ವಿವೇಕಾನಂದ ವಸತಿನಿಲಯಗಳಲ್ಲಿ ಪದವಿಪೂರ್ವ ವಿದ್ಯಾರ್ಥಿಗಳಿಗೆ ಯೋಗ ಶಿಬಿರ ಉದ್ಘಾಟನೆ

Upayuktha
0


ಪುತ್ತೂರು: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ನೇತೃತ್ವದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜು ಹಾಗೂ ವಿವೇಕಾನಂದ ವಸತಿನಿಲಯದ ಸಹಯೋಗದೊಂದಿಗೆಸಂಸ್ಥೆಯ ತಕ್ಷಶಿಲಾ ಹಾಗೂ ಶಾರದಾ ವಸತಿ ನಿಲಯಗಳಲ್ಲಿ 21 ದಿನಗಳ ಯೋಗ ಶಿಬಿರ ಉದ್ಘಾಟನೆಗೊಂಡಿತು. 


ತಕ್ಷಶಿಲಾ ವಸತಿನಿಲಯ

ಪದವಿಪೂರ್ವ ಕಾಲೇಜಿನ ತಕ್ಷಶಿಲಾ ವಸತಿನಿಲಯದಲ್ಲಿ SPYSS ಜಿಲ್ಲಾಸಂಘಟನಾ ಪ್ರಮುಖರಾದ ಹರಿಪ್ರಸಾದ್ ದೀಪ ಬೆಳಗಿಸುವ ಮೂಲಕ ಯೋಗ ಶಿಬಿರಕ್ಕೆ ಚಾಲನೆ ನೀಡಿದರು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಿವೇಕಾನಂದ ವಸತಿನಿಲಯಗಳ ಆಡಳಿತ ಮಂಡಳಿ ಅಧ್ಯಕ್ಷರಾದ ರಮೇಶ್ ಪ್ರಭು ವಹಿಸಿದ್ದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಸಹಾಯಕ ಕಾರ್ಯನಿರ್ವಹಣಾಧಿಕಾರಿಗಳಾದ ವೆಂಕಟರಮಣ ರಾವ್ ಮಂಕುಡೆ, ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದೇವಿಚರಣ್ ರೈ ಮಲಾರಬೀಡು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. 


ಶಾರದಾ ವಸತಿನಿಲಯ

ಶಾರದಾ ವಸತಿನಿಲಯದಲ್ಲಿ ಯೋಗ ಶಿಬಿರವನ್ನು ಪುತ್ತೂರಿನSPYSS ನ ತಾಲೂಕುವರದಿಪ್ರಮುಖರಾದಲಕ್ಷ್ಮೀಕಾಂತ್ ಇವರು ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಿದರು. ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ವಸತಿ ನಿಲಯಗಳ ಆಡಳಿತ ಮಂಡಳಿಯ ಕೋಶಾಧಿಕಾರಿಗಳಾದ ಇಂದುಶೇಖರ್ ಅವರು ವಹಿಸಿದ್ದರು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಸಂಖ್ಯಾಶಾಸ್ತ್ರ ವಿಭಾಗದ ಮುಖ್ಯಸ್ಥರಾದ ದಿವ್ಯಾ ಜಿ,SPYSS ಸದಸ್ಯರಾದ ರೂಪಶ್ರೀ ಡಿ. ರೈ  ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. 


ತಕ್ಷಶಿಲಾ ಹಾಗೂ ಶಾರದಾ ವಸತಿನಿಲಯಗಳಲ್ಲಿ 21 ದಿನಗಳ ಕಾಲ ಬೆಳಗ್ಗೆ 5.15 ರಿಂದ ಈ ಶಿಬಿರ ನಡೆಯಲಿದ್ದು ಪದವಿಪೂರ್ವ ವಿಭಾಗದ ಬಾಲಕ ಹಾಗೂ ಬಾಲಕಿಯರು ಇದರ ಪ್ರಯೋಜನವನ್ನು ಪಡೆದುಕೊಳ್ಳಲಿದ್ದಾರೆ.


   ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top