ಮೂಡುಬಿದಿರೆ: ಮುಗೇರ ಸಮಾಜದ ವಿಶೇಷ ಪೂಜೆಯಲ್ಲಿ ಶಾಸಕ ಡಾ. ಭರತ್ ಶೆಟ್ಟಿ ಭಾಗಿ

Upayuktha
0



ಮೂಡುಬಿದಿರೆ: ಸಮಾನ ಮನಸ್ಕ ಮುಗೇರ ಬಂಧುಗಳು ಮತ್ತು ಶ್ರೀ ಬ್ರಹ್ಮ ಮುಗೇರ ದೈವಸ್ಥಾನಗಳ ಆಶ್ರಯದಲ್ಲಿ ಮುಗೇರ ಸಮಾಜದ ಸಮಗ್ರ ಅಭಿವೃದ್ಧಿ, ಏಕತೆಗಾಗಿ ಶ್ರೀ ಹನುಮಾನ್ ದೇವಸ್ಥಾನ ಮೂಡುಬಿದಿರೆ ಮತ್ತು ಶ್ರೀ ಬ್ರಹ್ಮ ಮುಗೇರ ಮಹಾಕಾಳಿ ದೈವಸ್ಥಾನ, ದೇರಾಡಿ ಮೂಡುಬಿದಿರೆ ಇಲ್ಲಿ ನಡೆದ ಸಾಮೂಹಿಕ ವಿಶೇಷ ಪೂಜೆ, ಮಹಾಪ್ರಸಾದದ ಭವ್ಯ ಮೆರವಣಿಗೆ ಮತ್ತು `ಚಿಂತನ ಮಂಥನ- 2025´ ಕಾರ್ಯಕ್ರಮದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಭಾಗವಹಿಸಿದರು.


ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, ಸಮಾಜದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ಶಿಕ್ಷಣ ದೊರಕಬೇಕು, ಆಗ ಮಾತ್ರ ನಮ್ಮೆಲ್ಲರ ಅಭಿವೃದ್ಧಿ ಸಾಧ್ಯ ಅದನ್ನೇ ಸಂವಿಧಾನ ಶಿಲ್ಪಿ ಡಾ| ಬಿ. ಆರ್ ಅಂಬೇಡ್ಕರ್ ಹೇಳಿದ್ದು. ಶಿಕ್ಷಣದೊಂದಿಗೆ ಸಾಧನೆ ಮಾಡಿ ಆಕಾಶದೆತ್ತರಕ್ಕೆ ಬೆಳೆಯಬೇಕು ಆದರೆ ನಮ್ಮ ಮೂಲ ಸಂಸ್ಕೃತಿಯನ್ನು ಮರೆಯಬಾರದು ಎಂದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top