ಹಿಂದೂ ಸಂಘಟನೆಗಳ ಸಂಘಟಿತ ಪ್ರಯತ್ನಕ್ಕೆ ಸಂದ ಜಯ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಜರಂಗದಳದ ಗೋರಕ್ಷಾ ಪ್ರಮುಖರಾದ ಸುಹಾಸ್ ಶೆಟ್ಟಿಯವರ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳವು ವಹಿಸಿಕೊಂಡಿರುವುದನ್ನು ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಸ್ವಾಗತಿಸಿದೆ.
ಸಮಸ್ತ ಹಿಂದೂಪರ ಸಂಘಟನೆಗಳ ಒಕ್ಕೂಟವಾದ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯು ಈ ಪ್ರಕರಣದಲ್ಲಿ ರಾಜ್ಯವ್ಯಾಪಿ ಆಂದೋಲನ ಮಾಡಿ, ಈ ಹತ್ಯೆಯ ಹಿಂದೆ ನಿಷೇಧಿತ ಸಂಘಟನೆಯಾದ ಪಾಪ್ಯುಲರ್ ಫ್ರಂಟ್ ಆಪ್ ಇಂಡಿಯಾ (ಪಿಎಫ್ಐ) ಸಂಘಟನೆಯ ಸದಸ್ಯರ ಕೈವಾಡವಿರುವ ಶಂಕೆಯಿದೆ, ಹಾಗಾಗಿ ಇದನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕು ಎಂದು ಒತ್ತಾಯಿಸಿತ್ತು.
ಈ ಬೇಡಿಕೆಯನ್ನು ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ಅಡಿಯಲ್ಲಿ ಎಲ್ಲ ಸಂಘಟನೆಗಳ ಜೊತೆಗೆ ಸೇರಿ ಬೆಂಗಳೂರು, ಮಂಗಳೂರು, ಹುಬ್ಬಳ್ಳಿ, ಶಿವಮೊಗ್ಗ, ಕಾರವಾರ ಮತ್ತು ವಿಜಯಪುರ ಮುಂತಾದ ಜಿಲ್ಲಾ ಕೇಂದ್ರಗಳಲ್ಲಿ ಆಂದೋಲನ ಮಾಡಿ, ಮನವಿ ರಾಜ್ಯಪಾಲರಿಗೆ ಸಲ್ಲಿಸಿತ್ತು.
ಈಗ ರಾಷ್ಟ್ರೀಯ ತನಿಖಾ ದಳವು ಈ ಪ್ರಕರಣವನ್ನು ಕೈಗೆ ತೆಗೆದುಕೊಂಡಿರುವುದು ಅತ್ಯಂತ ಶ್ಲಾಘನೀಯ. ಇದು ಸಮಸ್ತ ಹಿಂದೂಪರ ಸಂಘಟನೆಗಳ ಸಂಘಟಿತ ಹೊರಾಟಕ್ಕೆ ಸಿಕ್ಕ ಮೊದಲ ವಿಜಯವಾಗಿದೆ. ರಾಷ್ಟ್ರೀಯ ತನಿಖಾ ದಳವು ಈ ಪ್ರಕರಣವನ್ನು ಗಂಭೀರವಾಗಿ ತನಿಖೆ ಮಾಡಿ, ಇದರ ಹಿಂದೆ ಇರುವ ಅಪರಾಧಿಗಳನ್ನು ಬಂಧನ ಮಾಡಿ ಸುಹಾಸ್ ಶೆಟ್ಟಿ ಹಂತಕರಿಗೆ ಕಠಿಣ ಶಿಕ್ಷೆಯಾಗುವಂತೆ ಮಾಡಬೇಕೆಂದು ಆಗ್ರಹ ಮಾಡುತ್ತದೆ. ಅದರಿಂದಲೇ ಕರಾವಳಿ ಜಿಲ್ಲೆಗಳಲ್ಲಿ ನಿಜವಾಗಿ ಕೋಮುಸೌಹಾರ್ದವು ಉಳಿಯುವುದು ಮತ್ತು ಹಿಂದೂ ನಾಯಕರ ರಕ್ಷಣೆಯಾಗುವುದು ಎಂಬ ಭರವಸೆ ಇದೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ