ, ಹವಾಮಾನದ ವೈಪರೀತ್ಯಗಳು ಸೇರಿದಂತೆ ಪರಿಸರದಲ್ಲಿನ ಸವಾಲುಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಲ್ಲಿ ಹಾಗೂ ಸಮಾಜದಲ್ಲಿ ಸಾಮಾಜಿಕವಾಗಿ ಜಾಗೃತಿ ಮೂಡಿಸ ಬೇಕಾಗಿದೆ. ಮಂಗಳೂರು ನಗರದಲ್ಲಿ 25 ಸಾವಿರ ಗಿಡಗಳನ್ನು ಸಾರ್ವಜನಿಕರಿಗೆ ವಿತರಿಸಲಾಗಿದೆ ಮತ್ತು ಈ ಗಿಡಗಳನ್ನು ನೆಟ್ಟು ಸಂರಕ್ಷಣೆಯ ನಿಗಾವಹಿಸುವ ಬಗ್ಗೆ ಮಾಹಿತಿ ಸಂಗ್ರಹಿಸ ಲಾಗುತ್ತಿದೆ. ಈಗಾಗಲೇ ಸುಮಾರು 9000 ಗಿಡಗಳನ್ನು ಅರಣ್ಯ ಇಲಾಖೆ ಯವತಿಯಿಂದ ನೆಡಲಾಗಿದೆ. ಈ ನಿಟ್ಟಿನಲ್ಲಿ ಸಾಮೂಹಿಕ ಸಹಭಾಗಿತ್ವ ದ ಅಗತ್ಯವಿದೆ ಎಂದು ರಾಜೇಶ್ ಹೇಳಿದರು.
ಸಮಾರಂಭದಲ್ಲಿ ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಕರ್ನಾಟಕ ರಾಜ್ಯ ಕಾರ್ಯ ನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ಜಗನ್ನಾಥ ಶೆಟ್ಟಿ ಬಾಳ, ಇಬ್ರಾಹಿಂ ಅಡ್ಕಸ್ಥಳ, ಸುರತ್ಕಲ್ ಅರಣ್ಯವಲಯದ ಉಪ ಅರಣ್ಯಾಧಿಕಾರಿ ಶ್ರವಣ್ ಕುಮಾರ್, ಸುರತ್ಕಲ್ ಬೀಟ್ ಅರಣ್ಯ ಅಧಿಕಾರಿ ಗಂಗಾಧರ್, ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಉಪಾಧ್ಯಕ್ಷ ಭಾಸ್ಕರ ರೈಕಟ್ಟಾ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್, ಕಾರ್ಯಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ, ಕೋಡಿಕೆರೆ ಎಸ್ ಟಿ ಪಿ ಗುತ್ತಿಗೆದಾರ ಶಾಂತರಾಜು ಮೊದಲಾದವರು ಉಪಸ್ಥಿತರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ