ಸುರತ್ಕಲ್: ಯೋಗಾಸನಗಳು ದೈಹಿಕ ಆರೋಗ್ಯದೊಂದಿಗೆ ಮಾನಸಿಕ ಕ್ಷಮತೆಗೂ ಸಹಕಾರಿ. ಭಾರತೀಯ ಮೂಲದ ಯೋಗಕಲೆಯು ಪ್ರಸ್ತುತ ಪ್ರಪಂಚದಾತ್ಯಂದ ಜನಪ್ರಿಯಗೊಂಡಿರುವುದು ಯೋಗಾಸನಗಳ ಯಶಸ್ವಿ ಪ್ರಯೋಜನಗಳಿಗೆ ಸಾಕ್ಷಿಯಾಗಿದೆ ಎಂದು ಗೋವಿಂದ ದಾಸ ಕಾಲೇಜಿನ ಆಡಳಿತಾತ್ಮಕ ನಿರ್ದೇಶಕ ಪ್ರೊ. ರಮೇಶ್ ಭಟ್ ಎಸ್.ಜಿ. ಅಭಿಪ್ರಾಯಪಟ್ಟರು. ಅವರು ಸುರತ್ಕಲ್ ಹಿಂದು ವಿದ್ಯಾದಾಯಿನೀ ಸಂಘ (ರಿ)ಯ ಆಡಳಿತಕ್ಕೊಳಪಟ್ಟ ಗೋವಿಂದ ದಾಸ ಕಾಲೇಜು, ಸುರತ್ಕಲ್ನ ಎನ್.ಸಿ.ಸಿ ಘಟಕ, ದೈಹಿಕ ಶಿಕ್ಷಣ ವಿಭಾಗ ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು ಆಯೋಜಿಸಿದ್ದ ಅಂತರಾಷ್ಟ್ರೀಯ ಯೋಗ ದಿನಾಚರಣೆ – 2025ರಲ್ಲಿ ಮಾತನಾಡಿದರು.
ಕಾಲೇಜಿನ ಪ್ರಾಚಾರ್ಯ ಪ್ರೊ. ಹರೀಶ ಆಚಾರ್ಯ ಪಿ. ಮಾತನಾಡಿ 2025ರ ಅಂತರಾಷ್ಟ್ರೀಯ ಯೋಗ ದಿನದ ಘೋಷವಾಕ್ಯ “ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ”ವನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ವಿದ್ಯಾರ್ಥಿ ಜೀವನಕ್ಕೆ ಅತಿಮುಖ್ಯವಾದ ಅಂಶಗಳಾದ ಏಕಾಗ್ರತೆ, ತಾಳ್ಮೆ, ಸಧೃಢತೆಗಳು ಯೋಗಾಸನಗಳ ಅಭ್ಯಾಸಿಸುವಿಕೆಯಿಂದ ಲಭ್ಯವಾಗುತ್ತದೆ ಎಂದರು.
ಎನ್.ಸಿ.ಸಿ ಅಧಿಕಾರಿ ಮೇಜರ್. ಡಾ. ಸುಧಾ ಯು. ಸ್ವಾಗತಿಸಿದರು. ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಅಕ್ಷತಾ ವಿ. ವಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಡಾ. ಪ್ರಶಾಂತ್ ಎಂ.ಡಿ., ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿಗಳಾದ ಡಾ. ಭಾಗ್ಯಲಕ್ಷ್ಮಿ., ಐಶೆ ಸಂಯೋಜಕ ಪ್ರೊ. ವಾಮನ ಕಾಮತ್, ಸ್ನಾತಕೋತ್ತರ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಕಾರ್ತಿಕ್ ಜೆ.ಎಸ್., ಹಿಂದು ವಿದ್ಯಾದಾಯಿನೀ ಸಂಘದ ಆಡಳಿತಾಧಿಕಾರಿ ಮೃದುಲಾ ಬಿನು, ಮತ್ತಿತರರು ಉಪಸ್ಥಿತರಿದ್ದರು.
ಅಂತರ್ ವಿ.ವಿ ಯೋಗ ಪಟು ಮೋಕ್ಷಾ ಅಮೀನ್ ವಿವಿಧ ಯೋಗಾಸನ ಭಂಗಿಗಳ ಪ್ರಾತ್ಯಕ್ಷತೆ ನೀಡಿದರು. ಇದೇ ಸಂದರ್ಭದಲ್ಲಿ 2025ರ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಮಟ್ಟದಲ್ಲಿ 4ನೇ ರ್ಯಾಂಕ್ ಗಳಿಸಿದ ಎನ್.ಸಿ.ಸಿ. ಕೆಡೆಟ್ ಮಿನ್ನಾಲ್ ಬಿನು ಅವರನ್ನು ಅಭಿನಂದಿಸಲಾಯಿತು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ