ವಿದ್ಯಾರ್ಥಿಗಳು ಮೊಬೈಲ್ ಬಿಟ್ಟು ಪುಸ್ತಕ ಹಿಡಿದುಕೊಳ್ಳಿ: ನಿರಂಜನ ಪ್ರಭು ಮಹಾಸ್ವಾಮಿಗಳ ಕರೆ

Upayuktha
0


ಬಳ್ಳಾರಿ: ಇಂದು ಮೊಬೈಲ್ ಹಿಡಿದುಕೊಳ್ಳುವುದು ವಿದ್ಯಾರ್ಥಿಗಳಿಗೆ ಫ್ಯಾಷನ್ ಆಗಿದೆ. ಇದರಿಂದ ಅವರ ಅಭ್ಯಾಸಕ್ಕೆ ಅಡಚಣೆ ಆಗುವುದರ ಜೊತೆಗೆ  ಆರೋಗ್ಯದ ಮೇಲೂ ದುಷ್ಪರಿಣಾಮ ಬೀರಲಿದೆ. ಕಾರಣ ಇಂದಿನ ವಿದ್ಯಾರ್ಥಿಗಳು ಮೊಬೈಲ್ ಬಿಟ್ಟು ಪುಸ್ತಕವನ್ನು ಹಿಡಿದುಕೊಳ್ಳಿ. ಆಗ ಮಾತ್ರ ನಿಮ್ಮಿಂದ ಏನಾದರೂ ಸಾಧಿಸಲು ಸಾಧ್ಯವಾಗುತ್ತದೆ ಎಂದು ಮ.ನಿ.ಪ್ರ ನಿರಂಜನ ಪ್ರಭು ಮಹಾಸ್ವಾಮಿಗಳು ಒಪ್ಪತ್ತೇಶ್ವರ ಮಠ ಕುರುಗೋಡು ಇವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.


ಅವರು ಇಂದು ನಗರದ ಹೊಸಪೇಟೆ ರಸ್ತೆಯಲ್ಲಿರುವ  ಅಲ್ಲಿಪುರ ಶ್ರೀ ಮಹದೇವ ತಾತ ಮಠದಲ್ಲಿ  ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ನೌಕರರ ಸಂಘದಿಂದ ಪದಾಧಿಕಾರಿಗಳ ಪದಗ್ರಹಣ ಮತ್ತು 10ನೇ ತರಗತಿ,  ಪಿಯುಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ  ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯವನ್ನು ವಹಿಸಿ  ಆಶೀರ್ವಚನ ನೀಡಿ ಕರೆ ನೀಡಿದರು.


ಪೋಷಕರು ತಮ್ಮ ಮಕ್ಕಳಿಗೆ ಕೇವಲ ವಿದ್ಯೆಯನ್ನು ಮಾತ್ರ ಕಲಿಸಿದರೆ ಸಾಲದು ಅವರಿಗೆ ಜೀವನದಲ್ಲಿ ಅತ್ಯಂತ ಅವಶ್ಯಕವಿರುವ  ಸಂಸ್ಕಾರವನ್ನು ಕಲಿಸಬೇಕು, ಇಂದಿನ ಯುವಕರು ಮತ್ತು ವಿದ್ಯಾರ್ಥಿಗಳು ಮೊಬೈಲ್ ಹಿಂದೆ ಬಿದ್ದು ಸಂಸ್ಕಾರವನ್ನೇ ಮರೆತಿದ್ದಾರೆ, ಮೊಬೈಲ್ ಬಿಟ್ಟು ಪುಸ್ತಕ ಹಿಡಿದುಕೊಂಡಲ್ಲಿ ಜೀವನದಲ್ಲಿ ಏನಾದರೂ ಸಾಧಿಸಲು ಸಾಧ್ಯ ಎಂದರು.


ಪ್ರತಿಭಾ ಪುರಸ್ಕಾರ ನೀಡುವುದರಿಂದ ವಿದ್ಯಾರ್ಥಿಗಳಲ್ಲಿ ಉನ್ನತ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ಸಿಕ್ಕಂತಾಗುತ್ತದೆ ಮತ್ತು ಬಡ ವಿದ್ಯಾರ್ಥಿಗಳಿಗೆ ಅಥವಾ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡುವುದರಿಂದ ಅವರ ಶಿಕ್ಷಣಕ್ಕೆ ಅನುಕೂಲವಾಗಲಿದೆ. ಇದನ್ನು ಮನಗಂಡ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಪ್ರತಿ ವರ್ಷ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಸಬೇಕೆಂದು ತೀರ್ಮಾನಿಸಲಾಗಿದೆ. ಅದರಂತೆ ಈ ವರ್ಷ ಸುಮಾರು 300 ಜನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಎಂಎಸ್ ಭದ್ರಯ್ಯ ತಿಳಿಸಿದರು. 


ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ನಂದಿಪುರ ಮಠದ ಮಹೇಶ್ವರ ಮಹಾಸ್ವಾಮಿಗಳು, ಮರಿ ಕೊಟ್ಟೂರು ದೇಶಕರು ವಿರಕ್ತಮಠ ಶ್ರೀಧರ ಗಡ್ಡೆ ಇವರುಗಳು ವಹಿಸಿಕೊಂಡಿದ್ದರು.


ಕಾರ್ಯಕ್ರಮದಲ್ಲಿ ಉದ್ಘಾಟನೆಯನ್ನು ಸೋಮಶೇಖರಯ್ಯ ರಾಜ್ಯಾಧ್ಯಕ್ಷರು ನೆರವೇರಿಸಿದರು. ಡಾಕ್ಟರ್ ಯಶವಂತ್ ಭೋಪಾಲ್, ಎಂಜಿ ಗೌಡ, ಕಣೆಕಲ್ ಮಹಾಂತೇಶ್ ದರೂರು ಶಾಂತನಗೌಡ, ಪುರಸ್ಕಾರ ಪ್ರಧಾನ ಮಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಹಾನಗರ ಪಾಲಿಕೆ ಸದಸ್ಯ ಸುರೇಖಾ ಮಲ್ಲನಗೌಡ, ಜಿಲ್ಲಾ ಪಂಚಾಯತ್ ಯೋಜನಾಧಿಕಾರಿ ವಾಗೀಶ್ ಶಿವಾಚಾರ್ಯ, ಪತ್ರಿ ಬಸಪ್ಪ ವಿಶ್ವನಾಥ್ ಹಿರೇಗೌಡ ದಂಡಿನ ಶಿವಾನಂದ ಅರವಿಂದ್ ಪಟೇಲ್ ಕೋರಿ ವಿರೂಪಾಕ್ಷಪ್ಪ ಅಲ್ಲಮ ಪ್ರಶಾಂತ್ ಸಂಗನಕಲ್ಲು ಬಸವರಾಜ್ ಮಸೀದಿಪುರ ಸಿದ್ದರಾಮನಗೌಡ ಸೇರಿದಂತೆ ಇತರರು ವೇದಿಕೆಯಲ್ಲಿದ್ದರು.


ಕಾರ್ಯಕ್ರಮದಲ್ಲಿ ಡಾ. ಎಸ್ ಮಂಜುನಾಥ್ ಕಿಷ್ಕಿಂದ ವಿಶ್ವವಿದ್ಯಾಲಯ ಇವರು ಎಸ್ ಎಲ್ ಸಿ ಪಿಯುಸಿ ನಂತರ ಮುಂದೇನು ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸವನ್ನು ನೀಡಿದರು. 


ಕಾರ್ಯಕ್ರಮದಲ್ಲಿ ಸಂಘದ ಗೌರವಾಧ್ಯಕ್ಷ ಎಚ್ಎಂ ಚನ್ನಬಸವ ಸ್ವಾಮಿ,  ಕೋಶಾಧ್ಯಕ್ಷ  ಕೋಳೂರು ವೆಂಕಟೇಶ ಗೌಡ, ಪ್ರಧಾನ ಕಾರ್ಯದರ್ಶಿ ಬಿಸಿಲಹಳ್ಳಿ ಬಸವರಾಜ್ ಸೇರಿದಂತೆ ಕಾರ್ಯಕಾರಿಣಿ ಸಮಿತಿ ಸದಸ್ಯರು ಮತ್ತು ಸಮಸ್ತ ಸಂಘದ ಸದಸ್ಯರು ಸಮಸ್ತ ವೀರಶೈವ ಲಿಂಗಾಯತ ಸಮಾಜ ಬಂಧುಗಳು ಇದ್ದರು.


ಈ ಸಂದರ್ಭದಲ್ಲಿ 300ಕ್ಕೂ ಹೆಚ್ಚು  10ನೇ ತರಗತಿ ಮತ್ತು ಪಿಯುಸಿಯಲ್ಲಿ ಶೇಕಡಾ 85 ಕ್ಕಿಂತಲೂ ಹೆಚ್ಚು ಅಂಕ ಗಳಿಸಿದ ವೀರಶೈವ ಸಮುದಾಯದ ವಿದ್ಯಾರ್ಥಿಗಳಿಗಾಗಿ ಇಂದು ಪ್ರತಿಭಾ ಪುರಸ್ಕಾರವನ್ನು ನೀಡಲಾಯಿತು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top