ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಗಳು: ಜೂ.15ರಂದು ಹಲಸು ಮೇಳ- ಆಹಾರೋತ್ಸವ

Upayuktha
0


ಮಂಗಳೂರು: ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಗಳ ಆವರಣದಲ್ಲಿ ಹಲಸು ಮೇಳ- ಆಹಾರೋತ್ಸವ ಜೂ.15ರಂದು ಬೆಳಗ್ಗೆ ಗಂಟೆ 8 ರಿಂದ ಸಂಜೆ ಗಂಟೆ 6ರ ವರೆಗೆ ನಡೆಯಲಿದೆ. ಶ್ರೀರಾಮಚಂದ್ರಾಪುರ ಮಠದ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಸಂಪೂರ್ಣ ಆಶೀರ್ವಾದ, ಮಾರ್ಗದರ್ಶನದೊಂದಿಗೆ ಈ ಮೇಳ ನಡೆಯಲಿದ್ದು ಕೃಷಿಕರು ಬೆಳೆಸುವ, ಬಳಸುವ ಆಹಾರ ವಸ್ತುಗಳನ್ನು ನಗರದ ಜನತೆಗೆ ತಲುಪಿಸುವ ಮತ್ತು ಸಂಘಟನೆಯನ್ನು ಬಲಿಷ್ಠಗೊಳಿಸುವ ಉದ್ದೇಶದಿಂದ ಹಲಸು ಮೇಳ- ಆಹಾರೋತ್ಸವ ಏರ್ಪಡಿಸಲಾಗಿದೆ. ಮಾತೆಯರು, ಮಹನೀಯರು ತಯಾರಿಸಿದ ಅತ್ಯುತ್ತಮ ಆಹಾರವನ್ನು ಆರೋಗ್ಯಪೂರ್ಣ ಜೀವನಕ್ಕಾಗಿ ಪಡೆದುಕೊಳ್ಳಬಹುದಾಗಿದೆ.


ಮಂಗಳೂರು ಹವ್ಯಕ ಮಂಡಲದ ಕಾರ್ಯಕರ್ತರು ಸೇವಾ ರೂಪದಲ್ಲಿ ಈ ಹಲಸು ಮೇಳ ಆಹಾರೋತ್ಸವವನ್ನು ಆಯೋಜಿಸುತ್ತಿದೆ. ಈ ಮೇಳದಲ್ಲಿ ಹಲಸು, ಮಾವು, ಬಾಳೆಯ ವಿವಿಧ ರೀತಿಯ ತಿಂಡಿಗಳು ಸಿಗಲಿವೆ. ಹಲಸಿನ ಹಣ್ಣಿನ ಪಾಯಸ, ಬೆರಟಿ ಪಾಯಸ, ಹಲಸಿನ ಬೀಜ ಪಾಯಸ, ಹಲಸಿನ ಕಾಯಿ ದೋಸೆ/ಶುಂಠಿ ಚಟ್ನಿ, ಹಲಸಿನ ಹಣ್ಣಿನ ದೋಸೆ, ಹಲಸಿನಹಣ್ಣಿನ ಜಿಲೇಬಿ, ಸೊಳೆ ರೊಟ್ಟಿ, ಗುಜ್ಜೆ ಮಂಚೂರಿ, ಹಲಸಿನ ಬೀಜದ ಚಟ್ಟಂಬಡೆ, ಹಲಸಿನ ಕಾಯಿ ಸೋಂಟೆ, ಹಲಸಿನ ಕಾಯಿ ಬೋಂಡ, ಬಾಳೆಕಾಯಿ ಚಿಪ್ಸ್, ಹಲಸಿನ ಕಾಯಿ ಹಪ್ಪಳ, ಹಲಸಿನ ಹಣ್ಣಿನ ಹಪ್ಪಳ, ಬಾಳೆಹಣ್ಣಿನ  ಹಲ್ವ, ಹಲಸಿನ ಹಣ್ಣಿನ ಹಲ್ವ, ಹಲಸಿನ ಬೀಜದ ಅದ್ದಿಹಿಟ್ಟು, ಮಾವಿನ ಹಣ್ಣಿನ ಮಾಂಬಳ, ಹಲಸಿನ ಹಣ್ಣಿನ ಸೊಳೆ, ಹಲಸಿನ ಕಾಯಿ ಸೊಳೆ, ಗುಜ್ಜೆ ಪಲಾವ್, ಹಲಸಿನ ಹಣ್ಣು ಕೊಟ್ಟಿಗೆ, ಹಲಸಿನ ಹಣ್ಣು ಗೆಣಸಲೆ, ಬಾಳೆಕಾಯಿ ದೋಸೆ, ಹಲಸಿನ ಕಾಯಿ ಪೋಡಿ, ಹಲಸಿನ ಹಣ್ಣಿನ ಬನ್ಸ್, ಹೋಳಿಗೆ, ಹಲಸಿನ ಹಣ್ಣಿನ ಗುಳಿಅಪ್ಪ, ಚಕ್ಕುಲಿ, ಹಲಸಿನ ಬೀಜದ ಸೂಪ್, ಹಲಸಿನಕಾಯಿ ಪಲಾವ್, ಅತಿರಸ, ಸಕ್ಕರೆ ಬೆರಟಿ, ಕಾಫಿ, ಟೀ, ಕಷಾಯ, ಮಾವಿನಹಣ್ಣು, ಮಾವಿನಹಣ್ಣಿನ ರಸಾಯನ, ಮಸಾಲೆ ಮಜ್ಜಿಗೆ ನೀರು ಪಡೆಯಬಹುದು ಎಂದು ಸಂಘಟಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top