ಅಡ್ಯನಡ್ಕ: ಇಲ್ಲಿನ ಜನತಾ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವು ಜೂನ್ 2ರಂದು ಜರುಗಿತು. ಶಾಲಾ ಸಂಚಾಲಕರಾದ ಡಾ. ಅಶ್ವಿನಿ ಕೃಷ್ಣಮೂರ್ತಿ ಅವರು ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಗೆ ನೂತನವಾಗಿ ದಾಖಲಾದ ವಿದ್ಯಾರ್ಥಿಗಳಿಗೆ ಅವರು 'ಜನತಾ ದರ್ಪಣ' ವಾರ್ಷಿಕ ಸಂಚಿಕೆಯನ್ನು ಹಸ್ತಾಂತರಿಸಿ ಸ್ವಾಗತ ಕೋರಿದರು.
ಅಡ್ಯನಡ್ಕ ಎಜುಕೇಶನಲ್ ಸೊಸೈಟಿ ಆಡಳಿತ ಮಂಡಳಿಯ ಕೋಶಾಧಿಕಾರಿ ಕೇಶವ ಭಟ್ ಚವರ್ಕಾಡು, ಪ್ರೌಢಶಾಲಾ ಉಸ್ತುವಾರಿ ಎ. ಗೋವಿಂದರಾಯ ಶೆಣೈ ಉಪಸ್ಥಿತರಿದ್ದು ಮಾತನಾಡಿದರು.
ಮುಖ್ಯೋಪಾಧ್ಯಾಯರಾದ ಟಿ. ಆರ್. ನಾಯ್ಕ್ ಅವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿಗಳು ಪ್ರಾರ್ಥನೆ ಹಾಡಿದರು. ಕನ್ನಡ ಅಧ್ಯಾಪಕರಾದ ಶಿವಕುಮಾರ್ ಸಾಯ ಅವರು ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿ ಕುಸುಮಾವತಿ ಅವರು ವಂದಿಸಿದರು.
ಶಾಲಾ ಪ್ರಾರಂಭೋತ್ಸವ ಪ್ರಯುಕ್ತ ಶಾಲೆಯನ್ನು ತಳಿರು ತೋರಣಗಳು, ಬಣ್ಣ ಬಣ್ಣದ ಬಲೂನ್ಗಳಿಂದ ಅಲಂಕರಿಸಲಾಗಿತ್ತು. ವಿದ್ಯಾರ್ಥಿಗಳಿಗೆ ಸಿಹಿತಿಂಡಿ ವಿತರಿಸಲಾಯಿತು. ಮಧ್ಯಾಹ್ನ ಬಿಸಿಯೂಟದೊಂದಿಗೆ ಪಾಯಸದ ಔತಣವನ್ನು ವಿದ್ಯಾರ್ಥಿಗಳಿಗೆ ಉಣಬಡಿಸಲಾಯಿತು. ಉಚಿತ ಪಠ್ಯಪುಸ್ತಕಗಳನ್ನು ಎಲ್ಲಾ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ