ಸತತ ಪರಿಶ್ರಮವಿದ್ದರೆ ಸಿ.ಎ. ಪರೀಕ್ಷೆ ತೇರ್ಗಡೆ ಸಾಧ್ಯ: ಅತೀತ ಬ್ರಹ್ಮ
ಪುತ್ತೂರು: ಚಾರ್ಟರ್ಡ್ ಅಕೌಂಟ್ಸ್ ಪರೀಕ್ಷೆಗಳನ್ನು ತೇರ್ಗಡೆಯಾಗುವುದು ಕಷ್ಟ. ಆದರೆ ಸತತ ಪರಿಶ್ರಮದ ಮೂಲಕ ಯಶಸ್ಸನ್ನು ಗಳಿಸಿದರೆ ಬಂಡವಾಳ ರಹಿತವಾಗಿ ವೃತ್ತಿ ಪ್ರಾರಂಭಿಸುವ ಒಂದು ಸದವಕಾಶ ಲಭ್ಯವಾಗುತ್ತದೆ. ಇದಕ್ಕೆ ಬೇಕಾಗಿರುವುದು ಬುದ್ಧಿವಂತಿಕೆ ಮಾತ್ರ ಎಂದು ಸಿ.ಎ. ಅತೀತ ಬ್ರಹ್ಮ ಹೇಳಿದರು.
ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯಲ್ಲಿನ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ವಾಣಿಜ್ಯ ಶಾಸ್ತç ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ದಿಗ್ದರ್ಶಕ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಂಗಳವಾರ ಮಾತನಾಡಿದರು.
ಸಿಎ ಯಶಸ್ಸನ್ನು ನಮ್ಮದಾಗಿಸಿಕೊಳ್ಳಬೇಕಾದರೆ ಪ್ರಧಾನವಾಗಿ ಸಿ.ಎ. ಫೌಂಡೇಶನ್, ಇಂಟರ್, ಹಾಗೂ ಫೈನಲ್ ಎಂಬ ಮೂರು ಹಂತದ ಪರೀಕ್ಷೆಗಳನ್ನು ತೇರ್ಗಡೆಯಾಗಬೇಕು. ಇದಕ್ಕೆ ಕಠಿಣ ಪರಿಶ್ರಮ, ನಿಯತ್ತು, ಶಿಸ್ತು ಹಾಗೂ ತಾಳ್ಮೆ ತುಂಬಾ ಅವಶ್ಯಕ ಎಂದರಲ್ಲದೆ ವಿದ್ಯಾರ್ಥಿಗಳ ಸಂಶಯಗಳನ್ನು ನಿವಾರಿಸಿದರು. ಹಿರಿಯ ಉಪನ್ಯಾಸಕಿ ಪುಷ್ಪಲತಾ ಪಿ. ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರಾದ ಅನನ್ಯ, ಶ್ರೀದೇವಿ, ಸಮನ್ವಿಕಾ ಪ್ರಾರ್ಥಿಸಿದರು. ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಶ್ರೀಕೃಷ್ಣ ನಟ್ಟೋಜ ಸ್ವಾಗತಿಸಿ ವಿದ್ಯಾರ್ಥಿನಿ ಅನ್ಸಿಕಾ ಎಸ್.ಶೆಟ್ಟಿ ವಂದಿಸಿದರು. ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಅಕ್ಷತಾ ಸಂಪನ್ಮೂಲ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಂಖ್ಯಾಶಾಸ್ತ್ರ ಉಪನ್ಯಾಸಕಿ ಆಶಾದೇವಿ ಹಾಗೂ ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳು ಸಭೆಯಲ್ಲಿ ಹಾಜರಿದ್ದರು. ಪ್ರಯೋಗಾಲಯ ಸಹಾಯಕರಾದ ಮುರಳಿ ಮೋಹನ ಸಹಕರಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ